ಆ್ಯಪ್ನಗರ

ಫೆ.22ರಿಂದ ಬೃಹತ್‌ ಉದ್ಯೋಗ ಮೇಳ

ಧಾರವಾಡ : ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಉದ್ಯೋಗದಾತರಿಗೆ ಅನೂಕುಲವಾಗುವಂತೆ ಬೃಹತ್‌ ಉದ್ಯೋಗ ಮೇಳವನ್ನು ನಗರದಲ್ಲಿ ಫೆ.22 ಮತ್ತು 23 ರಂದು ಆಯೋಜಿಸಲಾಗುವುದು ಎಂದು ಜಿಲ್ಲಾ ಕೌಶಲ್ಯ ಮಿಶನ್‌ ಅಧ್ಯಕ್ಷ ರು ಆಗಿರುವ ಜಿಲ್ಲಾಧಿಕಾರಿ ದೀಪಾ ಚೋಳನ್‌ ತಿಳಿಸಿದರು.

Vijaya Karnataka 26 Jan 2019, 5:00 am
ಧಾರವಾಡ : ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಉದ್ಯೋಗದಾತರಿಗೆ ಅನೂಕುಲವಾಗುವಂತೆ ಬೃಹತ್‌ ಉದ್ಯೋಗ ಮೇಳವನ್ನು ನಗರದಲ್ಲಿ ಫೆ.22 ಮತ್ತು 23 ರಂದು ಆಯೋಜಿಸಲಾಗುವುದು ಎಂದು ಜಿಲ್ಲಾ ಕೌಶಲ್ಯ ಮಿಶನ್‌ ಅಧ್ಯಕ್ಷ ರು ಆಗಿರುವ ಜಿಲ್ಲಾಧಿಕಾರಿ ದೀಪಾ ಚೋಳನ್‌ ತಿಳಿಸಿದರು.
Vijaya Karnataka Web great job fair from feb 22
ಫೆ.22ರಿಂದ ಬೃಹತ್‌ ಉದ್ಯೋಗ ಮೇಳ


ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಗಂಣದಲ್ಲಿ ನಡೆದ ಬೃಹತ್‌ ಉದ್ಯೋಗ ಮೇಳದ ಸಿದ್ಧತೆ ಕುರಿತ ಪೂರ್ವಭಾವಿ ಸಭೆ ಅಧ್ಯಕ್ಷ ತೆ ವಹಿಸಿ ಮಾತನಾಡಿದರು.

ಶೈಕ್ಷ ಣಿಕ ಜಿಲ್ಲೆಗಳಾಗಿರುವ ಧಾರವಾಡ, ಗದಗ ಹಾವೇರಿ ಪ್ರದೇಶಗಳಲ್ಲಿ ಅನೇಕ ಕೈಗಾರಿಕೆ, ವಿವಿಧ ರೀತಿಯ ಕಂಪನಿಗಳು ಆರಂಭವಾಗಿವೆ. ಅನೇಕ ಜನ ಅರ್ಹ ವಿದ್ಯಾವಂತ ಯುವಕ ಯುವತಿ ಉದ್ಯೋಗಾಕಾಂಕ್ಷಿಗಳಿಗೆ ಸೂಕ್ತ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಮೇಳವನ್ನು ಆಯೋಜಿಸಲಾಗುತ್ತಿದೆ. ಮೆಳದಲ್ಲಿ ಭಾಗವಹಿಸುವ ಕೈಗಾರಿಕೆ, ಕಂಪನಿ ಉದ್ಯೋಗದಾತರು ಘ್ಕಿಡಿಡಿಡಿ.್ಜsspಜಿಠಿಜಿdಡಿd.ಟ್ಟಜ ಗೆ ನೋಂದಣಿ ಮಾಡಿಕೊಳ್ಳಬೇಕು ಮತ್ತು ಉದ್ಯೋಗ ಅಕಾಂಕ್ಷಿ ಯುವಕ ಯುವತಿಯರು ಮೇಳದಲ್ಲಿ ಭಾಗವಹಿಸಲು ಘ್ಕಿಡಿಡಿಡಿ.vಜಿdyas್ಞಛಿhಜಿ.ಟ್ಟಜ ಗೆ ತಮ್ಮ ವಿವರವನ್ನು ನೋಂದಾಯಿಸಿಕೊಳ್ಳಬೇಕೆಂದು ಹೇಳಿದರು.

ಕರ್ನಾಟಕ ಸರಕಾರವು ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಈಗಾಗಲೇ ಉದ್ಯೋಗಾಕಾಂಕ್ಷಿಗಳಿಗಾಗಿ ಆರಂಭಿಸಿರುವ ಘ್ಕಿಡಿಡಿಡಿ.ka್ಠsha್ಝka್ಟ.್ಚಟಞ ಗೆ ಅಭ್ಯರ್ಥಿಗಳು ತಮ್ಮ ಹೆಸರನ್ನು ಕಡ್ಡಾಯವಾಗಿ ನೋಂದಾಯಿಸಿರಬೇಕು. ಮತ್ತು ಒಂದು ವೇಳೆ ಇಲ್ಲಿಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿರದ ಅಭ್ಯರ್ಥಿಗಳು ಉದ್ಯೋಗಮೇಳದ ಪೂರ್ವದಲ್ಲಿ ತಮ್ಮ ಹೆಸರನ್ನು ಘ್ಕಿಡಿಡಿಡಿ.ka್ಠsha್ಝka್ಟ.್ಚಟಞ ರಲ್ಲಿ ನೊಂದಾಯಿಸಿಕೊಳ್ಳಬಹುದು ಎಂದರು.

ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್‌.ರುದ್ರೇಶಪ್ಪ, ಆಹಾರ ಇಲಾಖೆಯ ಹಿರಿಯ ಉಪನಿರ್ದೇಶಕ ಸದಾಶಿವ ಮರ್ಜಿ ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಸಹಾಯಕ ನಿರ್ದೇಶಕಿ ಸಾಧನಾ ಪೋಟೆ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಚಂದ್ರಪ್ಪ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ