ಆ್ಯಪ್ನಗರ

ನೊಂದ ಪತಿ ಆತ್ಮಹತ್ಯೆಗೆ ಯತ್ನ

ಹುಬ್ಬಳ್ಳಿ ; ಪತ್ನಿ ಪ್ರಿಯಕರ ನಿರಂತರವಾಗಿ ಪೀಡಿಸುತ್ತಿದ್ದ ಕಾರಣದಿಂದ ನೊಂದ ಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಲ್ಲಿಯ ಗೋಕುಲ ಗ್ರಾಮದಲ್ಲಿ ಬುಧವಾರ ನಡೆದಿದೆ.

Vijaya Karnataka 17 Aug 2019, 5:00 am
ಹುಬ್ಬಳ್ಳಿ ; ಪತ್ನಿ ಪ್ರಿಯಕರ ನಿರಂತರವಾಗಿ ಪೀಡಿಸುತ್ತಿದ್ದ ಕಾರಣದಿಂದ ನೊಂದ ಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಲ್ಲಿಯ ಗೋಕುಲ ಗ್ರಾಮದಲ್ಲಿ ಬುಧವಾರ ನಡೆದಿದೆ.
Vijaya Karnataka Web husband trying to commit suicide
ನೊಂದ ಪತಿ ಆತ್ಮಹತ್ಯೆಗೆ ಯತ್ನ


ಗೋಕುಲ ಗ್ರಾಮದ ಮೈಲಾರಲಿಂಗೇಶ್ವರನಗರದ ಕೃಷ್ಣಾ ಹನುಮಂತಪ್ಪ ಪೂಜಾರ ಆತ್ಮಹತ್ಯೆಗೆ ಯತ್ನಿಸಿದ ಪತಿ. ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಕೃಷ್ಣಾ ಪೂಜಾರ ನಿವಾಸಕ್ಕೆ ಬಂದ ಬೆಳಗಾವಿ ಜಿಲ್ಲೆಯ ಏಣಗಿ ಗ್ರಾಮದ ಸಂತೋಷ ಬಸವಣ್ಣೆಪ್ಪ ದೊಡ್ಡವಾಡ ಬಹಳ ವರ್ಷದಿಂದ ನಿನ್ನ ಪತ್ನಿ ದೀಪಾಳನ್ನು ಪ್ರೀತಿಸುತ್ತಿದ್ದೇನೆ. ಅವಳನ್ನು ನನ್ನ ಜತೆ ಕಳುಹಿಸಕೊಡುವಂತೆ ಕೃಷ್ಣಾನನ್ನು ಪೀಡಿಸಿದ್ದಾನಲ್ಲದೆ, ಆತನ ಜತೆ ಗಲಾಟೆ ಮಾಡಿಕೊಂಡಿದ್ದಾನೆ. ಇದರಿಂದ ಮನನೊಂದ ಕೃಷ್ಣ ಪೂಜಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಬಗ್ಗೆ ಗೋಕುಲರೋಡ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ