ಆ್ಯಪ್ನಗರ

ಜಿಲ್ಲಾಡಳಿತದಿಂದ ಸಂತ್ರಸ್ತರಿಗೆ ಆಹಾರ ಧಾನ್ಯಗಳ ಕಿಟ್‌

ಹುಬ್ಬಳ್ಳಿ : ಧಾರವಾಡ ಜಿಲ್ಲೆಯಲ್ಲಿ ನೆರೆ ಸಂತ್ರಸ್ತರಿಗೆ ಆಸರೆಯಾಗಲು ಹೆಚ್ಚುವರಿ ನೆರವು ಒದಗಿಸಲು (ಎಕ್ಸ್‌ಗ್ರೇಷಿಯಾದಡಿ) ಜಿಲ್ಲಾಡಳಿತದಿಂದ 33852 ಆಹಾರಧಾನ್ಯಗಳ ಕಿಟ್‌ಗಳನ್ನು ಪೂರೈಸಲು ಕ್ರಮಕೈಗೊಳ್ಳಲಾಗಿದೆ.

Vijaya Karnataka 31 Aug 2019, 5:00 am
ಹುಬ್ಬಳ್ಳಿ : ಧಾರವಾಡ ಜಿಲ್ಲೆಯಲ್ಲಿ ನೆರೆ ಸಂತ್ರಸ್ತರಿಗೆ ಆಸರೆಯಾಗಲು ಹೆಚ್ಚುವರಿ ನೆರವು ಒದಗಿಸಲು (ಎಕ್ಸ್‌ಗ್ರೇಷಿಯಾದಡಿ) ಜಿಲ್ಲಾಡಳಿತದಿಂದ 33852 ಆಹಾರಧಾನ್ಯಗಳ ಕಿಟ್‌ಗಳನ್ನು ಪೂರೈಸಲು ಕ್ರಮಕೈಗೊಳ್ಳಲಾಗಿದೆ.
Vijaya Karnataka Web food grain kit for victims
ಜಿಲ್ಲಾಡಳಿತದಿಂದ ಸಂತ್ರಸ್ತರಿಗೆ ಆಹಾರ ಧಾನ್ಯಗಳ ಕಿಟ್‌


ಹುಬ್ಬಳ್ಳಿಯ ಅಮರಗೋಳ ಎಪಿಎಂಸಿ ಆವರಣದ ಗೋದಾಮುಗಳಲ್ಲಿ ಆಹಾರ ಧಾನ್ಯಗಳ ಪೊಟ್ಟಣಗಳನ್ನು ತಯಾರಿಸುವ ಕಾರ್ಯ ಸಮರೋಪಾದಿಯಲ್ಲಿ ಸಾಗಿದ್ದು, ಬೇಡಿಕೆಗಳಿಗೆ ಅನುಸಾರವಾಗಿ ಜಿಲ್ಲೆಯ ತಾಲೂಕುಗಳಿಗೆ ಸರಬರಾಜು ಮಾಡಲಾಗುತ್ತಿದೆ.

ಪ್ರಕೃತಿ ವಿಕೋಪಕ್ಕೆ ಒಳಗಾದ ಸಂತ್ರಸ್ತರಿಗೆ ನೀಡುತ್ತಿರುವ ವಿಶೇಷ ಆಹಾರಕಿಟ್‌ಒಂದರಲ್ಲಿ 10ಕೆ.ಜಿ. ಅಕ್ಕಿ, 1 ಕೆ.ಜಿ. ತೊಗರಿ ಬೇಳೆ, 1 ಕೆಜಿ ಸಕ್ಕರೆ, 1 ಕೆ.ಜಿ. ಅಯೋಡಿನ್‌ಯುಕ್ತ ಉಪ್ಪು, 1ಲೀಟರ್‌ ತಾಳೆ ಎಣ್ಣೆ ಹಾಗೂ ಪ್ರತ್ಯೇಕವಾಗಿ 5 ಲೀಟರ್‌ ಸೀಮೆ ಎಣ್ಣೆಯಕ್ಯಾನ್‌ ಇರುತ್ತದೆ.

ಪೊಟ್ಟಣ ತಯಾರಿಕೆ ಕಾರ್ಯದ ಮೇಲ್ವಿಚಾರಣೆ ನೋಡಿಕೊಳ್ಳುತ್ತಿರುವ ಆಹಾರ,ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ಸದಾಶಿವ ಮರ್ಜಿ ಹಾಗೂ ಕರ್ನಾಟಕ ಆಹಾರ ಸರಬರಾಜು ನಿಗಮದ ವ್ಯವಸ್ಥಾಪಕಿ ರಾಜಶ್ರೀ ಜೈನಾಪುರ ನೇತೃತ್ವದಲ್ಲಿ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ 80 ಕ್ಕೂ ಹೆಚ್ಚು ಕಾರ್ಮಿಕರು ಆಹಾರ ಧಾನ್ಯಗಳ ಕಿಟ್‌ತಯಾರಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಆಹಾರ ಇಲಾಖೆಯ ಜಂಟಿ ನಿರ್ದೇಶಕ ಸದಾಶಿವ ಮರ್ಜಿ ಹೇಳಿದರು.

ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ರೇವಣಕರ್‌, ಅಕ್ಷ ರ ದಾಸೋಹ ಯೋಜನೆಯ ಶಿಕ್ಷ ಣಾಧಿಕಾರಿ ಬಿ.ಎಸ್‌.ಮಾಯಾಚಾರ್ಯ ಮತ್ತಿತರರು ಆಹಾರ ಕಿಟ್‌ಗಳ ಸಿದ್ಧಪಡಿಸುವಿಕೆ ಕಾರ್ಯದ ಉಸ್ತುವಾರಿ ನಿರ್ವಹಿಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ