ಆ್ಯಪ್ನಗರ

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯರ ಸಂಖ್ಯೆ 67 ರಿಂದ 82ಕ್ಕೆ ಏರಿಕೆ: ಸಭಾಂಗಣ ಕೊರತೆ

​​ಈ ಬಾರಿ ಪಾಲಿಕೆ ಸದಸ್ಯರ ಸಂಖ್ಯೆ 67 ರಿಂದ 82ಕ್ಕೆ ಏರಿಕೆಯಾಗಿರುವುದರಿಂದ ಸ್ಥಳ ಆಯ್ಕೆ ಕಸರತ್ತು ಮುಂದುವರಿದಿದೆ. ಹಾಲಿ ಸಭಾಭವನದಲ್ಲಿ 76 ಜನ ಕುಳಿತುಕೊಳ್ಳಲು ಆಸನ ವ್ಯವಸ್ಥೆ ಇದೆ. ಅದೂ ಇಕ್ಕಟ್ಟು.

Lipi 14 May 2022, 6:52 pm
ಹುಬ್ಬಳ್ಳಿ: ರಾಜ್ಯದ ಎರಡನೇ ಅತಿ ದೊಡ್ಡದಾದ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆ ಪಡೆದಿದ್ದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ.
Vijaya Karnataka Web hubballi dharwad palike mayor deputy mayor election no place decided for election
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯರ ಸಂಖ್ಯೆ 67 ರಿಂದ 82ಕ್ಕೆ ಏರಿಕೆ: ಸಭಾಂಗಣ ಕೊರತೆ


ಈಗ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುಕ್ಕಾಣಿ ಹಿಡಿಯಲು ಮೇಯರ್ ಹಾಗೂ ಉಪಮೇಯರ್ ಆಯ್ಕೆಗೆ ದಿನಾಂಕ ಪೈನಲ್ ಆಗಿದೆ. ಆದರೆ ಮೇಯರ್ ಹಾಗೂ ಉಪಮೇಯರ್ ಆಯ್ಕೆಗೆ ಸಭೆ ನಡೆಸಲು ಬೇಕಾದಂತಹ ಸಭಾಂಗಣವೇ ಇಲ್ಲ.‌

ಈಗ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರು ಮತ್ತು ಪಾಲಿಕೆ ಸಿಬ್ಬಂದಿಗಳು ಸಭಾಂಗಣದ ಹುಡುಕಾಟದಲ್ಲಿ ಬ್ಯುಸಿಯಾಗಿದ್ದಾರೆ. ಕಳೆದ ಎರಡು ದಿನಗಳಿಂದ ಸ್ಥಳ ಆಯ್ಕೆ ಕಸರತ್ತು ಮುಂದುವರಿದಿದೆ.

ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ: ತೆರೆಮರೆಯಲ್ಲಿ ಭಾರೀ ಕಸರತ್ತು

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆವರಣದಲ್ಲಿನ ಸಭಾಭವನದಲ್ಲಿ 76 ಜನ ಕುಳಿತುಕೊಳ್ಳಲು ಆಸನ ವ್ಯವಸ್ಥೆ ಇದೆ. ಅದು ಸಹ ತುಂಬಾ ಇಕ್ಕಟ್ಟಾಗಿದೆ. ಮೇಯರ್‌-ಉಪ ಮೇಯರ್‌ ಆಯ್ಕೆ ಚುನಾವಣೆ ಇಕ್ಕಟ್ಟಾಗಿರುವ ಪಾಲಿಕೆಯ ಕೇಂದ್ರ ಕಚೇರಿಯಲ್ಲೋ ಅಥವಾ ಕನ್ನಡ ಭವನದಲ್ಲೋ ಎಂಬುದನ್ನು ಅಧಿಕಾರಿಗಳು ನಿರ್ಧರಿಸಬೇಕಾಗಿದೆ.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮಹಾನಗರ ಪಾಲಿಕೆಗೆ ಮೂರು ವರ್ಷಗಳ ನಂತರ ಜನಪ್ರತಿನಿಧಿಗಳ ಆಗಮನವಾಗುತ್ತಿದೆ. ಮೇ 28ಕ್ಕೆ ಪಾಲಿಕೆಯ ನೂತನ ಮೇಯರ್‌ ಹಾಗೂ ಉಪ ಮೇಯರ್‌ ಆಯ್ಕೆ ಚುನಾವಣೆಗೆ ದಿನ ನಿಗದಿಯಾಗಿದೆ. ಆದರೆ, ಚುನಾವಣೆ ನಡೆಸಲು ಸ್ಥಳ ಯಾವುದು ಎಂಬುದು ನಿರ್ಧಾರವಾಗಿಲ್ಲ.


ಬಿಜೆಪಿ 39, ಕಾಂಗ್ರೆಸ್ 33, ಪಕ್ಷೇತರರು 6, ಎಐಎಂಐಎಂ 3, ಜೆಡಿಎಸ್ 1 ಸ್ಥಾನಗಳಲ್ಲಿ ಜಯ ಗಳಿಸಿದೆ. ಇವರಿಗೆಲ್ಲ ಪ್ರತ್ಯೇಕವಾಗಿ ಆಸನ ವ್ಯವಸ್ಥೆ ಕಲ್ಪಿಸುವುದು ಈಗ ಸವಾಲಿನ ಕೆಲಸವಾಗಿದೆ. ಸದ್ಯ ಈಗ ಇರುವ ಕೇಂದ್ರ ಕಚೇರಿಯ ಸಭಾಭವನದಲ್ಲಿ ಇಷ್ಟೊಂದು ಸದಸ್ಯರಿಗೆ ಸ್ಥಳವನ್ನು ಕಲ್ಪಿಸುವುದು ಸಾಧ್ಯವಿಲ್ಲ. ಮೇಯರ್‌-ಉಪ ಮೇಯರ್‌ ಆಯ್ಕೆ ವೇಳೆ ಮತಾಧಿಕಾರವಿರುವ ಸಂಸದರು, ಶಾಸಕರು ಭಾಗಿಯಾಗಿರುವ ಕಾರಣ ಬೇರೆ ಸ್ಥಳ ಹುಡುಕುವುದು ಅನಿವಾರ್ಯ.

ಈ ಬಾರಿ ಪಾಲಿಕೆ ಸದಸ್ಯರ ಸಂಖ್ಯೆ 67 ರಿಂದ 82ಕ್ಕೆ ಏರಿಕೆಯಾಗಿರುವುದರಿಂದ ಸ್ಥಳ ಆಯ್ಕೆ ಕಸರತ್ತು ಮುಂದುವರೆದಿದೆ. ಹಾಲಿ ಸಭಾಭವನದಲ್ಲಿ 76 ಜನ ಕುಳಿತುಕೊಳ್ಳಲು ಆಸನ ವ್ಯವಸ್ಥೆ ಮಾತ್ರ ಇದೆ. ಅದು ಸಹ ತುಂಬಾ ಇಕ್ಕಟ್ಟು. ಮೇಯರ್‌-ಉಪ ಮೇಯರ್‌ ಆಯ್ಕೆ ಚುನಾವಣೆ ಇಕ್ಕಟ್ಟಾಗಿರುವ ಪಾಲಿಕೆಯ ಕೇಂದ್ರ ಕಚೇರಿಯಲ್ಲೋ ಅಥವಾ ಕನ್ನಡ ಭವನದಲ್ಲೋ ಎಂಬುದನ್ನು ಅಧಿಕಾರಿಗಳು ನಿರ್ಧರಿಸಬೇಕಿದೆ.

ಮತಾಂತರ ನಿಷೇಧ ಕಾನೂನನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರುತ್ತಿರುವುದು ಒಳ್ಳೇದು: ಪ್ರಮೋದ್ ಮುತಾಲಿಕ್

ಈ ಬಗ್ಗೆ ಪಾಲಿಕೆ ಆಯುಕ್ತ ಡಾ ಬಿ ಗೋಪಾಲಕೃಷ್ಣ ಮಾಹಿತಿ ನೀಡಿದ್ದು, ಕನ್ನಡ ಭವನ ಅಥವಾ ಪಾಲಿಕೆಯ ಸಭಾಭವನ ಇವೆರಡರಲ್ಲಿ ಒಂದು ಕಡೆ ಹು-ಧಾ ಮಹಾನಗರ ಪಾಲಿಕೆ ಮೇಯರ್‌ - ಉಪ ಮೇಯರ್‌ ಆಯ್ಕೆ ಚುನಾವಣೆ ನಡೆಯಲಿದೆ. ಈ ಕುರಿತು ಪಾಲಿಕೆಯ ಆಡಳಿತಾಧಿಕಾರಿಯಾದ ಬೆಳಗಾವಿ ಪ್ರಾದೇಶಿಕ ಆಯುಕ್ತರೊಂದಿಗೆ ಮೇ 16ರಂದು ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ