ಆ್ಯಪ್ನಗರ

ಪ್ರವಾಹ ಸಂತ್ರಸ್ತರ ಕಾಳಜಿ ಕೇಂದ್ರಗಳಲ್ಲಿ ನಿಷ್ಕಾಳಜಿ: ಸರಕಾರದ ವಿರುದ್ಧ ಎಚ್‌.ಕೆ.ಪಾಟೀಲ್‌ ಆಕ್ರೋಶ

ಭಾರೀ ಮಳೆಯಿಂದ ಸೃಷ್ಟಿಯಾದ ಭೀಕರ ಪ್ರವಾಹಕ್ಕೆ ಉತ್ತರ ಕರ್ನಾಟಕ ತತ್ತರಿಸಿದೆ. ಕಂಡು ಕೇಳರಿಯದಷ್ಟು ಪರಿಸ್ಥಿತಿ ಗಂಭೀರವಾಗಿದೆ. ಈ ಸಂದರ್ಭದಲ್ಲಿ ಪ್ರವಾಹ ಸಂತ್ರಸ್ತರು ಇರುವ ಕಾಳಜಿ ಕೇಂದ್ರಗಳಲ್ಲಿ ನಿಷ್ಕಾಳಜಿ, ಅಧಿಕಾರಿಗಳ ದರ್ಪ ಮುಂದುವರಿದಿದೆ ಎಂದು ಶಾಸಕ ಎಚ್‌.ಕೆ.ಪಾಟೀಲ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Vijaya Karnataka Web 22 Oct 2020, 7:04 pm
ಹುಬ್ಬಳ್ಳಿ: ಭಾರೀ ಮಳೆಯಿಂದ ಉತ್ತರ ಕರ್ನಾಟಕದಲ್ಲಿ ಬಹುದೊಡ್ಡ ಹಾನಿ, ಆಘಾತವಾಗಿದೆ. ಕಂಡು ಕೇಳರಿಯದಷ್ಟು ಪರಿಸ್ಥಿತಿ ಗಂಭೀರವಾಗಿದೆ. ಆದರೆ, ಕಾಳಜಿ ಕೇಂದ್ರಗಳಲ್ಲಿ ನಿಷ್ಕಾಳಜಿ, ಅಧಿಕಾರಿಗಳ ದರ್ಪ ಮುಂದುವರಿದಿದೆ ಎಂದು ಶಾಸಕ ಎಚ್‌.ಕೆ.ಪಾಟೀಲ್‌ ಅಸಮಾಧಾನ ವ್ಯಕ್ತಪಡಿಸಿದರು.
Vijaya Karnataka Web hk patil slams government on handling the flood situation
ಪ್ರವಾಹ ಸಂತ್ರಸ್ತರ ಕಾಳಜಿ ಕೇಂದ್ರಗಳಲ್ಲಿ ನಿಷ್ಕಾಳಜಿ: ಸರಕಾರದ ವಿರುದ್ಧ ಎಚ್‌.ಕೆ.ಪಾಟೀಲ್‌ ಆಕ್ರೋಶ


ನಗರದಲ್ಲಿ ಮಾತನಾಡಿದ ಅವರು, ಪ್ರವಾಹಕ್ಕೆ 10 ಲಕ್ಷ ಹೆಕ್ಟೇರ್ ಪ್ರದೇಶದದಲ್ಲಿ 35 ರಿಂದ 40 ಸಾವಿರ ಕೋಟಿ ರೂ. ಮೌಲ್ಯದ ಬೆಳೆ ಹಾನಿಯಾಗಿದೆ. ಹಿಂದೆಂದಿಗಿಂತಲೂ ಹೆಚ್ಚು ಜೀವಹಾನಿಯಾಗಿದೆ. ಇಷ್ಟೆಲ್ಲಾ ಆಗಿದ್ರೂ ಸರಕಾರ ಸರಿಯಾದ ಕಾಳಜಿ ಕೇಂದ್ರ ತೆರೆದಿಲ್ಲ ಎಂದು ಆಕ್ರೋಶ ಹೊರಹಾಕಿದರು.

ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ರಾಜ್ಯಕ್ಕೆ ತಕ್ಷಣ ಸಹಾಯ ಮಾಡಿ ಹಣ ಬಿಡುಗಡೆ ಮಾಡಬೇಕು. ಕೃಷ್ಣಾ ನದಿ ಜಲ ವಿವಾದ ವಿಚಾರದಲ್ಲಿ ಕೇಂದ್ರ ಸರಕಾರ ತೆಲಂಗಾಣದ ಬಗ್ಗೆ ತೋರುತ್ತಿರುವ ಮೃದು ಧೋರಣೆ ಸರಿಯಲ್ಲ ಎಂದರು.

ನಾನು ಕಿರುಕುಳ ಕೊಟ್ಟಿದ್ರೆ ಇವರ್ಯಾಕೆ ಸುಮ್ಮನಿದ್ರು: ಹೆಚ್‌ಡಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ಕೇಂದ್ರದ ಮೃದು ಧೋರಣೆ ಮುಂದುವರೆದರೆ ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲಿ ಬಹುದೊಡ್ಡ ಗಂಡಾಂತರ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು, ಈ ವಿಷಯದಲ್ಲಿ ರಾಜ್ಯ ಸರಕಾರ ಕೇಂದ್ರಕ್ಕೆ ನಿಯೋಗ ಕೊಂಡೊಯ್ಯಬೇಕು. ಈ ವಿವಾದವನ್ನ ನ್ಯಾಯಾಧಿಕರಣದ ಮೂಲಕ ಬಗೆಹರಿಸಲು ಮುಂದಾಗಬಾರದು ಎಂದು ಕೇಂದ್ರಕ್ಕೆ‌ ಮನವರಿಕೆ ಮಾಡಬೇಕು ಎಂದು ಸಲಹೆ ನೀಡಿದರು.

‘ಆಡಳಿತ ನಡೆಸಲಾಗದ ಯಡಿಯೂರಪ್ಪ ಕುರ್ಚಿ ಬಿಟ್ಟು ಹೋಗಲಿ‌’; ಸಿದ್ದರಾಮಯ್ಯ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ