ಆ್ಯಪ್ನಗರ

ನನ್ನ ಶಕ್ತಿ ಉಳಿದರೆ ಲೋಕಸಭೆಗೆ ಇನ್ನೊಮ್ಮೆ ಸ್ಪರ್ಧಿಸುತ್ತೇನೆ: ಎಚ್‌.ಡಿ. ದೇವೇಗೌಡ

ತೃತೀಯ ರಂಗ ಅಧಿಕಾರಕ್ಕೆ ಬಂದರೆ ಪ್ರಧಾನಿಯಾಗುತ್ತೀರಾ ಎಂಬ ಪ್ರಶ್ನೆಗೆ, ಅದೊಂದು ತಿರುಕನ ಕನಸು. 120 ಕೋಟಿ ಜನರನ್ನು ಆಳುವ ಸಾಮರ್ಥ್ಯ ನನಗಿದೆಯಾ? ಎಂದು ಕೇಳಿದ್ದಾರೆ.

Vijaya Karnataka Web 18 Nov 2018, 3:26 pm
ಹುಬ್ಬಳ್ಳಿ: ಮೈತ್ರಿ ಸರ್ಕಾರದ ಬಗ್ಗೆ ಒಬ್ಬೊಬ್ಬರು ಒಂದೊಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಮೈತ್ರಿ ಸರ್ಕಾರಕ್ಕೆ ಯಾವುದೇ ಅಪಾಯ ಬರಬಾರದು. ನಮ್ಮ ಅನುಭವದ ಆಧಾರದ ಮೇಲೆ ಸರ್ಕಾರ ಮುಂದುವರಿಸಿಕೊಂಡು ಹೋಗುತ್ತಿದ್ದೇವೆ. ಎಂತಹ ಜಟಿಲ ಸಮಸ್ಯೆ ಬಂದರೂ ಬಗೆಹರಿಸುವ ಅನುಭವವಿದೆ. ಜತೆಗೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಒಟ್ಟುಗೂಡಿ ಕೆಲಸ ಮಾಡಬೇಕು ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹೇಳಿದ್ದಾರೆ.
Vijaya Karnataka Web HDD1.


ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ರೈತರ ಮೇಲೆ ಗೋಲಿಬಾರ್ ಮಾಡಿಸಿಲ್ಲ. ಆತ್ಮಹತ್ಯೆ ಮಾಡಿಕೊಂಡ ರೈತರೆಲ್ಲರೂ ಬೆಳೆಸಾಲ ಪಡೆದವರಲ್ಲ. ಬೇರೆಬೇರೆ ಸಾಲಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ಕಬ್ಬು ಬೆಳೆಗಾರರ ಸಮಸ್ಯೆಯತ್ತ ಗಮನಹರಿಸುತ್ತಿದ್ದಾರೆ. ನಮಗೆ ಶಕ್ತಿ ಇದ್ದಷ್ಟು ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡ್ತೀವಿ ಎಂದು ಹೇಳಿದ್ದಾರೆ.

ಅನಿತಾ ಸಚಿವರಾಗುತ್ತಾರಾ?

104 ಜನ ಶಾಸಕರ ಪಕ್ಷದವರು ಆಡಳಿತಕ್ಕೆ ಬರುವವರೆಗೆ ಕಾಯಿರಿ. ಯಾರ ಕಾಲದಲ್ಲಿ ಉತ್ತರ ಕರ್ನಾಟಕಕ್ಕೆ ಎಷ್ಟು ಅನುದಾನ ಬಿಡುಗಡೆಯಾಗಿದೆ ಎಂಬುದರ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡುತ್ತೇವೆ. ತಜ್ಞರನ್ನು ಹುಡುಕಿ ಶ್ವೇತಪತ್ರ ಹೊರಡಿಸುತ್ತೇವೆ. ಅಲ್ಲದೆ ಅನಿತಾ ಕುಮಾರಸ್ವಾಮಿಯವರು ಸಚಿವರಾಗುತ್ತಾರಾ ಎನ್ನುವುದನ್ನು ಕಾದು ನೋಡಿ ಎಂದು ದೇವೇಗೌಡರು ಹೇಳಿದ್ದಾರೆ.


ನನ್ನ ಶಕ್ತಿ ಉಳಿದರೆ ಲೋಕಸಭೆಗೆ ಸ್ಪರ್ಧಿಸುತ್ತೇನೆ
ಜೆಡಿಎಸ್ ಕಾಂಗ್ರೆಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುತ್ತೇವೆ. ರಾಜ್ಯದ 28 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುತ್ತೇವೆ. ನನ್ನ ಶಕ್ತಿ ಉಳಿದರೆ ಲೋಕಸಭೆಗೆ ಸ್ಪರ್ಧಿಸುತ್ತೇನೆ. ಮೋದಿಯವರು ಶರವೇಗದಲ್ಲಿ ಹೋಗಿ ದೇಶದ ಪ್ರಧಾನಿಯಾಗಿದ್ದಾರೆ. ಭ್ರಷ್ಟಾಚಾರ ಮುಕ್ತ ಆಡಳಿತ ಕೊಡುತ್ತೇನೆಂದು ಹೇಳಿ ಈಗ ಯಾವ ಆಡಳಿತ ಕೊಡುತ್ತಾರೆಂದು ಜನರಿಗೆ ಗೊತ್ತು ಎಂದಿದ್ದಾರೆ.

ಪ್ರಧಾನಿಯಾಗುವುದು ತಿರುಕನ ಕನಸು
ತೃತೀಯ ರಂಗ ಅಧಿಕಾರಕ್ಕೆ ಬಂದರೆ ಪ್ರಧಾನಿಯಾಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅದೊಂದು ತಿರುಕನ ಕನಸು. 120 ಕೋಟಿ ಜನರನ್ನು ಆಳುವ ಸಾಮರ್ಥ್ಯ ನನಗಿದೆಯಾ? ಎಂದು ವ್ಯಂಗ್ಯವಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ