ಆ್ಯಪ್ನಗರ

ಬಿಜೆಪಿ ನಾಯಕರಿಂದ ಬೆಂಕಿ ಹಚ್ಚುವ ಕೆಲಸ: ಸಿದ್ದರಾಮಯ್ಯ

ಹುಬ್ಬಳ್ಳಿ : ಮಂಡ್ಯ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಸುಮಲತಾಗೆ ನಾವು ಆಂತರಿಕ ಬೆಂಬಲ ನೀಡಿರುವುದಾಗಿ ಹೇಳುತ್ತಿರುವ ಬಿಜೆಪಿ ನಾಯಕರು ನಮ್ಮಲ್ಲಿಯೇ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

Vijaya Karnataka 16 May 2019, 5:00 am
ಹುಬ್ಬಳ್ಳಿ : ಮಂಡ್ಯ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಸುಮಲತಾಗೆ ನಾವು ಆಂತರಿಕ ಬೆಂಬಲ ನೀಡಿರುವುದಾಗಿ ಹೇಳುತ್ತಿರುವ ಬಿಜೆಪಿ ನಾಯಕರು ನಮ್ಮಲ್ಲಿಯೇ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
Vijaya Karnataka Web fire burning by bjp leaders siddaramaiah
ಬಿಜೆಪಿ ನಾಯಕರಿಂದ ಬೆಂಕಿ ಹಚ್ಚುವ ಕೆಲಸ: ಸಿದ್ದರಾಮಯ್ಯ


ಹುಬ್ಬಳ್ಳಿ ತಾಲೂಕಿನ ಬೂ. ಅರಳಿಕಟ್ಟಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಸುಮಲತಾಗೆ ಬೆಂಬಲ ಸೂಚಿಸಿದವರು ಬಿಜೆಪಿಯವರು. ಈಗ ಜಗದೀಶ ಶೆಟ್ಟರ್‌ ನನ್ನ ಹೆಸರು ತಳಕು ಹಾಕುತ್ತಿದ್ದಾರೆ. ಇಂತಹದರಲ್ಲಿ ಬಿಜೆಪಿ ನಾಯಕರು ನಿಸ್ಸೀಮರು'' ಎಂದು ಕುಟುಕಿದರು.

ಮೈತ್ರಿ ಸರಕಾರಕ್ಕೆ ಸಿದ್ದರಾಮಯ್ಯ ಟೈಂ ಬಾಂಬ್‌ ಫಿಕ್ಸ್‌ ಮಾಡಿದ್ದಾರೆ ಎಂಬ ಶೆಟ್ಟರ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ''ಕಾಂಗ್ರೆಸ್‌-ಜೆಡಿಎಸ್‌ ಮಧ್ಯೆ ಒಡಕು ಮೂಡಿಸಲು ಶೆಟ್ಟರ್‌ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಅದು ಸಫಲ ಆಗುವುದಿಲ್ಲ. ಇನ್ನೂ ನಾಲ್ಕು ವರ್ಷ ಮೈತ್ರಿ ಸರಕಾರ ಅಧಿಕಾರ ನಡೆಸಲಿದೆ. ಬಿಜೆಪಿಯವರಿಗೆ ಹೇಳಿಕೊಳ್ಳಲು ಯಾವುದೇ ವಿಷಯ ಇಲ್ಲದ್ದರಿಂದ ಈ ರೀತಿ ಸುಳ್ಳು ಮಾತುಗಳನ್ನು ಆಡುತ್ತಿದ್ದಾರೆ'' ಎಂದು ಹರಿಹಾಯ್ದರು.

''ವಿಶ್ವನಾಥ ಹೇಳಿಕೆ ಬಗ್ಗೆ ಈಗಾಗಲೇ ನಾನು ಪ್ರತಿಕ್ರಿಯಿಸಿದ್ದೇನೆ. ಈ ಬಗ್ಗೆ ನಾನು ಇಲ್ಲಿ ಏನನ್ನೂ ಹೇಳಲಾರೆ. ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡುವೆ. ನಾನು ಮತ್ತು ಕುಮಾರಸ್ವಾಮಿ ಹುಬ್ಬಳ್ಳಿ ಹೋಟೆಲ್‌ವೊದರಲ್ಲಿ ಗುಪ್ತ ಸಭೆ ನಡೆಸಿದ್ದೇವೆ ಎಂಬುದು ಸುಳ್ಳು ಸುದ್ದಿ'' ಎಂದು ಪ್ರಶ್ನೆಯೊಂದಕ್ಕೆ ಸಿದ್ದರಾಮಯ್ಯ ಉತ್ತರ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ