ಆ್ಯಪ್ನಗರ

ಹುಬ್ಬಳ್ಳಿ ಉಗ್ರರಿಗೆ ಸ್ಲೀಪರ್ ಸೆಲ್ ಇದ್ದಂತೆ: ಸಿ.ಟಿ. ರವಿ

ನಗರದ ರೈಲು ನಿಲ್ದಾಣದಲ್ಲಿ ನಿಂತ ವಿಜಯವಾಡ-ಹುಬ್ಬಳ್ಳಿ ಅಮರಾವತಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಸೋಮವಾರ ದೊರೆತ ಸ್ಫೋಟದ ವಸ್ತು ಏನೆಂಬುದು ಇನ್ನೂ ನಿಗೂಢವಾಗಿದೆ. ಪ್ರಕರಣದ ತನಿಖೆ ಕಾರ್ಯ ಚುರುಕುಗೊಳಿಸಲಾಗಿದೆ.

Vijaya Karnataka Web 23 Oct 2019, 2:34 pm
ಹುಬ್ಬಳ್ಳಿ: ನಗರದ ರೈಲ್ವೆ ನಿಲ್ದಾಣದಲ್ಲಿ ನಡೆದ ಸ್ಫೋಟ ಪ್ರಕರಣ ವಾಣಿಜ್ಯ ನಗರದಲ್ಲಿ ಸ್ಲೀಪರ್ ಸೆಲ್ ಗಳು ಇದ್ದಾರೆ ಎನ್ನುವುದಕ್ಕೆ ಸಾಕ್ಷಿ ಒದಗಿಸಿದೆ ಎಂದು ಸಚಿವ ಸಿ.ಟಿ. ರವಿ ಹೇಳಿದರು.
Vijaya Karnataka Web C T Ravi


ಹುಬ್ಬಳ್ಳಿ ಈ ಹಿಂದಿನಿಂದಲೂ ಭಯೋತ್ಪಾದಕರ ಅಡುಗು ತಾಣವಾಗಿ, ಅವರ ಕಾರ್ಯಚಟುವಟಿಕೆಗಳಿಗೆ ನೆಲೆಯಾಗಿದೆ. ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಲಿದೆ ಎಂದರು.

ಕಮಲೇಶ ತಿವಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಹುಬ್ಬಳ್ಳಿಯ ಮಹ್ಮದ್ ಸಾದಿಕ್ ಎಂಬ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆ. ಅವನನ್ನು ಸಂಪೂರ್ಣವಾಗಿ ವಿಚಾರಣೆಗೊಳಪಡಿಸಬೇಕು. ಅಲ್ಲದೇ, ಅವರ ಸಕ್ರಿಯ ಕಾರ್ಯಚಟುವಟಿಕೆಗಳ ಜಾಲವನ್ನು ಬೇರು ಸಮೇತ ಕಿತ್ತೊಗೆಯಬೇಕು ಎಂದರು.

ಹುಬ್ಬಳ್ಳಿ ರೈಲ್ವೇ ನಿಲ್ದಾಣ ಸ್ಫೋಟ ಇನ್ನೂ ನಿಗೂಢ ! ಮಾಹಿತಿ ಸಿಕ್ಕಿಲ್ಲ ಅಂದ್ರು ಪೊಲೀಸರು

ನಗರದ ರೈಲು ನಿಲ್ದಾಣದಲ್ಲಿ ನಿಂತ ವಿಜಯವಾಡ-ಹುಬ್ಬಳ್ಳಿ ಅಮರಾವತಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಸೋಮವಾರ ದೊರೆತ ಸ್ಫೋಟದ ವಸ್ತು ಏನೆಂಬುದು ಇನ್ನೂ ನಿಗೂಢವಾಗಿದೆ. ಪ್ರಕರಣದ ತನಿಖೆ ಕಾರ್ಯ ಚುರುಕುಗೊಳಿಸಲಾಗಿದೆ. ರಾಜ್ಯ, ಹೊರರಾಜ್ಯ ಹಾಗೂ ಕೇಂದ್ರದ ತನಿಖಾ ತಂಡಗಳು ಮಂಗಳವಾರ ಹುಬ್ಬಳ್ಳಿಯಲ್ಲಿಯೇ ಬೀಡುಬಿಟ್ಟು ಸ್ಫೋಟಕಗಳ ಬಗ್ಗೆ ವಿವಿಧ ಆಯಾಮದಲ್ಲಿ ತನಿಖೆ ಮುಂದುವರಿಸಿವೆ. ಜಿಆರ್‌ಪಿ (ಜನರಲ್‌ ರೈಲ್ವೆ ಪೊಲೀಸ್‌) ಠಾಣೆಯಲ್ಲಿ ಸ್ಫೋಟಕ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಜಾಲ ಬೀಸಲಾಗಿದೆ. ರೈಲ್ವೆ ನಿಲ್ದಾಣಗಳಲ್ಲಿ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಸಂಗ್ರಹಿಸುವ ಕಾರ್ಯ ನಡೆಸಲಾಗುತ್ತಿದೆ. ವಿಜಯವಾಡ-ಹುಬ್ಬಳ್ಳಿ ಮಧ್ಯೆ ಬರುವ ರೈಲ್ವೆ ನಿಲ್ದಾಣಗಳಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆಗೆ ಜಿಆರ್‌ಪಿ ತಂಡ ಮುಂದಾಗಿದೆ. ಈ ಮೂಲಕ ಆರೋಪಿಗಳ ಪತ್ತೆಗೆ ಚುರುಕಿನ ಕಾರ್ಯಾಚರಣೆ ನಡೆಸುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಡಿಎಸ್‌ಪಿ ನೇತೃತ್ವದಲ್ಲಿ ತನಿಖೆ

ಸ್ಫೋಟ ಘಟನೆ ನಡೆದು ಒಂದು ದಿನದ ಬಳಿಕ (ಮಂಗಳವಾರ) ನೈರುತ್ಯ ರೈಲ್ವೆ ವಲಯದ ಅಧಿಕಾರಿಗಳು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ತನಿಖೆ ಹೊಣೆಯನ್ನು ರಾಜ್ಯ ಪೊಲೀಸರಿಗೆ ವಹಿಸಿದ್ದು, ಡಿಎಸ್‌ಪಿ ನೇತೃತ್ವದ ತಂಡ ತನಿಖೆ ಕೈಗೊಳ್ಳಲಿದೆ, ಎಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ