ಆ್ಯಪ್ನಗರ

ಮನೆ ಕಳ್ಳತನ: ಮೂವರು ಕಳ್ಳರ ಬಂಧನ

ಧಾರವಾಡ : ನಗರದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡಿದ್ದ ಮೂವರು ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸ್‌ ಸಹಾಯಕ ಆಯುಕ್ತ ಎಂ.ಎನ್‌.ರುದ್ರಪ್ಪ ಹೇಳಿದರು.

Vijaya Karnataka 22 Jul 2019, 5:00 am
ಧಾರವಾಡ : ನಗರದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡಿದ್ದ ಮೂವರು ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸ್‌ ಸಹಾಯಕ ಆಯುಕ್ತ ಎಂ.ಎನ್‌.ರುದ್ರಪ್ಪ ಹೇಳಿದರು.
Vijaya Karnataka Web DRW-21SM-1
ಧಾರವಾಡ ವಿವಿಧ ಪೊಲೀಸಠಾಣೆಗಳ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದ ಕಳ್ಳರೊಂದಿಗೆ ಪೊಲೀಸ್‌ ತಂಡ.


ನಗರದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈಗಾಗಲೇ ಕಳ್ಳತನ ಆರೋಪದಲ್ಲಿಯೇ ಸಿಕ್ಕಿಬಿದ್ದು, ಜಾಮೀನಿನ ಮೇಲೆ ಹೊರಬಂದಿದ್ದ ಮೂವರು ಕಳ್ಳರು ಮತ್ತೆ ಅದೇ ದಂಧೆಗಿಳಿದ್ದರು ಎಂದರು.

ನಗರದ ಲಕ್ಷ್ಮೀಸಿಂಗನಕೇರಿಯ ಮಂಜುನಾಥ ಅರ್ಜುನ ಹುಲ್ಲೂರ, ಶಾನು ರೆಹಮಾನಸಾಬ ಹಾಲಬಾವಿ ಮತ್ತು ರಾಜು ರಾಮಣ್ಣ ಅಮ್ಮಿನಬಾವಿ ಎಂಬುವವರೇ ಬಂಧಿತ ಆರೋಪಿಗಳು. ಬಂಧಿತರಿಂದ 270 ಗ್ರಾಂ ಬಂಗಾರ, 690 ಗ್ರಾಂ ಬೆಳ್ಳಿ ಸೇರಿದಂತೆ ಒಟ್ಟು 7ಲಕ್ಷ 10 ಸಾವಿರ ಮೌಲ್ಯದ ಸಾಮಾಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಈ ಹಿಂದೆ ಲೋಕಾಯುಕ್ತ ಎಸ್‌ಪಿ ಅವರ ಮನೆ ಕಳ್ಳತನ ಮಾಡಿ ಎರಡು ತಿಂಗಳ ಹಿಂದಷ್ಟೇ ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿತ್ತು. ಒಂದು ತಿಂಗಳ ಹಿಂದೆಯೇ ಜಾಮೀನು ದೊರೆತಿದ್ದು, ಮತ್ತೆ ಕಳ್ಳತನ ಮಾಡಿ ಬಂಧನಕ್ಕೊಳಗಾಗಿದ್ದಾರೆ ಎಂದು ವಿವರಿಸಿದರು.

ಜೂ.2ರಂದು ವಿದ್ಯಾಗಿರಿ ಠಾಣಾ ವ್ಯಾಪ್ತಿಯ ವೀರಭದ್ರೇಶ್ವರ ಪಾರ್ಕ್‌ ಹತ್ತಿರದ ವೀರಾತಯ್ಯ ಬಳಗೋಡ ಎಂಬುವವರ ಮನೆಯ ಬೀಗ ಮುರಿದು 2.85 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದರು. ಅಲ್ಲದೇ ಜೂ. 27ರಂದು ಶಹರ ಪೊಲೀಸ್‌ ಠಾಣೆ ವ್ಯಾಪ್ತಿಯ ದಿಕ್ಷಿತವಾಡಾದಲ್ಲಿಯ ಮಂಜುಳಾ ಕುಲಕರ್ಣಿ ಎಂಬುವವರ ಮನೆಗೂ ಕನ್ನ ಹಾಕಿದ ಇವರು 47,500 ರೂ. ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿದ್ದರು.

ನಂತರ ಜು.7 ರಂದು ಶಹರ ಠಾಣಾ ವ್ಯಾಪ್ತಿಯ ಚರಂತಿಮಠ ಗಾರ್ಡ್‌ನ್‌ನಲ್ಲಿಯ ಪ್ರಸನ್ನ ಪ್ರಕಾಶ ನರೇಂದ್ರ ಎಂಬುವವರ ಮನೆಯ ಬೀಗ ಮುರಿದು ಒಳನುಗ್ಗಿ ಮನೆಯಲ್ಲಿದ್ದ 4,62,500 ರೂ.ಗಳ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ್ದರು ಎಂದು ತಿಳಿಸಿದರು.

ವಿದ್ಯಾಗಿರಿ ಠಾಣೆ ಇನ್ಸಪೆಕ್ಟರ್‌ ಅಲ್ತಾಫಹುಸೇನ ಮುಲ್ಲಾ ಅವರ ನೇತೃತ್ವದಲ್ಲಿ ಶಿವಾನಂದ ಬನ್ನಿಕೊಪ್ಪ, ಬಿ.ಎಂ. ಅಂಗಡಿ, ಎ.ಎಂ.ಹುಯಿಲಗೋಳ, ಎ.ಬಿ.ನರೇಂದ್ರ, ಎಂ.ಎಫ್‌.ನದಾಫ, ಐ.ಪಿ.ಬುರ್ಜಿ, ಆರ್‌.ಕೆ.ಅತ್ತಾರ, ಎಂ.ಸಿ.ಮಂಕಣಿ, ಡಿ.ಎಸ್‌.ಸಾಂಗ್ಲಿಕರ, ಎಂ.ಜಿ.ಪಾಟೀಲ ಅವರಿದ್ದ ತಂಡ ರಚಿಸಿ ಬಂಧಿಸಲಾಗಿದೆ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ