ಆ್ಯಪ್ನಗರ

ಗಾಂಧೀಜಿ ಸರಳ ನಡೆನುಡಿ ನಮಗೆಲ್ಲರಿಗೂ ಸ್ಪೂರ್ತಿ

ಧಾರವಾಡ: ಮಹಾತ್ಮಾ ಗಾಂಧೀಜಿಯವರ ಜೀವನ ಚರಿತ್ರೆ ಇಂದಿನ ಕಾಲಘಟ್ಟಕ್ಕೆ ಅತ್ಯಂತ ಪ್ರಸ್ತುತವಾದುದು. ಅವರ ಜೀವನ ಹಾಗೂ ಸ್ವಾತಂತ್ರತ್ರ್ಯ ಚಳುವಳಿ, ಸರಳ ನಡೆನುಡಿ ನಮಗೆಲ್ಲರಿಗೂ ಸ್ಪೂರ್ತಿ ಎಂದು ಜಿಲ್ಲಾಧಿಕಾರಿ ಎಂ.ದೀಪಾ ಹೇಳಿದರು.

Vijaya Karnataka 6 Nov 2019, 5:00 am
ಧಾರವಾಡ: ಮಹಾತ್ಮಾ ಗಾಂಧೀಜಿಯವರ ಜೀವನ ಚರಿತ್ರೆ ಇಂದಿನ ಕಾಲಘಟ್ಟಕ್ಕೆ ಅತ್ಯಂತ ಪ್ರಸ್ತುತವಾದುದು. ಅವರ ಜೀವನ ಹಾಗೂ ಸ್ವಾತಂತ್ರತ್ರ್ಯ ಚಳುವಳಿ, ಸರಳ ನಡೆನುಡಿ ನಮಗೆಲ್ಲರಿಗೂ ಸ್ಪೂರ್ತಿ ಎಂದು ಜಿಲ್ಲಾಧಿಕಾರಿ ಎಂ.ದೀಪಾ ಹೇಳಿದರು.
Vijaya Karnataka Web gandhijis simple walk inspired us all
ಗಾಂಧೀಜಿ ಸರಳ ನಡೆನುಡಿ ನಮಗೆಲ್ಲರಿಗೂ ಸ್ಪೂರ್ತಿ


ನಗರದ ಕೇಂದ್ರ ಕಾರಾಗೃಹದಲ್ಲಿರುವ ಗಾಂಧಿ ಭವನದಲ್ಲಿಹಮ್ಮಿಕೊಂಡ ಮಹಾತ್ಮ ಗಾಂಧೀಜಿಯವರ 150ನೇ ಜಯಂತಿ ಅಂಗವಾಗಿ ಅಲ್ಪಾವಧಿ ಶಿಕ್ಷಾಬಂಧಿಗಳ ಅವಧಿ ಪೂರ್ವ ಬಿಡುಗಡೆ ಸಮಾರಂಭವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.

ಗಾಂಧೀಜಿಯವರ ಆದರ್ಶಗಳನ್ನು ಜೀವನದಲ್ಲಿಅಳವಡಿಸಿಕೊಳ್ಳಬೇಕು. ಸಮಾಜದ ಮುಖ್ಯವಾಹಿನಿಯಲ್ಲಿಗುರುತಿಸಿಕೊಂಡು ಇತರರಿಗೆ ಮಾದರಿಯಾಗಬೇಕು ಎಂದು ಕೇಂದ್ರ ಕಾರಾಗೃಹದ ಇಬ್ಬರು ಅಲ್ಪಾವಧಿ ಶಿಕ್ಷಾ ಬಂಧಿಗಳ ಅವಧಿ ಪೂರ್ವ ಬಿಡುಗಡೆಯಾಗುವ ಬಂಧಿಗಳಿಗೆ ಸಲಹೆ ನೀಡಿದರು.

ಇದೇ ವೇಳೆ ಶಿಕ್ಷಾಬಂಧಿಗೆ ಮಹಾತ್ಮಾ ಗಾಂಧೀಜಿಯವರ ಆತ್ಮಕಥೆಯ ಪುಸ್ತಕ ಹಾಗೂ ಪ್ರಮಾಣ ಪತ್ರ ನೀಡಿ ಬಿಡುಗಡೆಗೊಳಿಸಲಾಯಿತು.

ಡಾ.ಅನಿತಾ.ಆರ್‌.ಅಧ್ಯಕ್ಷತೆ ವಹಿಸಿದ್ದರು. ಎಸ್‌.ಡಿ.ಗಲ್ಲೆ, ದುಂಡಪ್ಪ ತುರಾದಿ, ಆನಂದ ಭಜಂತ್ರಿ, ಶಿವಾಜಿ ಲಮಾಣಿ, ಡಾ.ಸಿದ್ಧಾಂತಿ ಉಪಸ್ಥಿತರಿದ್ದರು. ಜ್ಯೋತಿ ಕೆ ಪ್ರಾರ್ಥಿಸಿದರು. ಪಿ.ಬಿ ಕುರಬೇಟ್‌ ಸ್ವಾಗತಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ