ಆ್ಯಪ್ನಗರ

ಬೇಂದ್ರೆ ಬಸ್‌ ಪುನರಾರಂಭಕ್ಕೆ ಒತ್ತಾಯ

ಹುಬ್ಬಳ್ಳಿ : ಬೇಂದ್ರೆ ಬಸ್‌ಗಳ ರದ್ದತಿಯಿಂದ ಹುಬ್ಬಳ್ಳಿ-ಧಾರವಾಡ ನಡುವೆ ಓಡಾಡುವ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದ್ದು, ಕೂಡಲೇ ರದ್ದು ತೆರವುಗೊಳಿಸಿ ಮೊದಲಿನಂತೆ ಬೇಂದ್ರೆ ಬಸ್‌ ಸಂಚಾರಕ್ಕೆ ಅನುಮತಿ ನೀಡಬೇಕು ಎಂದು ನಗರದ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ ಒತ್ತಾಯಿಸಿದೆ.

Vijaya Karnataka 10 Jul 2019, 5:00 am
ಹುಬ್ಬಳ್ಳಿ : ಬೇಂದ್ರೆ ಬಸ್‌ಗಳ ರದ್ದತಿಯಿಂದ ಹುಬ್ಬಳ್ಳಿ-ಧಾರವಾಡ ನಡುವೆ ಓಡಾಡುವ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದ್ದು, ಕೂಡಲೇ ರದ್ದು ತೆರವುಗೊಳಿಸಿ ಮೊದಲಿನಂತೆ ಬೇಂದ್ರೆ ಬಸ್‌ ಸಂಚಾರಕ್ಕೆ ಅನುಮತಿ ನೀಡಬೇಕು ಎಂದು ನಗರದ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ ಒತ್ತಾಯಿಸಿದೆ.
Vijaya Karnataka Web forced to restart bus
ಬೇಂದ್ರೆ ಬಸ್‌ ಪುನರಾರಂಭಕ್ಕೆ ಒತ್ತಾಯ


ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು, ಸಾರಿಗೆ ಸಂಸ್ಥೆ ಬಸ್‌ಗಳ ಓಡಾಟ ಕಡಿಮೆಯಾಗಿದೆ. ಓಡಾಡುವ ಬಸ್‌ಗಳು ಸಮಯಕ್ಕೆ ಸರಿಯಾಗಿ ಬರುವುದಿಲ್ಲ. ಅಲ್ಲದೇ ಕೆಲವು ಕಡೆಗಳಲ್ಲಿ ನಿಲುಗಡೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಬಿಆರ್‌ಟಿಎಸ್‌ ಬಸ್‌ ನಿಲ್ದಾಣಗಳು ಕೆಲವೊಂದು ಬಸ್‌ ಸ್ಟಾಪ್‌ನಿಂದ ದೂರ ಇದ್ದು, ಬಸ್‌ ಹತ್ತಲು ಹಾಗೂ ಇಳಿದು ಬರಲು ಸುಮಾರು ದೂರ ನಡೆಯಬೇಕಾದ ಅನಿವಾರ್ಯತೆಯಿದೆ. ಇದರಿಂದ ವೃದ್ಧರಿಗೆ, ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಎಲ್ಲಿಲ್ಲದ ತೊಂದರೆಯಾಗುತ್ತದೆ. ಈ ಎಲ್ಲ ಸಮಸ್ಯೆಗಳ ನಿವಾರಣೆಗಾಗಿ ಕೂಡಲೇ ಬೇಂದ್ರೆ ಬಸ್‌ಗಳ ಸಂಚಾರ ಪುನರಾರಂಭಿಸಲು ಅನುಮತಿ ನೀಡಬೇಕು ಎಂದು ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ನಾಗೇಶ್‌.ಎಚ್‌.ಮಾನ್ವಿ ಹಾಗೂ ಸದಸ್ಯರು ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ