ಆ್ಯಪ್ನಗರ

ನೃಪತುಂಗ ಬೆಟ್ಟಕ್ಕೆ ಬೆಂಕಿ: ತಪ್ಪಿದ ಅನಾಹುತ

ಹುಬ್ಬಳ್ಳಿ : ಇಲ್ಲಿಯ ನೃಪತುಂಗ ಬೆಟ್ಟದಲ್ಲಿ ಸೋಮವಾರ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಯನ್ನು ಸ್ಥಳೀಯರು ನಂದಿಸಿ ಭಾರಿ ಪ್ರಮಾಣದ ಸಂಭವನೀಯ ಅನಾಹುತವನ್ನು ತಪ್ಪಿಸಿದ್ದಾರೆ.

Vijaya Karnataka 26 Feb 2019, 5:00 am
ಹುಬ್ಬಳ್ಳಿ : ಇಲ್ಲಿಯ ನೃಪತುಂಗ ಬೆಟ್ಟದಲ್ಲಿ ಸೋಮವಾರ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಯನ್ನು ಸ್ಥಳೀಯರು ನಂದಿಸಿ ಭಾರಿ ಪ್ರಮಾಣದ ಸಂಭವನೀಯ ಅನಾಹುತವನ್ನು ತಪ್ಪಿಸಿದ್ದಾರೆ.
Vijaya Karnataka Web DRW-25MANJU5B
ನೃಪತುಂಗ ಬೆಟ್ಟದಲ್ಲಿ ಹೊತ್ತಿಕೊಂಡಿರುವ ಬೆಂಕಿಯನ್ನು ನಂದಿಸುತ್ತಿರುವ ಸಿಬ್ಬಂದಿ ಮತ್ತು ಸ್ಥಳೀಯರು.


ಮಧ್ಯಾಹ್ನ ನೃಪತುಂಗ ಬೆಟ್ಟದಲ್ಲಿ ಬೇಲಿ ಬಳಿ ಬೆಂಕಿ ಕಾಣಿಸಿಕೊಂಡಿತ್ತು. ಇನ್ನೇನು ದೊಡ್ಡ ಪ್ರಮಾಣದಲ್ಲಿ ಹರಡಿಕೊಳ್ಳುವಷ್ಟರಲ್ಲಿ ಎಚ್ಚೆತ್ತುಕೊಂಡು ಅಲ್ಲಿನ ಸಿಬ್ಬಂದಿ ಮತ್ತು ಸ್ಥಳೀಯರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಟ್ಟದ ಪಕ್ಕದಲ್ಲಿರುವ ನೀರು ಸಂಗ್ರಹಣ ಘಟಕದಿಂದ ನೀರಿನ ಟ್ಯಾಂಕರ್‌ನ್ನು ತರಿಸಿಕೊಂಡು ಸ್ಥಳೀಯರು ಹಾಗೂ ಸಿಬ್ಬಂದಿ ಅರ್ಧ ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿ ಅನಾಹುತ ತಪ್ಪಿಸಿದ್ದಾರೆ.

ಘಟನಾ ಸ್ಥಳಕ್ಕೆ ಅಶೋಕನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಸಿಗರೇಟ್‌ ಸೇವಿಸಿ ಎಸೆದಿದ್ದರಿಂದ ಈ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಅಲ್ಲದೆ, ದೊಡ್ಡ ಪ್ರಮಾಣದ ಬೆಂಕಿ ಅನಾಹುತ ಆಗುವ ಪೂರ್ವದಲ್ಲಿಯೇ ಸ್ಥಳೀಯರು ಹಾಗೂ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ