ಆ್ಯಪ್ನಗರ

ಹೆಚ್ಚುವರಿ ಆಯುಕ್ತರ ಕಚೇರಿ ಸ್ಥಾಪಿಸಿ

ಹುಬ್ಬಳ್ಳಿ: ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಡಳಿತಾತ್ಮಕ ಕೆಲಸ ಕಾರ್ಯ ತ್ವರಿತಗೊಳಿಸುವ ನಿಟ್ಟಿನಲ್ಲಿಉತ್ತರ ಕರ್ನಾಟಕ ಭಾಗದ ಪದವಿ ಕಾಲೇಜುಗಳನ್ನು ಕೇಂದ್ರೀಕರಿಸಿ ಧಾರವಾಡದಲ್ಲಿಹೆಚ್ಚುವರಿ ಆಯುಕ್ತರ ಕಚೇರಿ ಸ್ಥಾಪಿಸಬೇಕೆಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಆಗ್ರಹಿಸಿದ್ದಾರೆ.

Vijaya Karnataka 5 Jul 2020, 5:00 am
ಹುಬ್ಬಳ್ಳಿ: ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಡಳಿತಾತ್ಮಕ ಕೆಲಸ ಕಾರ್ಯ ತ್ವರಿತಗೊಳಿಸುವ ನಿಟ್ಟಿನಲ್ಲಿಉತ್ತರ ಕರ್ನಾಟಕ ಭಾಗದ ಪದವಿ ಕಾಲೇಜುಗಳನ್ನು ಕೇಂದ್ರೀಕರಿಸಿ ಧಾರವಾಡದಲ್ಲಿಹೆಚ್ಚುವರಿ ಆಯುಕ್ತರ ಕಚೇರಿ ಸ್ಥಾಪಿಸಬೇಕೆಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಆಗ್ರಹಿಸಿದ್ದಾರೆ.
Vijaya Karnataka Web establish additional commissioners office
ಹೆಚ್ಚುವರಿ ಆಯುಕ್ತರ ಕಚೇರಿ ಸ್ಥಾಪಿಸಿ


ಈ ಕುರಿತು ಡಿಸಿಎಂ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್‌್ಥ ನಾರಾಯಣ ಅವರಿಗೆ ಶನಿವಾರ ಪತ್ರ ಬರೆದಿರುವ ಅವರು, ಹೆಚ್ಚುವರಿ ಆಯುಕ್ತರ ಕಚೇರಿ ಸ್ಥಾಪನೆ ಆಗುವುದರಿಂದ ಬೋಧಕ- ಬೋಧಕೇತರ ಸಿಬ್ಬಂದಿಗೆ ಅನುಕೂಲವಾಗಲಿದೆ. ಶಿಕ್ಷಕರು ತಮಗೆ ದೊರೆಯಬೇಕಾದ ಸೌಲಭ್ಯಗಳಿಗಾಗಿ ಈ ಭಾಗದಿಂದ ದೂರದ ಬೆಂಗಳೂರಿಗೆ ಅಲೆದಾಡುವುದು ತಪ್ಪಲಿದೆ. ಅಲ್ಲದೇ, ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯವಾಗಿರುವುದನ್ನು ಸರಿಪಡಿಸಿದಂತಾಗುತ್ತದೆ ಎಂದು ತಿಳಿಸಿದ್ದಾರೆ.

ಧಾರವಾಡ ವಲಯದ 7 ಜಿಲ್ಲೆಗಳಲ್ಲಿಸದ್ಯ 98 ಸರಕಾರಿ ಪ್ರಥಮ ದರ್ಜೆ ಕಾಲೇಜು, 113 ಅನುದಾನಿತ ಪದವಿ ಕಾಲೇಜು, 10 ಬಿಎಡ್‌, 14 ಚಿತ್ರಕಲಾ, 14 ಕಾನೂನು ಹಾಗೂ ನೂರಾರು ಅನುದಾನ ರಹಿತ ಕಾಲೇಜುಗಳಿವೆ. ಸಾವಿರಾರು ಅಧ್ಯಾಪಕರು, 2 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಕಾಲೇಜಿನಲ್ಲಿಓದುತ್ತಿದ್ದಾರೆ. ಅಲ್ಲದೇ, ಅನೇಕ ವಿಶ್ವವಿದ್ಯಾಲಯಗಳು ಈ ಭಾಗದಲ್ಲಿವೆ.

ಸದ್ಯ ರಾಜ್ಯದ ಬೋಧಕ, ಬೋಧಕೇತರ ಸಿಬ್ಬಂದಿ ಕೇಂದ್ರ ಕಚೇರಿ ಅಡಿ ಕಾರ್ಯನಿರ್ವಹಿಸುತ್ತಿವೆ. ಇದರಿಂದಾಗಿ ಆಡಳಿತಾತ್ಮಕ ಕೆಲಸ, ಸಿಬ್ಬಂದಿ ಪದೋನ್ನತಿ, ವರ್ಗಾವಣೆ, ನೇಮಕಾತಿ, ನಿಯುಕ್ತಿ ಇತ್ಯಾದಿ ಕೆಲಸಗಳು ವಿಳಂಬವಾಗುತ್ತಿವೆ. ಹೀಗಾಗಿ ದೈನಂದಿನ ಆಡಳಿತಾತ್ಮಕ ಕೆಲಸ ನಿರ್ವಹಿಸಲು ಹೆಚ್ಚುವರಿ ಆಯುಕ್ತರ ಕಚೇರಿ ಅಗತ್ಯತೆ ಇದ್ದು, ಕೂಡಲೇ ಸರಕಾರ ಇದನ್ನು ಸ್ಥಾಪಿಸುವ ಮೂಲಕ ಬೋಧಕ- ಬೋಧಕೇತರ ಸಿಬ್ಬಂದಿ ಕನಸು ನನಸಾಗಿಸಬೇಕೆಂದು ಪತ್ರದಲ್ಲಿಮನವಿ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ