ಆ್ಯಪ್ನಗರ

ದೋಸ್ತಿ ಮುರಿದು ಬೀಳುವ ದಿನ ದೂರವಿಲ್ಲ: ಶೆಟ್ಟರ್‌

ಹುಬ್ಬಳ್ಳಿ : ಸರಕಾರ ಉರುಳುವ ಭೀತಿಯಿಂದಾಗಿ ಪರಸ್ಪರ ಬೆನ್ನಿಗೆ ಚೂರಿ ಹಾಕುತ್ತಿದ್ದವರು ಈಗ ಒಂದಾಗಿದ್ದಾರೆ. ಆದರೆ, ಈ ದೋಸ್ತಿ ಮತ್ತೆ ಮುರಿದು ಬೀಳಲು ಬಹು ದಿನಗಳು ಬೇಕಾಗಿಲ್ಲ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್‌ ತಿಳಿಸಿದರು.

Vijaya Karnataka 8 Jun 2019, 5:00 am
ಹುಬ್ಬಳ್ಳಿ : ಸರಕಾರ ಉರುಳುವ ಭೀತಿಯಿಂದಾಗಿ ಪರಸ್ಪರ ಬೆನ್ನಿಗೆ ಚೂರಿ ಹಾಕುತ್ತಿದ್ದವರು ಈಗ ಒಂದಾಗಿದ್ದಾರೆ. ಆದರೆ, ಈ ದೋಸ್ತಿ ಮತ್ತೆ ಮುರಿದು ಬೀಳಲು ಬಹು ದಿನಗಳು ಬೇಕಾಗಿಲ್ಲ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್‌ ತಿಳಿಸಿದರು.
Vijaya Karnataka Web Jagadish-Shettar


ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಗೆ ತೀವ್ರ ಮುಖಭಂಗವಾಗಿದೆ. ಕಾಂಗ್ರೆಸ್‌ ಸೋಲಿಗೆ ಜೆಡಿಎಸ್‌ ಕಾರಣ ಎಂದು ಕಾಂಗ್ರೆಸ್‌ ಮುಖಂಡರು ಹೇಳುತ್ತಿದ್ದರೆ, ಇತ್ತ ಜೆಡಿಎಸ್‌ ಸೋಲಿಗೆ ಕಾಂಗ್ರೆಸ್‌ ಕಾರಣ ಎಂದು ಜೆಡಿಎಸ್‌ ಮುಖಂಡರು ಹೇಳುತ್ತಿದ್ದಾರೆ'' ಎಂದರು.

''ಈಗಾಗಲೇ ಮಹಾರಾಷ್ಟ್ರದಲ್ಲಿ ಪ್ರತಿಪಕ್ಷದ ನಾಯಕರೇ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರುತ್ತಿದ್ದಾರೆ. ಇನ್ನು ಆಂಧ್ರ, ತೆಲಂಗಾಣ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್‌ ಅಸ್ತಿತ್ವ ಕಳೆದುಕೊಂಡಿದೆ. ಬರುವ ದಿನಗಳಲ್ಲಿ ಇಂತಹ ಕಿತ್ತಾಟದಿಂದ ಬೇಸತ್ತು ಕಾಂಗ್ರೆಸ್‌ ಪಕ್ಷವೇ ವಿಸರ್ಜನೆಗೊಳ್ಳುವ ಲಕ್ಷಣಗಳು ಹೆಚ್ಚಾಗಿದೆ'' ಎಂದರು.

ಈ ಸಂದರ್ಭದಲ್ಲಿ ಮಹೇಶ ಬುರ್ಲಿ, ಲಕ್ಷ್ಮಣ ಗಂಡಗಾಳೇಕರ, ಉಮೇಶ ಕೌಜಗೇರಿ, ರವಿ ನಾಯ್ಕ ಸೇರಿದಂತೆ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ