ಆ್ಯಪ್ನಗರ

ಮರುಮತದಾನಕ್ಕೆ ಆಗ್ರಹಿಸಿ ಕೈ ಪ್ರತಿಭಟನೆ

ಧಾರವಾಡ : ಹು-ಧಾ ಸೆಂಟ್ರಲ್‌ ಮತ ಕ್ಷೇತ್ರಕ್ಕೆ ಮರು ಮತದಾನಕ್ಕೆ ಆಗ್ರಹಿಸಿ ಕಾಂಗ್ರೆಸ್‌ ಅಭ್ಯರ್ಥಿ ಡಾ. ಮಹೇಶ ನಾಲವಾಡ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರು ಬುಧವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

Vijaya Karnataka 17 May 2018, 5:00 am
ಧಾರವಾಡ : ಹು-ಧಾ ಸೆಂಟ್ರಲ್‌ ಮತ ಕ್ಷೇತ್ರಕ್ಕೆ ಮರು ಮತದಾನಕ್ಕೆ ಆಗ್ರಹಿಸಿ ಕಾಂಗ್ರೆಸ್‌ ಅಭ್ಯರ್ಥಿ ಡಾ. ಮಹೇಶ ನಾಲವಾಡ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರು ಬುಧವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Vijaya Karnataka Web hand protest demanding remission
ಮರುಮತದಾನಕ್ಕೆ ಆಗ್ರಹಿಸಿ ಕೈ ಪ್ರತಿಭಟನೆ


ಇದಕ್ಕೂ ಮುನ್ನ ಕಡಪಾ ಮೈದಾನದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರಾರ‍ಯಲಿ ಕೈಗೊಂಡು, ಜಿಲ್ಲಾಧಿಕಾರಿ ಕಚೇರಿ ಎದುರು ಟಾಯರ್‌ಗಳಿಗೆ ಬೆಂಕಿ ಹಚ್ಚಿ ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮತಯಂತ್ರ ಹಾಗೂ ವಿವಿ ಪ್ಯಾಟ್‌ಗಳಲ್ಲಿನ ದೋಷದಿಂದ ಸೆಂಟ್ರಲ್‌ ಕ್ಷೇತ್ರದಲ್ಲಿ ಸೋಲಾಗಿದ್ದು, ಈ ಕೂಡಲೇ ಮರು ಮತದಾನ ಅವಕಾಶ ಮಾಡಿಕೊಡುವಂತೆ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಾಯಿತು.

ಇದೇ ವೇಳೆ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಬೆಂಬಲಿಗರೂ ಪಾಲ್ಗೊಂಡು ವಿನಯ ಪರ ಘೋಷಣೆ ಕೂಗಿ ಗಮನಸೆಳೆದರು.ಈ ಸಂದರ್ಭದಲ್ಲಿ ಹು-ಧಾ ಸೆಂಟ್ರಲ್‌ ಕಾಂಗ್ರೆಸ ಅಭ್ಯರ್ಥಿ ಡಾ.ಮಹೇಶ ನಾಲವಾಡ , ಪಾಲಿಕೆ ಸದಸ್ಯ ದೀಪಕ ಚಿಂಚೂರೆ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ