ಆ್ಯಪ್ನಗರ

ದಯಾಮರಣ: ಇಂದು ಬೆಂಗಳೂರು ಚಲೋ

ನವಲಗುಂದ:ಮಹದಾಯಿ, ಕಳಸಾ-ಬಂಡೂರಿ ಯೋಜನೆ ಅನುಷ್ಠಾನ ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗಾಗಿ ಪಕ್ಷಾತೀತ ರೈತ ಹೋರಾಟ ಸಮಿತಿ ನೇತೃತ್ವದಲ್ಲಿ

ವಿಕ ಸುದ್ದಿಲೋಕ 12 Feb 2017, 5:00 am
ನವಲಗುಂದ:ಮಹದಾಯಿ, ಕಳಸಾ-ಬಂಡೂರಿ ಯೋಜನೆ ಅನುಷ್ಠಾನ ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗಾಗಿ ಪಕ್ಷಾತೀತ ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತರು ಭಾನುವಾರ ‘ಬೆಂಗಳೂರು ಚಲೋ’ ಚಳವಳಿ ನಡೆಸಲಿದ್ದು, ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲು ಅವಕಾಶ ನೀಡುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ.
Vijaya Karnataka Web euthanasia today bangalore chalo
ದಯಾಮರಣ: ಇಂದು ಬೆಂಗಳೂರು ಚಲೋ

ಇಲ್ಲಿನ ರೈತ ಭವನದಲ್ಲಿ ಶನಿವಾರ ಜರುಗಿದ ರೈತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಹೋರಾಟ ಸಮಿತಿ ಅಧ್ಯಕ್ಷ ಲೋಕನಾಥ ಹೆಬಸೂರ, ಸೋಮವಾರ ಬೆಂಗಳೂರಿಗೆ ತೆರಳಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕಳಸಾ-ಬಂಡೂರಿ ಯೋಜನೆ ಅನುಷ್ಠಾನ, ಅಮಾಯಕ ರೈತರ ಮೇಲಿನ ಎಲ್ಲ ಮೊಕದ್ದಮೆಗಳನ್ನು ವಾಪಸ್ ಪಡೆಯಬೇಕು ಹಾಗೂ ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ವಿಶೇಷ ಪ್ಯಾಕೇಜ್ ಮೂಲಕ ಪರಿಹಾರ ನೀಡಲು ಆಗ್ರಹಿಸಲಾಗುವುದು. ಒಂದು ವೇಳೆ ಸಿದ್ದರಾಮಯ್ಯ ಅವರು ರೈತರ ಭೇಟಿಗೆ ನಿರಾಕರಿಸಿದರೆ ಅಲ್ಲಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಗುವುದು. ನಂತರ ಸಾಮೂಹಿಕ ದಯಾಮರಣಕ್ಕೆ ಅನುಮತಿ ನೀಡುವಂತೆ ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದೆಂದು ಹೇಳಿದರು.
ರೈತ ಮುಖಂಡ ಸುಭಾಸಚಂದ್ರಗೌಡ ಪಾಟೀಲ್ ಮಾತನಾಡಿ, ರೈತರು ನಡೆಸುತ್ತಿರುವ ಮಹದಾಯಿ ಹೋರಾಟ ಎರಡು ವರ್ಷ ಸಮೀಪಿಸುತ್ತ ಬಂದರೂ ರಾಜಕಾರಣಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ. ಅಧಿಕಾರ ನಡೆಸಲು ಇವರಿಗೆ ರೈತರ ಮತ ಬೇಕು. ಆದರೆ ಸಂಕಷ್ಟದಲ್ಲಿರುವ ರೈತರ ಸಮಸ್ಯೆ ಆಲಿಸಲು ಇವರಿಗೆ ಸಮಯ ಇಲ್ಲಘಿ. ಇದೇ ಧೋರಣೆ ಮುಂದುವರಿದರೆ ತಕ್ಕಪಾಠ ಕಲಿಸಲಾಗುವುದೆಂದು ಎಚ್ಚರಿಸಿದರು. ರಮೇಶ ಹಲಗತ್ತಿ, ಡಿ.ವಿ. ಕುರಟ್ಟಿ, ಶಿವಪ್ಪ ಸಂಗಳದ, ಸಿದ್ದಪ್ಪ ಜೆಟ್ಟೆಣ್ಣವರ, ಆರ್.ಎಂ. ನಾಯ್ಕರ ಮತ್ತಿತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ