ಆ್ಯಪ್ನಗರ

ಏರಪೋರ್ಟ್‌ಗೆ ಸಂಗೊಳ್ಳಿ ರಾಯಣ್ಣ ಹೆಸರಿಡಿ

ಧಾರವಾಡ : ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿ ಚೆನ್ನಮ್ಮ ಹೆಸರು ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರು ನಾಮಕರಣ ಮಾಡಬೇಕು ಎಂದು ಆಗ್ರಹಿಸಿ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಹಾಲುಮತ ಮಹಾಸಭಾ ಹಾಗೂ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಹಿತರಕ್ಷ ಣಾ ಸಮಿತಿ ಮುಖಂಡರು ಜಂಟಿಯಾಗಿ ಮನವಿ ಸಲ್ಲಿಸಿದರು.

Vijaya Karnataka 13 Jan 2019, 5:00 am
ಧಾರವಾಡ : ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿ ಚೆನ್ನಮ್ಮ ಹೆಸರು ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರು ನಾಮಕರಣ ಮಾಡಬೇಕು ಎಂದು ಆಗ್ರಹಿಸಿ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಹಾಲುಮತ ಮಹಾಸಭಾ ಹಾಗೂ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಹಿತರಕ್ಷ ಣಾ ಸಮಿತಿ ಮುಖಂಡರು ಜಂಟಿಯಾಗಿ ಮನವಿ ಸಲ್ಲಿಸಿದರು.
Vijaya Karnataka Web DRW-12MAILAR03
ಧಾರವಾಡದ ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿ ಚೆನ್ನಮ್ಮ ಹೆಸರು ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರು ನಾಮಕರಣ ಮಾಡಬೇಕು ಎಂದು ಆಗ್ರಹಿಸಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.


ಈ ವೇಳೆ ಮಾತನಾಡಿದ ಮಾರುತಿ ಕರಿಗಾರ, ಈ ಹಿಂದೆಯೇ ಗಾಮನಗಟ್ಟಿ, ನವನಗರ, ಗೋಕುಲ, ಹುಬ್ಬಳ್ಳಿ, ಸುತ್ತಮುತ್ತಲಿನ ಪ್ರದೇಶದ ರೈತರ ಭೂಮಿಯನ್ನು ನೀಡುವ ವೇಳೆ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರು ನಾಮಕರಣ ಮಾಡಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಲಾಗಿತು. ಅದೇ ರಿತಿ ರಾಜ್ಯ ಸರಕಾರ ಕೂಡ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿದ್ದು, ಕೇಂದ್ರ ಸರಕಾರ ರಾಜ್ಯ ಸರಕಾರದ ಶಿಫಾರಸ್ಸನ್ನು ಈ ಕೂಡಲೇ ಅಂಗೀಕರಿಸಿ ಆದೇಶ ಹೊರಡಿಸಬೇಕು. ಇದರಿಂದ ಸ್ವತಂತ್ರ ಹೋರಾಟಗಾರರ ಚರಿತ್ರೆಗೆ ಹಾಗೂ ಅವರ ಬಲಿದಾನಕ್ಕೆ ಗೌರವ ಕೊಟ್ಟಂತಾಗುತ್ತದೆ ಎಂದು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಶನಿವಾರ ಮನವಿ ಸಲ್ಲಿಸಿದರು.

ಹಾಲುಮತ ಮಹಾಸಭಾದ ಮಂಜು ನಡಹಳ್ಳಿ, ಬಸವರಾಜ ತಿದಿ, ನಾಗರಾಜ ಕೋಳಿವಾಡ, ಜೆ.ಬಿ.ಕಂಬಳಿ ಸೇರಿದಂತೆ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ