ಆ್ಯಪ್ನಗರ

ಕುಡಿಯುವ ನೀರು, ಉದ್ಯೋಗ ನೀಡಲು ಅಗತ್ಯ ಕ್ರಮ

ಧಾರವಾಡ : ಸರಕಾರವು ಹಿಂಗಾರು ಹಂಗಾಮಿಗೆ ಧಾರವಾಡ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿರುವದರಿಂದ ಸ್ಥಾನಿಕವಾಗಿ ಎಲ್ಲ ಜನರಿಗೆ ಮತ್ತು ಜಾನುವಾರುಗಳಿಗೆ ಅಗತ್ಯವಿರುವ ಕುಡಿಯುವ ನೀರು, ಮೇವು ಮತ್ತು ಎಂಜಿಎನ್‌ಆರ್‌ಜಿಯಲ್ಲಿ ಉದ್ಯೋಗ ನೀಡಲು ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಎಂ. ತಿಳಿಸಿದರು.

Vijaya Karnataka 8 May 2019, 5:00 am
ಧಾರವಾಡ : ಸರಕಾರವು ಹಿಂಗಾರು ಹಂಗಾಮಿಗೆ ಧಾರವಾಡ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿರುವದರಿಂದ ಸ್ಥಾನಿಕವಾಗಿ ಎಲ್ಲ ಜನರಿಗೆ ಮತ್ತು ಜಾನುವಾರುಗಳಿಗೆ ಅಗತ್ಯವಿರುವ ಕುಡಿಯುವ ನೀರು, ಮೇವು ಮತ್ತು ಎಂಜಿಎನ್‌ಆರ್‌ಜಿಯಲ್ಲಿ ಉದ್ಯೋಗ ನೀಡಲು ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಎಂ. ತಿಳಿಸಿದರು.
Vijaya Karnataka Web drinking water the need for employment
ಕುಡಿಯುವ ನೀರು, ಉದ್ಯೋಗ ನೀಡಲು ಅಗತ್ಯ ಕ್ರಮ


ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಬಸವಜಯಂತಿ ಆಚರಿಸಿದ ನಂತರ ಸುದ್ದಿಗಾರರೊಂದಿಗೆ ಜಿಲ್ಲೆಯಲ್ಲಿನ ಬರ ನಿರ್ವಹಣೆ ಕುರಿತು ಮಾತನಾಡಿದರು.

ಕಳೆದ ಎಪ್ರೀಲ್‌ ತಿಂಗಳಿನಲ್ಲಿ ಎಂಆರ್‌ಬಿಸಿಯಿಂದ ಬಿಡುಗಡೆ ಮಾಡಲಾಗಿದ್ದ ನೀರಿನಿಂದ ಜಿಲ್ಲೆಯ ಕೆರೆಗಳಲ್ಲಿ ನೀರು ತುಂಬಿಸಲಾಗಿದೆ. ಸದ್ಯಕ್ಕೆ ಯಾವುದೇ ಗ್ರಾಮಗಳಿಗೆ ಟ್ಯಾಂಕರ ಮೂಲಕ ನೀರು ಕೊಡುತ್ತಿಲ್ಲ. ಅಗತ್ಯ ಬಿದ್ದಲ್ಲಿ ಗ್ರಾಮಗಳಿಗೆ ಟ್ಯಾಂಕರ ನೀರು ವ್ಯವಸ್ಥೆ ಕಲ್ಪಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಈಗಾಗಲೇ ಕೊರೆಸಲಾಗಿರುವ ಬೊರವೆಲ್‌ಗಳಲ್ಲಿ ನೀರಿನ ಪ್ರಮಾಣ ಕಡಿಮೆ ಆಗಿದ್ದರೆ ಅಲ್ಲಿ ಡಿಪನಿಂಗ್‌ ಮತ್ತು ಪ್ಲೇಸಿಂಗ್‌ ಮೂಲಕ ಹೆಚ್ಚು ನೀರು ಪಡೆಯಲು ಪ್ರಯತ್ನಿಸಲಾಗುತ್ತಿದೆ. ಈ ಪ್ರಯತ್ನದಲ್ಲಿ ಶೇ .60ಕ್ಕಿಂತ ಹೆಚ್ಚು ಬೋರವೆಲ್‌ಗಳಿಂದ 1 ರಿಂದ 2 ಇಂಚವರೆಗೆ ನೀರು ಪಡೆಯುವಲ್ಲಿ ಯಶಸ್ವಿಯಾಗಿದ್ದೆವೆ ಎಂದು ಹೇಳಿದರು.

ಕಲಘಟಗಿ ತಾಲೂಕಿನಲ್ಲಿ ವಿಶೇಷವಾಗಿ ಬೊರವೆಲ್‌ ಡಿಪನಿಂಗ್‌ ಮತ್ತು ಪ್ಲೇಸಿಂಗ್‌ ಮಾಡಿದ್ದರಿಂದ ಸುಮಾರು 142 ಬೊರವೆಲ್‌ಗಳಲ್ಲಿ ನೀರಿನ ಲಭ್ಯತೆ ಜಾಸ್ತಿಯಾಗಿದೆ. ಹೊಸ ಬೊರವೆಲ್‌ಗಿಂತ ಈಗಿರುವ ಬೊರವೆಲ್‌ಗಳಲ್ಲಿ ಜಾಸ್ತಿ ನೀರು ಪಡೆಯುವ ಕ್ರಮಗಳಿಗೆ ಹೆಚ್ಚು ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ಕುಡಿಯುವ ನೀರಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ದೂರುಗಳಿದ್ದರೆ ದಿನದ 24ಗಂಟೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಯಂತ್ರಣ ಕೊಠಡಿಗೆ ಸಂಪರ್ಕಿಸಬಹುದು. ಸಾರ್ವಜನಿಕರ ಅನುಕೂಲಕ್ಕಾಗಿ ಆರಂಭಿಸಿರುವ ಉಚಿತ ಸಹಾಯವಾಣಿ (ಟೋಲ್‌ ಫ್ರಿ) 1077 ಕರೆ ಮಾಡಬಹುದು ಅಥವಾ ವಾಟ್ಸಪ್‌ ನಂ 9480230962 ವಾಟ್ಸಪ್‌ ಸಂದೇಶ, ಛಾಯಾಚಿತ್ರಗಳನ್ನು ಸಾರ್ವಜನಿಕರು ಕಳಿಸಬಹುದೆಂದು ಜಿಲ್ಲಾಧಿಕಾರಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ