ಆ್ಯಪ್ನಗರ

‘ಸರಕಾರದ ಧೋರಣೆಗೆ ಬೇಸತ್ತ ಜನ’

ಹುಬ್ಬಳ್ಳಿ : ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶವು ರಾಜ್ಯ ಬಿಜೆಪಿ ಸರಕಾರದ ಜನ ವಿರೋಧಿ ನೀತಿಗೆ ಹಾಗೂ ಸರಕಾರದ ಕಾರ್ಯ ವೈಖರಿಗೆ ಜನರು ಕೊಟ್ಟ ತೀರ್ಪು ಎಂದು ಶಾಸಕ ಪ್ರಸಾದ ಅಬ್ಬಯ್ಯ ತಿಳಿಸಿದ್ದಾರೆ.

Vijaya Karnataka 16 Nov 2019, 5:00 am
ಹುಬ್ಬಳ್ಳಿ : ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶವು ರಾಜ್ಯ ಬಿಜೆಪಿ ಸರಕಾರದ ಜನ ವಿರೋಧಿ ನೀತಿಗೆ ಹಾಗೂ ಸರಕಾರದ ಕಾರ್ಯ ವೈಖರಿಗೆ ಜನರು ಕೊಟ್ಟ ತೀರ್ಪು ಎಂದು ಶಾಸಕ ಪ್ರಸಾದ ಅಬ್ಬಯ್ಯ ತಿಳಿಸಿದ್ದಾರೆ.
Vijaya Karnataka Web government tired of government attitude
‘ಸರಕಾರದ ಧೋರಣೆಗೆ ಬೇಸತ್ತ ಜನ’


ರಾಜ್ಯದ 14 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ418 ಸ್ಥಾನಗಳ ಪೈಕಿ ಅತ್ಯಧಿಕ 151 ಸ್ಥಾನಗಳನ್ನು ಕಾಂಗ್ರೆಸ್‌ ಗೆಲ್ಲುವ ಮೂಲಕ ಆಡಳಿತಾರೂಢ ಬಿಜೆಪಿಗೆ ಮರ್ಮಾಘಾತ ನೀಡಿದೆ. ಈ ಮೂಲಕ ಕಾಂಗ್ರೆಸ್‌ ಮುಕ್ತ ಭಾರತದ ಬಿಜೆಪಿ ಕನಸನ್ನು ನುಚ್ಚುನೂರು ಮಾಡಿದೆ ಎಂದಿದ್ದಾರೆ.

ರಾಜ್ಯದ 4 ನಗರಸಭೆಗಳ 194 ಸ್ಥಾನಗಳ ಪೈಕಿ ಬಿಜೆಪಿ ಕೇವಲ 12 ಸ್ಥಾನಗಳಲ್ಲಿಮಾತ್ರ ಜಯ ಗಳಿಸಿದ್ದನ್ನು ನೋಡಿದರೆ ಜನತೆ ಬಿಜೆಪಿ ಕಾರ್ಯ ವೈಖರಿಗೆ ಬೇಸತ್ತಿರುವುದು ಸ್ಪಷ್ಟವಾಗಿದೆ. ಮುಂಬರುವ ಉಪ ಚುನಾವಣೆಯಲ್ಲೂಕಾಂಗ್ರೆಸ್‌ ಜಯ ದಾಖಲಿಸಲಿದೆ. 15 ಕ್ಷೇತ್ರಗಳ ಪೈಕಿ 10ಕ್ಕಿಂತಲೂ ಅಧಿಕ ಕ್ಷೇತ್ರಗಳಲ್ಲಿಕಾಂಗ್ರೆಸ್‌ ಜಯಭೇರಿ ಬಾರಿಸಲಿದೆ ಎಂದು ಶಾಸಕರು ಪ್ರಕಟಣೆಯಲ್ಲಿವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸತ್ಯಕ್ಕೆ ಸಂದ ಜಯ: ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರ ಜಾಮೀನು ರದ್ದು ಕೋರಿ ಇಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿರುವುದು ಸತ್ಯಕ್ಕೆ ಸಂದ ಜಯವಾಗಿದೆ ಎಂದು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ