ಆ್ಯಪ್ನಗರ

ಕೇವಲ ಅಂಕಗಳಿಕೆಗೆ ಸೀಮಿತವಾಗಬೇಡಿ

ಹುಬ್ಬಳ್ಳಿ : ವಿದ್ಯಾರ್ಥಿಗಳು ಕೇವಲ ಅಂಕಗಳಿಕೆಗೆ ಮಾತ್ರ ಸೀಮಿತವಾಗದೇ ಉತ್ತಮ ಆಚಾರ-ವಿಚಾರಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಕೆ.ಎಲ್‌.ಇ. ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಶಂಕ್ರಣ್ಣ ಮುನವಳ್ಳಿ ಹೇಳಿದರು.

Vijaya Karnataka 21 Dec 2018, 5:00 am
ಹುಬ್ಬಳ್ಳಿ : ವಿದ್ಯಾರ್ಥಿಗಳು ಕೇವಲ ಅಂಕಗಳಿಕೆಗೆ ಮಾತ್ರ ಸೀಮಿತವಾಗದೇ ಉತ್ತಮ ಆಚಾರ-ವಿಚಾರಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಕೆ.ಎಲ್‌.ಇ. ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಶಂಕ್ರಣ್ಣ ಮುನವಳ್ಳಿ ಹೇಳಿದರು.
Vijaya Karnataka Web do not be limited to scoring only
ಕೇವಲ ಅಂಕಗಳಿಕೆಗೆ ಸೀಮಿತವಾಗಬೇಡಿ


ಇಲ್ಲಿನ ವಿದ್ಯಾನಗರದ ಕೆ.ಎಲ್‌.ಇ. ಶಿಕ್ಷಣ ಸಂಸ್ಥೆಯ ವಾಣಿಜ್ಯ ಮಹಾವಿದ್ಯಾಲಯದಲ್ಲಿ ನಡೆದ ಅಂತರ್‌ ಶಾಲಾ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಉತ್ತಮ ನಡೆ-ನುಡಿಯನ್ನು ಹೊಂದಿದ ವ್ಯಕ್ತಿ ಒಳ್ಳೆಯ ಪ್ರಜೆಯಾಗಲು ಸಾದ್ಯವಾಗುತ್ತದೆ. ವಿದೇಶದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವವರು ಬಹುತೇಕರು ಭಾರತೀಯರೇ ಆಗಿದ್ದಾರೆ. ಕೆಎಲ್‌ಇ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ ಅನೇಕರು ದೇಶ-ವಿದೇಶದಲ್ಲಿ ಉದೋಗ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಮುಖ್ಯ ಅತಿಥಿಯಾಗಿ ಡಾ.ಪ್ರಸಾದ್‌ ರೂಢಗಿ ಮಾತನಾಡಿ, ಇಂದು ಕಲೆ, ವಾಣಿಜ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿಯೂ ಅಪಾರ ಅವಕಾಶಗಳಿದ್ದು, ವಿದ್ಯಾರ್ಥಿಗಳು ಅವುಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಪ್ರಾಚಾರ್ಯ ಡಾ.ಎಸ್‌.ಬಿ.ಲಕ್ಕನಗೌಡರ, ಡಾ.ಎ.ಎಸ್‌.ರೊಟ್ಟಿಮಠ, ವಿದ್ಯಾರ್ಥಿ ಪ್ರತಿನಿಧಿ ಶಶಾಂಕ, ಪ್ರೊ.ಶಗುಪ್ತಾ, ಗಾಯತ್ರಿ, ನಿಖಿತಾ, ಚಿರಾಗ ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ