ಆ್ಯಪ್ನಗರ

ಬೀಜ ಖರೀದಿಗೆ ಮುಗಿಬಿದ್ದ ರೈತರು

ಧಾರವಾಡ: ಮುಂಗಾರು ಬಿತ್ತನೆ ಸಂಬಂಧ ಧಾರವಾಡದ ರೈತ ಸಂಪರ್ಕ ಕೇಂದ್ರದ ಮೂಲಕ ರೈತರಿಗೆ ಬೀಜ ಹಾಗೂ ಗೊಬ್ಬರ ವಿತರಣೆ ಮಾಡಲಾಗುತ್ತಿದ್ದು, ಬುಧವಾರ ನೂರಾರು ರೈತರು ರೈತ ಸಂಪರ್ಕ ಕೇಂದ್ರಕ್ಕೆ ಆಗಮಿಸಿ ಬೀಜ ಖರೀದಿಸಿದರು.

Vijaya Karnataka 4 Jun 2020, 5:00 am
ಧಾರವಾಡ: ಮುಂಗಾರು ಬಿತ್ತನೆ ಸಂಬಂಧ ಧಾರವಾಡದ ರೈತ ಸಂಪರ್ಕ ಕೇಂದ್ರದ ಮೂಲಕ ರೈತರಿಗೆ ಬೀಜ ಹಾಗೂ ಗೊಬ್ಬರ ವಿತರಣೆ ಮಾಡಲಾಗುತ್ತಿದ್ದು, ಬುಧವಾರ ನೂರಾರು ರೈತರು ರೈತ ಸಂಪರ್ಕ ಕೇಂದ್ರಕ್ಕೆ ಆಗಮಿಸಿ ಬೀಜ ಖರೀದಿಸಿದರು.
Vijaya Karnataka Web farmers who are over seeded
ಬೀಜ ಖರೀದಿಗೆ ಮುಗಿಬಿದ್ದ ರೈತರು


ಧಾರವಾಡ ತಾಲೂಕಿನ ಸುತ್ತಲಿನ ಗ್ರಾಮಗಳ ರೈತರು ಮುಂಗಾರು ಬಿತ್ತನೆಗೆ ರಿಯಾಯತಿ ದರದಲ್ಲಿಹೆಸರು, ಸೋಯಾಬಿನ್‌, ಉದ್ದು ಹಾಗೂ ಹತ್ತಿ ಬೀಜಗಳ ಮತ್ತು ಗೊಬ್ಬರವನ್ನು ಖರೀದಿಸಿದರು. ಸದ್ಯ ಕೊರೊನಾ ಹಾವಳಿ ಜೋರಾಗಿದ್ದು, ಇದರ ಮಧ್ಯೆಯೇ ಸಾಕಷ್ಟು ರೈತರು ಬಿತ್ತನೆಗಾಗಿ ಬೀಜ, ಗೊಬ್ಬರ ಖರೀದಿ ಮಾಡಲು ದೊಡ್ಡ ಮಟ್ಟದಲ್ಲಿಆಗಮಿಸಿದ್ದರು.

ರೈತ ಸಂಪರ್ಕ ಕೇಂದ್ರದ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳದ ರೈತರು, ತಮ್ಮ ಆರೋಗ್ಯದ ಬಗ್ಗೆಯೂ ಸ್ವಲ್ಪ ಗಮನ ಹರಿಸಬೇಕು. ಈ ಸಂಬಂಧ ಜಿಲ್ಲಾಡಳಿತ ಸಾಮಾಜಿಕ ಅಂತರ ಕಾಯ್ದುಕೊಂಡು ರೈತರಿಗೆ ಬಿತ್ತನೆ ಬೀಜಗಳನ್ನು ವಿತರಿಸಬೇಕು ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ