ಆ್ಯಪ್ನಗರ

ಬಿಎ, ಬಿಕಾಂ ಪರೀಕ್ಷೆಯಲ್ಲಿ ಉತ್ತಮ ಸಾಧನೆ

ಹುಬ್ಬಳ್ಳಿ : ಜಗದ್ಗುರು ಮೂರು ಸಾವಿರ ಮಠ ವಿದ್ಯಾವರ್ಧಕ ಸಂಘದ ಕಲಾ ಮತ್ತು ವಾಣಿಜ್ಯ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು 2018-19ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ನಡೆದ ಕರ್ನಾಟಕ ವಿಶ್ವ ವಿದ್ಯಾಲಯದ ಬಿಎ ಹಾಗೂ ಬಿಕಾಂ ಅಂತಿಮ ವರ್ಷದ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಿದ್ದಾರೆ.

Vijaya Karnataka 19 Jul 2019, 5:00 am
ಹುಬ್ಬಳ್ಳಿ : ಜಗದ್ಗುರು ಮೂರು ಸಾವಿರ ಮಠ ವಿದ್ಯಾವರ್ಧಕ ಸಂಘದ ಕಲಾ ಮತ್ತು ವಾಣಿಜ್ಯ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು 2018-19ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ನಡೆದ ಕರ್ನಾಟಕ ವಿಶ್ವ ವಿದ್ಯಾಲಯದ ಬಿಎ ಹಾಗೂ ಬಿಕಾಂ ಅಂತಿಮ ವರ್ಷದ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಿದ್ದಾರೆ.
Vijaya Karnataka Web excellent performance in ba bcom exam
ಬಿಎ, ಬಿಕಾಂ ಪರೀಕ್ಷೆಯಲ್ಲಿ ಉತ್ತಮ ಸಾಧನೆ


ಕಲಾ ವಿಭಾಗದಲ್ಲಿ ಶೇ.83 ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇ.80ರಷ್ಟು ಫಲಿತಾಂಶ ಬಂದಿದೆ. ಬಿಎ ಅಂತಿಮ ವರ್ಷದಲ್ಲಿ ಅಶ್ವಿನಿ ಸೊಸರವಿ ಶೇ.82ರಷ್ಟು ಅಂಕ ಗಳಿಸಿ ಪ್ರಥಮ, ಕ್ರಮವಾಗಿ ಶೇ.81.85 ಮತ್ತು ಶೇ.75 ಅಂಕ ಗಳಿಸಿದ ವೀಣಶ್ರೀ ಪೊಲೀಸ್‌ ಪಾಟೀಲ್‌ ಹಾಗೂ ಅಕ್ಷತಾ ಸುಂಕದ ದ್ವಿತೀಯ ತೃತೀಯ ಸ್ಥಾನ ಪಡೆದಿದ್ದಾರೆ.

ಬಿಕಾಂ ಅಂತಿಮ ವರ್ಷದಲ್ಲಿ ಪದ್ಮಾವತಿ ಬಂಕಾಪುರ ಶೇ.85ರಷ್ಟು ಅಂಕ ಪಡೆದು ಪ್ರಥಮ, ಶೇ.83 ಹಾಗೂ ಶೇ.81ರಷ್ಟು ಅಂಕ ಪಡೆದ ವಂದನಾ ಪೂಂಜಾಲಿ ಹಾಗೂ ಪವನ ಸೋಳಂಕಿ ದ್ವಿತೀಯ ತೃತೀಯ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಜಗದ್ಗುರು, ಆಡಳಿತ ಮಂಡಳಿ ಕಾರ್ಯಾಧ್ಯಕ್ಷರು, ಸದಸ್ಯರು, ಪ್ರಿನ್ಸಿಪಾಲರು ಹಾಗೂ ಉಪನ್ಯಾಸಕ ವೃಂದ ಅಭಿನಂದಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ