ಆ್ಯಪ್ನಗರ

ಹುಬ್ಬಳ್ಳಿ: ಕಾನೂನು ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಕೊಲೆ!

ಕರ್ನಾಟಕ ರಾಜ್ಯ ಕಾನೂನು ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಎಸ್.ಎಸ್.ಮುಶಣ್ಣ ಅವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಇರುವ ಅವರ ನಿವಾಸದಲ್ಲಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಆರಂಭಿಸಿದ್ದಾರೆ.

Vijaya Karnataka Web 24 Oct 2020, 10:58 am
ಹುಬ್ಬಳ್ಳಿ: ಕರ್ನಾಟಕ ರಾಜ್ಯ ಕಾನೂನು ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲರನ್ನ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಲಿಂಗರಾಜನಗರದ ಕಟ್ಟಿ ಮಂಗಳಮ್ಮ ದೇವಸ್ಥಾನ ಬಳಿಯಿರುವ ಅವರ ನಿವಾಸದಲ್ಲಿ ನಡೆದಿದೆ. ನಿವೃತ್ತ ಪ್ರಾಂಶುಪಾಲ ಎಸ್.ಎಸ್.ಮುಶಣ್ಣ ಕೊಲೆಯಾಗಿರುವ ವ್ಯಕ್ತಿ.
Vijaya Karnataka Web murder


ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದು, ತನಿಖೆ ಆರಂಭವಾಗಿದೆ. ಘಟನೆಯು ಯಾವಾಗ ನಡೆದಿದೆ ಎಂದು ತನಿಖೆಯಿಂದ ತಿಳಿದುಬರಬೇಕಿದೆ. ನಿವೃತ್ತ ಪ್ರಾಂಶುಪಾಲ ಎಸ್.ಎಸ್.ಮುಶಣ್ಣನವರ ಮೃತ ದೇಹವನ್ನು ಕಿಮ್ಸ್‌ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇನ್ನು ಕೊಲೆಗೆ ಕಾರಣವೇನು ಎಂದು ತಿಳಿದುಬಂದಿಲ್ಲ. ಆದರೆ ಕೊಲೆಯಾದ ಮುಶಣ್ಣನವರ ಅಳಿಯನೇ ಕೊಲೆ ಮಾಡಿದ ಶಂಕೆ ವ್ಯಕ್ತವಾಗಿದ್ದು. ಕೊಲೆಗೆ ಕೌಟುಂಬಿಕ ಕಾರಣವಾ ಅನ್ನೋ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಡಿಸಿಪಿ ನೇತೃತ್ವದಲ್ಲಿ ತನಿಖಾ ತಂಡ ರಚನೆಯಾಗಿದೆ. ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಪ್ರವಾಹ ಸಂತ್ರಸ್ತರ ಕಾಳಜಿ ಕೇಂದ್ರಗಳಲ್ಲಿ ನಿಷ್ಕಾಳಜಿ: ಸರಕಾರದ ವಿರುದ್ಧ ಎಚ್‌.ಕೆ.ಪಾಟೀಲ್‌ ಆಕ್ರೋಶ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ