ಆ್ಯಪ್ನಗರ

ಹುಬ್ಬಳ್ಳಿ-ಗದಗ ಮಧ್ಯೆ ಎಲೆಕ್ಟ್ರಿಕ್‌ ಬಸ್‌ ಸಂಚಾರ ಆರಂಭಿಸಲಾಗುವುದು: ಡಿಸಿಎಂ ಲಕ್ಷ್ಮಣ ಸವದಿ

ಭಾನುವಾರ ನವೀಕೃತ ಬಸ್‌ ನಿಲ್ದಾಣ ಲೋಕಾರ್ಪಣೆ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ್‌ ಎಲೆಕ್ಟ್ರಿಕ್‌ ಬಸ್‌ ಪೈಕಿ ಹುಬ್ಬಳ್ಳಿ-ಧಾರವಾಡಕ್ಕೆ 50 ಬಸ್‌ ನೀಡಲಾಗುವುದು. ಹುಬ್ಬಳ್ಳಿ-ಗದಗ ಮಧ್ಯೆಯೂ ಎಲೆಕ್ಟ್ರಿಕ್‌ ಬಸ್‌ ಸಂಚಾರ ಆರಂಭಿಸಲಾಗುವುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು.

Vijaya Karnataka Web 25 Jan 2021, 12:44 pm
ಗದಗ/ ಹುಬ್ಬಳ್ಳಿ: ರಾಜ್ಯದಲ್ಲಿ ಪ್ರತಿ ಎಲೆಕ್ಟ್ರಿಕ್‌ ಬಸ್‌ಗೆ ಕೇಂದ್ರ ಸರಕಾರ 55 ಲಕ್ಷ ರೂ. ಸಬ್ಸಿಡಿ ಕೊಡುತ್ತಿದೆ. ಸಬ್ಸಿಡಿ ಹಣ ಬಳಸಿಕೊಂಡು ಸುಮಾರು 350 ಎಲೆಕ್ಟ್ರಿಕ್‌ ಬಸ್‌ಗಳನ್ನು ಖರೀದಿ ಮಾಡಿ ಮುಂದಿನ ತಿಂಗಳ ಮೊದಲ ವಾರದಿಂದ ಸಂಚಾರ ಆರಂಭಿಸಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು.
Vijaya Karnataka Web electric bus
Picture used for representational purpose only


ಭಾನುವಾರ ನವೀಕೃತ ಬಸ್‌ ನಿಲ್ದಾಣ ಲೋಕಾರ್ಪಣೆ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ್‌ ಎಲೆಕ್ಟ್ರಿಕ್‌ ಬಸ್‌ ಪೈಕಿ ಹುಬ್ಬಳ್ಳಿ-ಧಾರವಾಡಕ್ಕೆ 50 ಬಸ್‌ ನೀಡಲಾಗುವುದು. ಹುಬ್ಬಳ್ಳಿ-ಗದಗ ಮಧ್ಯೆಯೂ ಎಲೆಕ್ಟ್ರಿಕ್‌ ಬಸ್‌ ಸಂಚಾರ ಆರಂಭಿಸಲಾಗುವುದು ಎಂದರು.

ರೆಸಾರ್ಟ ರಾಜಕಾರಣದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಚಿಕ್ಕಮಗಳೂರಿಗೆ ಇಲಾಖೆಯ ಪರಿಶೀಲನಾ ಸಭೆಗೆ ಹೋದಾಗ ಸಚಿವರು, ಶಾಸಕರು ಭೇಟಿಯಾಗುವುದು ಸ್ವಾಭಾವಿಕ. ನಾನು ಇಲ್ಲಿಗೆ ಬಂದ ಮೇಲೆ ನನ್ನನ್ನು ಅನೇಕರು ಭೇಟಿ ಮಾಡುತ್ತಾರೆ. ಅದಕ್ಕೂ ಇದಕ್ಕೂ ಸಾಕಷ್ಟು ವ್ಯತ್ಯಾಸವಿದೆ.

ಮಗಳ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಕುಟುಂಬಸ್ಥರು, ಶಾಲಾ ಗೆಳೆತಿಯರ ಹಾದಿ ಹಿಡಿದ ವೇದಾ

ಈಗಾಗಲೇ ಶೇ.95 ರಷ್ಟು ಸರಿ ಹೋಗಿದೆ. ಇನ್ನುಳಿದ ಶೇ.5 ರಷ್ಟನ್ನೂ ಸರಿಪಡಿಸಲಾಗುವುದು ಎಂದು ಹೇಳಿದರು. ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಈಗಾಗಲೇ ಸಮಿತಿ ರಚಿಸಿದ್ದು, ಇನ್ನೊಂದು ತಿಂಗಳೊಳಗಾಗಿ ಬೇಡಿಕೆ ಈಡೇರಿಸಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಭರವಸೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ