ಆ್ಯಪ್ನಗರ

ಜನರ ಮೇಲೆ ರಾಜ್ಯ ಸರಕಾರದಿಂದ ತೆರಿಗೆ ಹೊರೆ: ಬಿಎಸ್‌ವೈ ಆರೋಪ

ರಾಜ್ಯ ಸರಕಾರ ಸಾರ್ವಜನಿಕರ ಮೇಲೆ ಹೊಸ ತೆರಿಗೆ ಹೇರಲು ಹೊರಟಿದೆ. ತೈಲ ಬೆಲೆ ಸುಂಕ ಏರಿಸುವ ಮೂಲಕ ಜನ ಸಾಮಾನ್ಯರ ಮೇಲೆ ಹೊರೆ ಹಾಕುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

Vijaya Karnataka Web 6 Jan 2019, 5:57 pm
ಹುಬ್ಬಳ್ಳಿ: ರಾಜ್ಯ ಸರಕಾರ ಸಾರ್ವಜನಿಕರ ಮೇಲೆ ಹೊಸ ತೆರಿಗೆ ಹೇರಲು ಹೊರಟಿದೆ. ತೈಲ ಬೆಲೆ ಸುಂಕ ಏರಿಸುವ ಮೂಲಕ ಜನ ಸಾಮಾನ್ಯರ ಮೇಲೆ ಹೊರೆ ಹಾಕುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಹರಿಹಾಯ್ದರು.
Vijaya Karnataka Web bsy


ನಗರದಲ್ಲಿ ಮಾಧ್ಯಮ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತೈಲ ಬೆಲೆ ಸುಂಕವನ್ನ ಕೂಡಲೇ ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.

ವಿಧಾನಸೌಧ ವೆಸ್ಟ್ ಗೇಟ್ ಬಳಿ ಹಣ ಜಪ್ತಿ ಮಾಡಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು,
ವಿಧಾನಸೌಧದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ ಎನ್ನುವುದಕ್ಕೆ ಇದು ತಾಜಾ ಉದಾಹರಣೆ ಎಂದರು.

ರಾಜ್ಯದಲ್ಲಿ ಬರಗಾಲ ತಾಂಡವಾಡುತ್ತಿದ್ದರೂ, ಸಿಎಂ ಕುಮಾರಸ್ವಾಮಿ ಮಾತ್ರ ತಲೆಗೆಡಿಸಿಕೊಳ್ಳುತ್ತಿಲ್ಲ. ಕಾಂಗ್ರೆಸ್-ಜೆಡಿಎಸ್‌ನಲ್ಲಿ ಅನೇಕ ಗೊಂದಲಗಳಿವೆ. ಮೈತ್ರಿ ಸರಕಾರದಲ್ಲಿ ಭಿನ್ನಾಭಿಪ್ರಾಯಗಳು ಹೆಚ್ಚುತ್ತಲೇ ಇವೆ ಎಂದು ಬಿಎಸ್‌ವೈ ದೂರಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ