ಆ್ಯಪ್ನಗರ

ಉದ್ಯೋಗ ವಾಹಿನಿಗೆ ಚಾಲನೆ

ಹುಬ್ಬಳ್ಳಿ: ಮಿನಿವಿಧಾನ ಸೌಧದ ಬಳಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ಯೋಗ ವಾಹಿನಿ ವಾಹನಕ್ಕೆ ಬುಧವಾರ ತಾಪಂ ಇಓ ಎಂ.ಎಂ.ಸವದತ್ತಿ ಚಾಲನೆ ನೀಡಿದರು.

Vijaya Karnataka 27 Dec 2018, 5:00 am
ಹುಬ್ಬಳ್ಳಿ: ಮಿನಿವಿಧಾನ ಸೌಧದ ಬಳಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ಯೋಗ ವಾಹಿನಿ ವಾಹನಕ್ಕೆ ಬುಧವಾರ ತಾಪಂ ಇಓ ಎಂ.ಎಂ.ಸವದತ್ತಿ ಚಾಲನೆ ನೀಡಿದರು.
Vijaya Karnataka Web drive to work channel
ಉದ್ಯೋಗ ವಾಹಿನಿಗೆ ಚಾಲನೆ


ಹುಬ್ಬಳ್ಳಿ ತಾಲೂಕನ್ನು ರಾಜ್ಯ ಸರಕಾರ ಬರಪೀಡಿತ ಪ್ರದೇಶವಾಗಿ ಗುರುತಿಸಿರುವುದರಿಂದ ಮಹತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತರಾದ ಕೂಲಿ ಕಾರ್ಮಿಕರಿಗೆ ಸಂಬಂಧ ಪಟ್ಟ ಗ್ರಾಮ ಪಂಚಾಯಿತಿಗಳಲ್ಲಿ ಕೂಲಿಯನ್ನು ನೀಡಲಾಗುವದು.

ಈ ಕುರಿತಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಧಾರವಾಡ ಜಿಲ್ಲಾ ಪಂಚಾಯಿತಿ ಹಾಗೂ ಹುಬ್ಬಳ್ಳಿ ತಾಲೂಕು ಪಂಚಾಯಿತಿ ಸಹಯೋಗದಲ್ಲಿ ಮಾಹಿತಿ, ಶಿಕ್ಷ ಣ, ಹಾಗೂ ಸಂವಹನ ಕಾರ್ಯಕ್ರಮದಡಿಯಲ್ಲಿ ಉದ್ಯೋಗ ವಾಹಿನಿಗೆ ಚಾಲನೆ ನೀಡಲಾಗಿದೆ.

ವಾಹನವು ಜ.8ರವರೆಗೆ ಹುಬ್ಬಳ್ಳಿಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸ ಮಾಡಲಿದೆ. ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಗಂಗಾಧರ ಕಂದಕೊರ ಸಿಬ್ಬಂದಿ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ