ಆ್ಯಪ್ನಗರ

ಸ್ನೇಹಿತನ ಪತ್ನಿಯ ಜೊತೆ ಚೆಲ್ಲಾಟವಾಡಿದ ಕಿರಾತಕ ಆಕೆಯ ಗಂಡನನ್ನೇ ಮುಗಿಸಿ ಬಿಟ್ಟ..!

ಕೊಲೆಯಾದ ಜಗದೀಶನ ಹೆಂಡತಿಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ ಕಾಶಪ್ಪ, ಜಗದೀಶ ಗ್ರಾಮಕ್ಕೆ ಬಂದಾಗ ಕರೆದುಕೊಂಡು ಹೋಗಿ ಊರ ಹೊರಗೆ ಮದ್ಯ ಕುಡಿಸಿ, ನಶೆ ಏರಿದ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದನು ಎಂದು ಹೇಳಲಾಗಿದೆ.

Vijaya Karnataka Web 26 Nov 2020, 8:22 am
ಹುಬ್ಬಳ್ಳಿ: ತಾಲೂಕಿನ ಅಂಚಟಗೇರಿಯ ಬಳಿಯ ಚೆನ್ನಾಪುರ ರಸ್ತೆಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ.
Vijaya Karnataka Web Police arrest 2
Illustration used for representational purpose


ಮೃತನ ಪತ್ನಿಯ ಜತೆಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಎನ್ನಲಾದ ವ್ಯಕ್ತಿಯೇ ಕೊಲೆ ಮಾಡಿದ ಆರೋಪಿ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಹಾವೇರಿ ಜಿಲ್ಲೆಯ ಹಾನಗಲ್‌ ಪಟ್ಟಣದ ಜಗದೀಶ ಕೊಲ್ಲಾಪುರ ಎಂಬ ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿತ್ತು. ಆತನ ಶವ ಅಂಚಟಗೇರಿ ಬಳಿಯ ಚೆನ್ನಾಪುರ ರಸ್ತೆಯಲ್ಲಿಸಿಕ್ಕಿತ್ತು.

ಶಿಕ್ಷಕರಿಗೆ ಸಹಾಯಧನ ನೀಡದೆ, ನಿಗಮಕ್ಕೆ 500 ಕೋಟಿ ರೂ ನೀಡಿದ್ದಕ್ಕೆ ಖಂಡನೆ

ತನಿಖೆ ನಡೆಸಿದ ಪೊಲೀಸರು, ಅದರಗುಂಚಿ ಗ್ರಾಮದ ಕಾಶಪ್ಪ ನಿಂಗಪ್ಪ ತಿಪ್ಪಣ್ಣನವರ ಎಂಬಾತನನ್ನು ಬಂಧಿಸಿದ್ದಾರೆ. ಕೊಲೆಯಾದ ಜಗದೀಶನ ಹೆಂಡತಿಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ ಕಾಶಪ್ಪ, ಜಗದೀಶ ಗ್ರಾಮಕ್ಕೆ ಬಂದಾಗ ಕರೆದುಕೊಂಡು ಹೋಗಿ ಊರ ಹೊರಗೆ ಮದ್ಯ ಕುಡಿಸಿ, ನಶೆ ಏರಿದ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದನು ಎಂದು ಹೇಳಲಾಗಿದೆ.

ಲ್ಯಾಪ್ರೋಸ್ಕೋಪಿ ಚಿಕಿತ್ಸೆ ಮೂಲಕ 18 ವರ್ಷದ ಬಳಿಕ 42 ವರ್ಷದ ಮಹಿಳೆಗೆ ಮಗು ಜನನ..!

ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸ್‌ ಇನ್ಸಪೆಕ್ಟರ್‌ ರಮೇಶ ಗೋಕಾಕ ನೇತೃತ್ವದಲ್ಲಿ ಪಿಎಸ್‌ಐ ಮಂಜುಳಾ ಮತ್ತು ಚಾಮುಂಡೇಶ್ವರಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ