ಆ್ಯಪ್ನಗರ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

ಹುಬ್ಬಳ್ಳಿ : ತಾಲೂಕಿನ ನೂಲ್ವಿ ಗ್ರಾಮದ ಜಗದ್ಗುರು ರೇಣುಕಾಚಾರ್ಯ ಎಜುಕೇಶನ್‌ ಸೊಸೈಟಿಯ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು.

Vijaya Karnataka 27 Jun 2019, 5:00 am
ಹುಬ್ಬಳ್ಳಿ : ತಾಲೂಕಿನ ನೂಲ್ವಿ ಗ್ರಾಮದ ಜಗದ್ಗುರು ರೇಣುಕಾಚಾರ್ಯ ಎಜುಕೇಶನ್‌ ಸೊಸೈಟಿಯ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು.
Vijaya Karnataka Web HBL-2606-2-3-26 SONIYA
ಹುಬ್ಬಳ್ಳಿ ತಾಲೂಕಿನ ನೂಲ್ವಿ ಗ್ರಾಮದ ರೇಣುಕಾಚಾರ್ಯ ಎಜುಕೇಶನ್‌ ಸೊಸೈಟಿಯ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.


ಸಮಾರಂಭದಲ್ಲಿ ಭಾಗವಹಿಸಿದ್ದ ಐಎಎಸ್‌ನಲ್ಲಿ 17ನೇ ರಾರ‍ಯಂಕ್‌ ಪಡೆದ ರಾಹುಲ್‌ ಎಸ್‌.ಸಂಕನೂರು ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ತಾವು ಅಂದುಕೊಂಡಿದ್ದನ್ನು ಸಾಧಿಸಬೇಕಾದರೆ ಹಾಗೂ ಉನ್ನತ ಜೀವನ ಮಟ್ಟ ತಲುಪಬೇಕಾದರೆ ವಿದ್ಯಾರ್ಥಿ ದೆಸೆಯಿಂದಲೇ ಯೋಜನೆಯನ್ನು ಹಾಕಿಕೊಳ್ಳಬೇಕೆಂದು ಸಲಹೆ ಮಾಡಿದರು.

ಇದೇ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಶೇ. 85ಕ್ಕೂ ಹೆಚ್ಚು ಅಂಕ ಗಳಿಸಿದ 15 ಹಾಗೂ ಪಿಯುಸಿಯಲ್ಲಿ 6 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಸಂಸ್ಥೆ ಅಧ್ಯಕ್ಷ ರು ಹಾಗೂ ಮಾಜಿ ಸಚಿವ ಪಿ.ಸಿ.ಸಿದ್ದನಗೌಡ್ರ, ಕಾರ್ಯದರ್ಶಿ ಶಂಕರ ಪಾಟೀಲ್‌, ಹಿರಿಯ ನಿರ್ದೇಶಕ ವಿ.ಜಿ.ಪಾಟೀಲ್‌, ಜಿ.ಬಿ.ಘಾಡಿಗೆ, ಮುಖಂಡರಾದ ಶಿವಾನಂದ ಹಿರೇಮಠ, ಶಿವಾನಂದ ಕೊಡ್ಲಿ, ವೈ.ಎಸ್‌.ಸಿದ್ದನಗೌಡ್ರ, ಎನ್‌.ಎಸ್‌.ಪಾಟೀಲ್‌ ಭಾಗವಹಿಸಿದ್ದರು.

ಎಸ್‌.ಬಿ.ಕರೆಪ್ಪಗೌಡ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಎನ್‌.ವಿ.ವೈದ್ಯ ಸ್ವಾಗತಿಸಿದರು. ಪ್ರಭು.ಎಸ್‌.ತಳವಾರ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ