ಆ್ಯಪ್ನಗರ

ಡಿಮಾನ್ಸ್‌ ಬಲವರ್ಧನೆಗೆ ನೆರವು: ಆರ್ವಿಡಿ

ಧಾರವಾಡ : ನಗರದ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ಡಿಮಾನ್ಸ್‌) ಬಲವರ್ಧನೆಗೆ ಅಗತ್ಯ ನೆರವು ನೀಡಲು ಸರಕಾರ ಸಿದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ. ದೇಶಪಾಂಡೆ ಭರವಸೆ ನೀಡಿದರು.

Vijaya Karnataka 6 Mar 2019, 5:00 am
ಧಾರವಾಡ : ನಗರದ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ಡಿಮಾನ್ಸ್‌) ಬಲವರ್ಧನೆಗೆ ಅಗತ್ಯ ನೆರವು ನೀಡಲು ಸರಕಾರ ಸಿದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ. ದೇಶಪಾಂಡೆ ಭರವಸೆ ನೀಡಿದರು.
Vijaya Karnataka Web DRW-05SM-3
ಧಾರವಾಡದ ಡಿಮಾನ್ಸ್‌ ಪುನರ್ವಸತಿ ಕೇಂದ್ರ ಹಾಗೂ ಬೇಂದ್ರೆ ಬ್ಲಾಕ್‌ ಆಡಳಿತ ಕಟ್ಟಡ ಕಾಮಗಾರಿಗಳಿಗೆ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ. ದೇಶಪಾಂಡೆ ಭೂಮಿ ಪೂಜೆ ನೆರವೇರಿಸಿದರು.


ಕೇಂದ್ರ ಹಾಗೂ ರಾಜ್ಯ ಅನುದಾನಿತ ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಡಿಮಾನ್ಸ್‌ನಲ್ಲಿ ಪುನರ್ವಸತಿ ಕೇಂದ್ರ ಹಾಗೂ ಬೇಂದ್ರೆ ಬ್ಲಾಕ್‌ ಆಡಳಿತ ಕಟ್ಟಡ ಕಾಮಗಾರಿಗಳಿಗೆ ಮಂಗಳವಾರ ಭೂಮಿ ಪೂಜೆ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಉತ್ತರ ಕರ್ನಾಟಕದ ಬಹುಪಾಲು ಜನರಿಗೆ ಆರೋಗ್ಯ ಸೇವೆ ಸಲ್ಲಿಸುವ ಏಕೈಕ ನರವಿಜ್ಞಾನ ಕೇಂದ್ರ ಇದಾಗಿದೆ. ಇಲ್ಲಿನ ನ್ಯೂರೋ ಸರ್ಜನ್‌ಗಳ ಕೊರತೆ ನೀಗಿಸುವ ಜತೆಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಈ ಬಗ್ಗೆ ಅಗತ್ಯ ಪ್ರಸ್ತಾವನೆಗಳನ್ನು ಸಲ್ಲಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ತುರ್ತು ಮುಗಿಸಲು ಸೂಚನೆ

ಒಟ್ಟು 4.50ಕೋಟಿ ರೂ. ವೆಚ್ಚದಲ್ಲಿ ಪುನರ್‌ವಸತಿ ಕೇಂದ್ರ ನಿರ್ಮಾಣಗೊಳ್ಳುತ್ತಿದೆ. ಇದಕ್ಕೆ ಕೇಂದ್ರ ಸರಕಾರ ಅನುದಾನ ನೀಡಿದ್ದು, ತುರ್ತಾಗಿ ಕಾಮಗಾರಿ ಮುಗಿಸಲು ಸೂಚಿಸಲಾಗಿದೆ. ಇಲ್ಲಿ ಪರೀಕ್ಷಾ ಕೋಣೆ, ಕ್ಲಿನಿಕ್‌, ಕೌಶಲ ಪ್ರಯೋಗಾಲಯ, ಆಡಿಯೋ ದೃಶ್ಯ ಧ್ವನಿ ಪುರಾವೆ ಕೊಠಡಿಗಳು, ತರಬೇತಿ ಕೋಣೆ ಮತ್ತು ಇನ್ನಿತರ ವಿಭಾಗಗಳು ನಿರ್ಮಾಣಗೊಳ್ಳಲಿವೆ ಎಂದು ತಿಳಿಸಿದರು.

ಪೌರಾಡಳಿತ ಸಚಿವ ಸಿ.ಎಸ್‌. ಶಿವಳ್ಳಿ, ಸಂಸದ ಪ್ರಹ್ಲಾದ ಜೋಶಿ, ಶಾಸಕ ಅಮೃತ ದೇಸಾಯಿ, ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮಿ ಪಾಟೀಲ, ಮಾಜಿ ಸಚಿವ ವಿನಯ ಕುಲಕರ್ಣಿ, ಜಿಲ್ಲಾಧಿಕಾರಿ ಎಂ.ದೀಪಾ , ಜಿಪಂ ಸಿಇಓ ಡಾ.ಬಿ.ಸಿ. ಸತೀಶ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಂಗೀತಾ ಜಿ., ಅಪರ ಜಿಲ್ಲಾಧಿಕಾರಿ ಸುರೇಶ್‌ ಇಟ್ನಾಳ, ಎಸಿ ಮಹಮ್ಮದ ಜುಬೇರ, ತಹಸೀಲ್ದಾರ್‌ ಪ್ರಕಾಶ ಕುದರಿ, ಡಿಮಾನ್ಸ್‌ ನಿರ್ದೇಶಕ ಡಾ. ಮಹೇಶ ದೇಸಾಯಿ ಮತ್ತಿತರರು ಭೂಮಿ ಪೂಜಾ ಕಾರ್ಯಕ್ರಮದ ವೇಳೆ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ