ಆ್ಯಪ್ನಗರ

ಕರ್ತವ್ಯ ಪಾಲಿಸುವಲ್ಲಿ ತಾರತಮ್ಯ ಬೇಡ

ಹುಬ್ಬಳ್ಳಿ : ನಾಗರಿಕತ್ವದ ಕರ್ತವ್ಯಗಳು ನಾಗರಿಕ ಸಮಾಜದ ಅವಿಭಾಜ್ಯ ಅಂಗ. ಯಾವುದೇ ಜಾತಿ, ಧರ್ಮ, ಮತ ಆಧರಿಸಿ ಮೂಲಭೂತ ಕರ್ತವ್ಯಗಳನ್ನು ಪಾಲಿಸುವಲ್ಲಿ ಯಾವುದೇ ತಾರತಮ್ಯ ಮಾಡಬಾರದು ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಮೋಹನ ಎಂ. ಶಾಂತನಗೌಡರ ಹೇಳಿದರು.

Vijaya Karnataka 22 Apr 2019, 5:00 am
ಹುಬ್ಬಳ್ಳಿ : ನಾಗರಿಕತ್ವದ ಕರ್ತವ್ಯಗಳು ನಾಗರಿಕ ಸಮಾಜದ ಅವಿಭಾಜ್ಯ ಅಂಗ. ಯಾವುದೇ ಜಾತಿ, ಧರ್ಮ, ಮತ ಆಧರಿಸಿ ಮೂಲಭೂತ ಕರ್ತವ್ಯಗಳನ್ನು ಪಾಲಿಸುವಲ್ಲಿ ಯಾವುದೇ ತಾರತಮ್ಯ ಮಾಡಬಾರದು ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಮೋಹನ ಎಂ. ಶಾಂತನಗೌಡರ ಹೇಳಿದರು.
Vijaya Karnataka Web do not discriminate on maintaining duty
ಕರ್ತವ್ಯ ಪಾಲಿಸುವಲ್ಲಿ ತಾರತಮ್ಯ ಬೇಡ


ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಶನಿವಾರ ನಡೆದ ವಿಶ್ವವಿದ್ಯಾಲಯದ ಸಂಸ್ಥಾಪನಾ ಉಪನ್ಯಾಸ ಕಾರ್ಯಕ್ರಮದಲ್ಲಿ ಮೂಲಭೂತ ಕರ್ತವ್ಯಗಳು: ಹಿನ್ನೆಲೆ, ಪ್ರಭಾವ ವಿಷಯದ ಕುರಿತು ಉಪನ್ಯಾಸ ನೀಡಿದರು.

ಮೂಲಭೂತ ಹಕ್ಕುಗಳ ಅರ್ಥ, ವಿಕಾಸ ಭಾರತದ ಕಾನೂನಿನ ವ್ಯವಸ್ಥೆ ಹಾಗೂ ಸಂವಿಧಾನದ ಹಿನ್ನೆಲೆಯಲ್ಲಿ ಅವುಗಳ ಬೆಳವಣಿಗೆ, ಮೂಲಭೂತ ಕರ್ತವ್ಯಗಳನ್ನು ಕಾರ್ಯಗತಗೊಳಿಸುವಲ್ಲಿ ನ್ಯಾಯಾಲಯದ ಪಾತ್ರದ ಬಗ್ಗೆ ವಿವರವಾದ ಉಪನ್ಯಾಸ ನೀಡಿದರು.

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಡಾ.ಪಿ.ಈಶ್ವರ ಭಟ್‌ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಡೀನ್‌ ಪ್ರೊ.ಡಾ.ಸಿ.ಎಸ್‌.ಪಾಟೀಲ, ವಿಶ್ವವಿದ್ಯಾಲಯದ ಕುಲಸಚಿವರಾದ ಡಾ.ರತ್ನಾ ಆರ್‌.ಭರಮಗೌಡರ್‌, ಸಿಂಡಿಕೇಟ್‌ ಸದಸ್ಯರು, ವಿವಿಧ ಕಾನೂನು ಮಹಾವಿದ್ಯಾಲಯಗಳ ವಿದ್ಯಾರ್ಥಿಗಳು ಮತ್ತು ಶಿಕ್ಷ ಕರು, ವಿಶ್ವವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ