ಆ್ಯಪ್ನಗರ

ರಂಗನಾಥ್‌ ಮುಂದುವರಿಕೆ ಬೇಡ ; ಬಸವರಾಜ ಹೊರಟ್ಟಿ

ಹುಬ್ಬಳ್ಳಿ ; ಕೆಫೆ ಕಾಫಿ ಡೇ ಕಂಪನಿಯ ಚೇರ್ಮನ್‌ ಆಗಿರುವ ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್‌.ವಿ. ರಂಗನಾಥ್‌ ಅವರನ್ನು ಸರ್ಕಾರ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ ಉಪಾಧ್ಯಕ್ಷ ಸ್ಥಾನದಲ್ಲಿಮುಂದುವರಿಸುವುದು ಸೂಕ್ತವಲ್ಲಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಅವರು ಉಪಮುಖ್ಯಮಂತ್ರಿ ಸಿ.ಎಸ್‌.ಅಶ್ವತ್ಥ

Vijaya Karnataka 19 Sep 2020, 5:00 am
ಹುಬ್ಬಳ್ಳಿ ; ಕೆಫೆ ಕಾಫಿ ಡೇ ಕಂಪನಿಯ ಚೇರ್ಮನ್‌ ಆಗಿರುವ ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್‌.ವಿ. ರಂಗನಾಥ್‌ ಅವರನ್ನು ಸರ್ಕಾರ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ ಉಪಾಧ್ಯಕ್ಷ ಸ್ಥಾನದಲ್ಲಿಮುಂದುವರಿಸುವುದು ಸೂಕ್ತವಲ್ಲಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಅವರು ಉಪಮುಖ್ಯಮಂತ್ರಿ ಸಿ.ಎಸ್‌.ಅಶ್ವತ್ಥ ನಾರಾಯಣ ಅವರಿಗೆ ಪತ್ರ ಬರೆದಿದ್ದಾರೆ. ರಂಗನಾಥ್‌ ಅವರು ರಾಜ್ಯ ಉನ್ನತ ಶಿಕ್ಷಣ ಪರಿಷತ್‌ ಉಪಾಧ್ಯಕ್ಷ ಹುದ್ದೆಯಲ್ಲಿರುವಾಗಲೇ ಕೆಫೆ ಕಾಫಿ ಡೇಗೆ ನೇಮಕಗೊಂಡರು . ಈ ಕಂಪನಿ ಆರ್ಥಿಕ ಅಪರಾಧವೆಸಗಿದ ಆರೋಪ ಎದುರಿಸುತ್ತಿದೆ . ಆದಾಯ ತೆರಿಗೆ ಮತ್ತು ಜಾರಿ ನಿರ್ದೇಶನಾಲಯದಿಂದ ವಿಚಾರಣೆ ನಡೆಯುತ್ತಿದೆ . ಇಂತಹ ಕಂಪನಿಗೆ ಉಪಾಧ್ಯಕ್ಷರಾಗುವ ಮೊದಲು ಸೂಕ್ಷ್ಮತೆ ಅರಿತುಕೊಳ್ಳಬೇಕಿತ್ತು. ರಂಗನಾಥ್‌ ಅವರನ್ನು ಗೌರವದಿಂದ ಕಾಣುತ್ತೇನೆ . ಸಾರ್ವಜನಿಕ ಮತ್ತು ಖಾಸಗಿ ಹಿತಾಸಕ್ತಿಗಳ ನಡುವಿನ ಸಂಘರ್ಷಕ್ಕೆ ಈ ವಿಷಯ ಕಾರಣವಾಗಿದೆ. ಆದ್ದರಿಂದ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಶಿಕ್ಷಣ ಪರಿಷತ್‌ ಉಪಾಧ್ಯಕ್ಷ ಹುದ್ದೆಯಿಂದ ಮುಕ್ತಗೊಳಿಸುವುದು ಸೂಕ್ತ ಎಂದು ಪತ್ರದಲ್ಲಿತಿಳಿಸಿದ್ದಾರೆ.
Vijaya Karnataka Web basavaraj horatti

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ