ಆ್ಯಪ್ನಗರ

ಉತ್ತಮ ಸಂಸ್ಕಾರಯುತ ಶಿಕ್ಷಣ ನೀಡಿ

ಧಾರವಾಡ: ಸಂಸಾರವಿಲ್ಲದ ಬದುಕಿಗೆ ಭವಿಷ್ಯವಿಲ್ಲ. ಭವಿಷ್ಯವಿದ್ದರೂ ಅರ್ಥವಿಲ್ಲಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪದಕಿ ಹೇಳಿದರು. ಇಲ್ಲಿನ ಸಂಪಿಗೆನಗರದ ಬಸವರಡ್ಡಿ ಸಮೂಹ ಶಿಕ್ಷಣ ಸಂಸ್ಥೆಗಳು ಹಮ್ಮಿಕೊಂಡ ಸಾಂಸ್ಕೃತಿಕ ಉತ್ಸವ 2020 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

Vijaya Karnataka 29 Jan 2020, 5:00 am
ಧಾರವಾಡ: ಸಂಸಾರವಿಲ್ಲದ ಬದುಕಿಗೆ ಭವಿಷ್ಯವಿಲ್ಲ. ಭವಿಷ್ಯವಿದ್ದರೂ ಅರ್ಥವಿಲ್ಲಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪದಕಿ ಹೇಳಿದರು. ಇಲ್ಲಿನ ಸಂಪಿಗೆನಗರದ ಬಸವರಡ್ಡಿ ಸಮೂಹ ಶಿಕ್ಷಣ ಸಂಸ್ಥೆಗಳು ಹಮ್ಮಿಕೊಂಡ ಸಾಂಸ್ಕೃತಿಕ ಉತ್ಸವ 2020 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
Vijaya Karnataka Web give a good cultured education
ಉತ್ತಮ ಸಂಸ್ಕಾರಯುತ ಶಿಕ್ಷಣ ನೀಡಿ


ವಿಜ್ಞಾನ ತಂತ್ರಜ್ಞಾನದ ಬೆಳವಣಿಗೆಯಿಂದ ಜೀವನ ಶೈಲಿಯೂ ಬದಲಾಗಿದೆ. ಆದರೆ, ನೈತಿಕ ಮೌಲ್ಯಗಳು ಅಧಃಪತನವಾಗಿರುವುದು ದುರದೃಷ್ಟಕರ. ಶಿಕ್ಷಕರು, ಪಾಲಕರು ಮಕ್ಕಳಿಗೆ ನಾಗರಿಕ ಸಂಸ್ಕಾರ ನೀಡಿ ಅವರನ್ನು ಹೃದಯವಂತರನ್ನಾಗಿ ರೂಪಿಸಬೇಕು. ಶಾಲಾಭಿಮಾನ, ಗುರು ಹಿರಿಯರ ಬಗ್ಗೆ ಗೌರವ ಭಾವನೆ ಮೂಡುವಂತೆ ಸಂಸ್ಕಾರಯುತ ಶಿಕ್ಷಣ ನೀಡಿ ಎಂದು ಹೇಳಿದರು.

ರಾಜ್ಯ ಸಂಪನ್ಮೂಲ ವ್ಯಕ್ತಿ ವೀರಣ್ಣ ಒಡ್ಡಿನ ಸನ್ಮಾನ ಸ್ವೀಕರಿಸಿ ಮಾತನಾಡಿ, ಇಂದು ಜಗತ್ತು ಮುನ್ನಡೆಯುತ್ತಿರುವುದು ಮಕ್ಕಳ ಹೆಜ್ಜೆಗಳ ಮೇಲೆ. ಭಾರತದ ಭವಿಷ್ಯವು ವರ್ಗದ ಕೋಣೆಯಲ್ಲಡಗಿದೆ. ಶಿಶು ಕೇಂದ್ರಿಕೃತ ಶಿಕ್ಷಣ ನೀಡಿ ವಿದ್ಯಾರ್ಥಿಗಳಲ್ಲಿಅಕ್ಕರೆ, ಅಕ್ಷರ, ಅರಿವು ಮೂಡಿಸುವ ಜವಾಬ್ದಾರಿ ಶಿಕ್ಷಕರದಾಗಿದೆ. ಶಿಕ್ಷಕರು ಗುರುಗಳಾಗಬೇಕು. ಶಾಲೆ ಗುರುಕುಲವಾಗಬೇಕು ಎಂದರು.

ಅಧ್ಯಕ್ಷತೆ ವಹಿಸಿ ಬಸವರಡ್ಡಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಶಂಕರ ಬಸವರಡ್ಡಿ ಮಾತನಾಡಿ, ಸ್ಪರ್ಧಾತ್ಮಕ ಜಗತ್ತಿನ ತಕ್ಕಂತೆ ವಿದ್ಯಾರ್ಥಿಗಳ ಭವಿಷ್ಯವನ್ನು ಶಿಕ್ಷಣ ಸಂಸ್ಥೆಗಳು ರೂಪಿಸಬೇಕಿದೆ. ವಿದ್ಯಾರ್ಥಿಗಳನ್ನು ಸಹಪಠ್ಯದಲ್ಲಿತೊಡಗಿಸಿ, ಸೃಜನಶೀಲತೆ ಹಾಗೂ ಪ್ರಾಯೋಗಿಕ ಜ್ಞಾನ ಮೂಡಿಸುವಂತೆ ಸಿದ್ಧಗೊಳಿಸಬೇಕು. ಕಲಿಕಾ ಪರಿಸರ ಚನ್ನಾಗಿದ್ದರೆ ಮಾತ್ರ ಗುಣಾತ್ಮಕ ಶಿಕ್ಷಣ ನೀಡಲು ಸಾಧ್ಯ. ಮಕ್ಕಳ ಉತ್ತಮ ನಾಳೆಗಾಗಿ ಶಿಕ್ಷಕರು ಪ್ರಯತ್ನಿಸಬೇಕು ಎಂದರು. ಸಾಂಸ್ಕೃತಿಕ ಉತ್ಸವದ ಅಂಗವಾಗಿ ವೈವಿಧ್ಯಮಯ ಕಾರ್ಯಕ್ರಮಗಳು ಜರುಗಿದವು.

ಕಾರ್ಯಕ್ರಮದಲ್ಲಿಪ್ರಾಚಾರ್ಯ ತಿಪ್ಪಣ್ಣ ಹೊಸಮನಿ, ರಮೇಶ ಮಡಿವಾಳರ ಇದ್ದರು. ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಶಶಿಕಲಾ ಬಸವರಡ್ಡಿ ಪ್ರಾಸ್ತಾವಿಸಿದರು. ಪ್ರಾಚಾರ್ಯ ವೈ.ಬಿ. ಗಡೆಣ್ಣವರ್‌ ವರದಿ ವಾಚಿಸಿದರು. ಕವಿತಾನಾಯ್ಕ ಮಧುಮತಿ ನಿರೂಪಿಸಿದರು. ಮೇಘಾ ಅಂಚಲಕರ್‌ ಸ್ವಾಗತಿಸಿದರು. ರತ್ನಾ ಬೆಟಗೇರಿ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ