ಆ್ಯಪ್ನಗರ

ಎಚ್‌ ವಿಶ್ವನಾಥ ಪಕ್ಷದ ಸಿದ್ಧಾಂತಕ್ಕೆ ಬದ್ದರಾಗಿರಬೇಕು, ಸರಕಾರಕ್ಕೆ ಮುಜುಗರ ಮಾಡಬಾರದು: ಶಿವರಾಮ್‌ ಹೆಬ್ಬಾರ್‌

ವಿಶ್ವನಾಥ ಯಾವ ಸಂದರ್ಭದಲ್ಲಿ ಟಿಪ್ಪುಸುಲ್ತಾನ್‌ ಕುರಿತು ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ಬಿಜೆಪಿ ಸೇರಿದ ಮೇಲೆ ಅವರು ಪಕ್ಷದ ನಿಲುವಿಗೆ ಬದ್ಧರಾಗಿರಬೇಕು. ಪಕ್ಷದ ಸಿದ್ಧಾಂತಕ್ಕೆ ಹೊಂದಿಕೊಳ್ಳಬೇಕು. ಗುರುವಾರ ‌ಅವರಿಗೆ ಕರೆ ಮಾಡಿದರೆ, ಸಿಗಲಿಲ್ಲ. ಯಾರೂ ವಿವಾದಾತ್ಮಕ ಹೇಳಿಕೆಗಳನ್ನು ನೀಡಬಾರದು

Vijaya Karnataka Web 28 Aug 2020, 4:49 pm
ಹುಬ್ಬಳ್ಳಿ: ನಾವು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಬಂದಾಗ ಆ ಪಕ್ಷದ ತತ್ವ, ಸಿದ್ಧಾಂತಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಹಿರಿಯರಾದ ಎಚ್ ವಿಶ್ವನಾಥ್ ಅನಗತ್ಯವಾಗಿ ವಿವಾದಾತ್ಮಕ ಹೇಳಿಕೆ ನೀಡಿ ಪಕ್ಷಕ್ಕೆ ಹಾಗೂ ಸರಕಾರಕ್ಕೆ ಮುಜುಗರ ಉಂಟು ಮಾಡಬಾರದು ಎಂದು ಕಾರ್ಮಿಕ ಮತ್ತು ಸಕ್ಕರೆ ಖಾತೆ ಸಚಿವ ಶಿವರಾಮ ಹೆಬ್ಬಾರ ಹೇಳಿದ್ದಾರೆ.
Vijaya Karnataka Web ಶಿವರಾಮ್‌ ಹೆಬ್ಬಾರ್
ಶಿವರಾಮ್‌ ಹೆಬ್ಬಾರ್


ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಶಿವರಾಮ್ ಹೆಬ್ಬಾರ್‌ ತಿಳಿಸಿದ್ದಾರೆ.

ವಿಶ್ವನಾಥ ಯಾವ ಸಂದರ್ಭದಲ್ಲಿ ಟಿಪ್ಪುಸುಲ್ತಾನ್‌ ಕುರಿತು ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ಬಿಜೆಪಿ ಸೇರಿದ ಮೇಲೆ ಅವರು ಪಕ್ಷದ ನಿಲುವಿಗೆ ಬದ್ಧರಾಗಿರಬೇಕು. ಪಕ್ಷದ ಸಿದ್ಧಾಂತಕ್ಕೆ ಹೊಂದಿಕೊಳ್ಳಬೇಕು. ಗುರುವಾರ ‌ಅವರಿಗೆ ಕರೆ ಮಾಡಿದರೆ, ಸಿಗಲಿಲ್ಲ. ಯಾರೂ ವಿವಾದಾತ್ಮಕ ಹೇಳಿಕೆಗಳನ್ನು ನೀಡಬಾರದು ಎಂದರು.

ಇಎಸ್ ಐ ಆಸ್ಪತ್ರೆಗಳಲ್ಲಿ ಪ್ರತಿವರ್ಷ ಸಾಕಷ್ಟು ಔಷಧಿಗಳು ಉಳಿಯುತ್ತಿವೆ. ಆದ್ದರಿಂದ ಇಎಸ್‌ಐ ಕಾರ್ಡ್‌ ಇಲ್ಲದವರಿಗೂ ಔಷಧಿಗಳನ್ನು ಕೊಡಬೇಕು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ. ಇದಕ್ಕೆ ಕಾನೂನಿನಲ್ಲಿ ತೊಡಕುಗಳಿದ್ದು, ಬೆಂಗಳೂರಿನಲ್ಲಿ ಸೆ. 4 ಮತ್ತು 5 ರಂದು ನಡೆಯುವ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗುವುದು ಎಂದು ಸಚಿವ ಶಿವರಾಮ್‌ ಹೆಬ್ಬಾರ್ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ