ಆ್ಯಪ್ನಗರ

ಹಣ್ಣು,ತರಕಾರಿ ಸೇವನೆಯಿಂದ ಆರೋಗ್ಯ ವೃದ್ಧಿ

ಧಾರವಾಡ : ಕಾಲಕಾಲಕ್ಕೆ ದೊರೆಯುವ ಹಣ್ಣುಗಳನ್ನು ಸೇವಿಸುವುದು ಮನುಷ್ಯನ ಆರೊಗ್ಯದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಜೆಎಸ್‌ಎಸ್‌ ವಿತ್ತಾಧಿಕಾರಿ ಡಾ.ಅಜಿತ ಪ್ರಸಾದ ಹೇಳಿದರು.

Vijaya Karnataka 16 Jun 2019, 5:00 am
ಧಾರವಾಡ : ಕಾಲಕಾಲಕ್ಕೆ ದೊರೆಯುವ ಹಣ್ಣುಗಳನ್ನು ಸೇವಿಸುವುದು ಮನುಷ್ಯನ ಆರೊಗ್ಯದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಜೆಎಸ್‌ಎಸ್‌ ವಿತ್ತಾಧಿಕಾರಿ ಡಾ.ಅಜಿತ ಪ್ರಸಾದ ಹೇಳಿದರು.
Vijaya Karnataka Web DRW-15MAILAR02
ಧಾರವಾಡದ ಜೆಎಸ್‌ಎಸ್‌ ಶ್ರೀ ಮಂಜುನಾಥೇಶ್ವರ ಸಿಬಿಎಸ್‌ಸಿ ಶಾಲೆಯಲ್ಲಿ ಹಮ್ಮಿಕೊಂಡ ಮಾವಿನ ಖಾದ್ಯ ಮೇಳವನ್ನು ಡಾ.ಅಜಿತ ಪ್ರಸಾದ ಉದ್ಘಾಟಿಸಿದರು.


ನಗರದ ಜೆಎಸ್‌ಎಸ್‌ ಶ್ರೀ ಮಂಜುನಾಥೇಶ್ವರ ಸಿಬಿಎಸ್‌ಸಿ ಶಾಲೆಯಲ್ಲಿ ಹಮ್ಮಿಕೊಂಡ ಮಾವಿನ ಖಾದ್ಯ ಮೇಳ ಶನಿವಾರ ಉದ್ಘಾಟಿಸಿ ಮಾತನಾಡಿದರು.

ನೈಸರ್ಗಿಕವಾಗಿ ದೊರೆಯುವ ಹಣ್ಣು, ತರಕಾರಿಗಳನ್ನು ಸೇವಿಸುವುದರಿಂದ ಆರೋಗ್ಯ ವೃದ್ಧಿಯಾಗುವುದು. ಯಾಂತ್ರಿಕ ಜಗತ್ತಿನಲ್ಲಿ ಮಕ್ಕಳು ಫಾಸ್ಟ್‌ ಫುಡ್‌, ಜಂಕ್‌ಫುಡ್‌ಗಳಿಗೆ ಮಾರು ಹೋಗಿ ವಿಷ ಆಹಾರ ಸೇವಿಸುವ ಮೂಲಕ ಮಕ್ಕಳು ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ನೈಸರ್ಗಿಕವಾಗಿ ದೊರೆಯುತ್ತಿರುವ ಹಣ್ಣು ಸೇವಿಸಬೇಕು. ಇದರಿಂದ ಆರೋಗ್ಯ ಸದೃಢವಾಗಲು ಸಾಧ್ಯ ಎಂದರು.

ಮೇಳದಲ್ಲಿ ಮಾವಿನ ಹಣ್ಣಿನಿಂದ ತಯಾರಿಸಿದ ಕೇಕ್‌, ಸ್ಯಾಂಡ್‌ವಿಚ್‌, ಉಪ್ಪಿನಕಾಯಿ, ಮ್ಯಾಂಗೋ ರೈಸ್‌, ಐಸ್‌ಕ್ರೀಮ್‌ ಸೇರಿದಂತೆ 50ಕ್ಕೂ ಹೆಚ್ಚು ಖಾದ್ಯಗಳ ಪ್ರದರ್ಶನ ನಡೆಯಿತು.

ಪ್ರಾಚಾರ್ಯ ಸಾಧನಾ, ಮಹಾವಿರ ಉಪಾಧ್ಯೆ ಸೇರಿದಂತೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ