ಆ್ಯಪ್ನಗರ

ಮಾಸ್ಕ್‌ ಧರಿಸದೆ ಸಂಚರಿಸುವವರಿಗೆ 250 ರೂ. ದಂಡ ವಿಧಿಸಲು ಅಧಿಕಾರಿಗಳಿಗೆ ಡಿಸಿ ಖಡಕ್‌ ಆದೇಶ

ಧಾರವಾಡ: ಕೊರೊನಾ ಇಳಿಮುಖವಾಗಿದೆ ಎಂದು ಭಾವಿಸಿ ಸಾರ್ವಜನಿಕರು ಮಾಸ್ಕ್‌ ಧರಿಸದೇ, ಸಾಮಾಜಿಕ ಅಂತರ ಪಾಲನೆ ಮಾಡದೇ ಸಂಚರಿಸುತ್ತಿದ್ದು, ಅಧಿಕಾರಿಗಳು ಜಿಲ್ಲೆಯಲ್ಲಿಮಾಸ್ಕ್‌ ಧರಿಸದವರಿಗೆ ದಂಡ ವಿಧಿಸುವ ಅಭಿಯಾನವನ್ನು ಚುರುಕುಗೊಳಿಸಿ, ಪ್ರತಿದಿನ ತಪ್ಪದೇ ಕಾರ್ಯಾಚರಣೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶಿಸಿದರು.

Vijaya Karnataka 26 Nov 2020, 5:00 am
ಧಾರವಾಡ: ಕೊರೊನಾ ಇಳಿಮುಖವಾಗಿದೆ ಎಂದು ಭಾವಿಸಿ ಸಾರ್ವಜನಿಕರು ಮಾಸ್ಕ್‌ ಧರಿಸದೇ, ಸಾಮಾಜಿಕ ಅಂತರ ಪಾಲನೆ ಮಾಡದೇ ಸಂಚರಿಸುತ್ತಿದ್ದು, ಅಧಿಕಾರಿಗಳು ಜಿಲ್ಲೆಯಲ್ಲಿಮಾಸ್ಕ್‌ ಧರಿಸದವರಿಗೆ ದಂಡ ವಿಧಿಸುವ ಅಭಿಯಾನವನ್ನು ಚುರುಕುಗೊಳಿಸಿ, ಪ್ರತಿದಿನ ತಪ್ಪದೇ ಕಾರ್ಯಾಚರಣೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶಿಸಿದರು.
Vijaya Karnataka Web 25NIJAGUNI1A_21
ಕೊರೊನಾ ನಿಯಂತ್ರಣ ಹಾಗೂ ಜಾಗೃತಿ ಕುರಿತಂತೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಬುಧವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.


ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಬುಧವಾರ ಸರಕಾರದ ಮುಖ್ಯ ಕಾರ್ಯದರ್ಶಿಗಳೊಂದಿಗ ವಿಡಿಯೋ ಸಂವಾದ ಜರುಗಿದ ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಮಾಸ್ಕ್‌ ಬಗ್ಗೆ ಅಲಕ್ಷ್ಯ ತೋರಿದರೆ ಕೊರೊನಾದ 2ನೇ ಅಲೆಯ ಸಾಧ್ಯತೆ ಇದೆ. ವಿವಿಧ ಇಲಾಖೆಗಳವರು ಕೊರೊನಾ ಜಾಗೃತಿ ಮೂಡಿಸಿದರೂ ಕೆಲವರು ಉದಾಸೀನ ತೋರುತ್ತಿದ್ದಾರೆ. ಆದ್ದರಿಂದ ಕೊರೊನಾ ಜಾಗೃತಿ ಹಾಗೂ ಮಾಸ್ಕ್‌ ಅಭಿಯಾನಕ್ಕಾಗಿ ರಚಿಸಿರುವ ಅಧಿಕಾರಿಗಳ ತಂಡ ಇನ್ನಷ್ಟು ಕ್ರಿಯಾಶೀಲವಾಗಬೇಕು ಎಂದರು.

ಮಾಸ್ಕ್‌ ಧರಿಸದೆ ಸಂಚರಿಸುವವರಿಗೆ ಸ್ಥಳದಲ್ಲಿಯೇ 250 ರೂ. ದಂಡ ವಿಧಿಸಬೇಕು. ದಂಡ ಕಟ್ಟಿದ ವ್ಯಕ್ತಿ ಮಾಸ್ಕ್‌ ಧರಿಸದೇ ತಪ್ಪನ್ನು ಪುನರಾವರ್ತಿಸಿದರೆ ಮತ್ತೆ ಅದೇ ರೀತಿ ದಂಡ ವಿಧಿಸಬೇಕು. ಈ ಮೂಲಕ ಜನರಿಗೆ ಮಾಸ್ಕ್‌ ಧರಿಸಿ; ಇಲ್ಲಾದಂಡ ಕಟ್ಟಿ ಎಂಬ ಕಠಿಣ ಸಂದೇಶವನ್ನು ತಲುಪಿಸಬೇಕೆಂದು ಜಿಲ್ಲಾಧಿಕಾರಿಗಳು ಆದೇಶಿಸಿದರು.

ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿಪಾಲಿಕೆ ಆಯುಕ್ತರ ಹಾಗೂ ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್‌ ಆಯುಕ್ತರ ನೇತೃತ್ವದಲ್ಲಿಹಾಗೂ ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿಗಳು ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲಿಸ್ಥಳೀಯ ನಗರ ಸಂಸ್ಥೆ ಮತ್ತು ಪೊಲೀಸ್‌ ಸಿಬ್ಬಂದಿ ಸಹಯೋಗದಲ್ಲಿಮಾಸ್ಕ್‌ ಅಭಿಯಾನ ಕೈಗೊಳ್ಳಬೇಕೆಂದು ಸೂಚಿಸಿದರು.

ಎಸ್‌ಪಿ ಪಿ. ಕೃಷ್ಣಕಾಂತ, ಮಹಾನಗರ ಉಪಪೊಲೀಸ್‌ ಆಯುಕ್ತ ರಾಮರಾಜನ್‌ ಕೆ. ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಡಾ. ಗೋಪಾಲಕೃಷ್ಣ ಬಿ., ಜಿಲ್ಲಾಆರೋಗ್ಯ ಅಧಿಕಾರಿ ಡಾ.ಯಶವಂತ ಮದೀನಕರ, ಜಿಲ್ಲಾಶಸ್ತೖ ಚಿಕಿತ್ಸಕ ಡಾ.ಶಿವಕುಮಾರ ಮಾನಕರ, ಜಿಲ್ಲಾಸರ್ವೇಕ್ಷಣಾಧಿಕಾರಿ ಡಾ.ಸುಜಾತಾ ಹಸವಿಮಠ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ