ಆ್ಯಪ್ನಗರ

ಯಡಿಯೂರಪ್ಪ ನಂತರ ನಾನೇ ಮುಖ್ಯಮಂತ್ರಿ: ಉಮೇಶ್‌ ಕತ್ತಿ

ಸಿಎಂ ಆಗುವ ಬಯಕೆಯನ್ನು ಬಿಜೆಪಿ ನಾಯಕ ಉಮೇಶ್‌ ಕತ್ತಿ ಮತ್ತೆ ಪುನರುಚ್ಛರಿಸಿದ್ದಾರೆ. ಈಗ ಯಡಿಯೂರಪ್ಪ ನಂತರ ನಾನೇ ಸಿಎಂ ಎಂದು ಹೇಳಿಕೊಂಡಿದ್ದಾರೆ. ನಾನು ಏಕಾಂಗಿ ಅಲ್ಲ ಎಂದೂ ಉಮೇಶ್‌ ಕತ್ತಿ ತಿಳಿಸಿದ್ದಾರೆ.

Vijaya Karnataka Web 26 Oct 2019, 5:05 pm
ಹುಬ್ಬಳ್ಳಿ: ಯಡಿಯೂರಪ್ಪ ನಂತರ ನಾನೇ ರಾಜ್ಯದ ಮುಖ್ಯಮಂತ್ರಿ. ಅದಕ್ಕಾಗೇ ನನಗೆ ಸಚಿವ ಸ್ಥಾನ ಸಿಕ್ಕಿಲ್ಲ. ಸಚಿವರಾಗಿ ಮುಖ್ಯಮಂತ್ರಿಯಾಗಬೇಕು. ಡಿಸಿಎಂ ಅಲ್ಲ ಎಂದು ಬಿಜೆಪಿ ನಾಯಕ ಉಮೇಶ್‌ ಕತ್ತಿ ಹೇಳಿದ್ದಾರೆ.
Vijaya Karnataka Web umesh katti et


ಯಡಿಯೂರಪ್ಪ ನಂತರ ನಾನೇ ರಾಜ್ಯದ ಸಿಎಂ. ಅದಕ್ಕಾಗೇ ನನಗೆ ಸಚಿವ ಸ್ಥಾನ ಸಿಕ್ಕಿಲ್ಲ. ಸಚಿವರಾಗಿ ಮುಖ್ಯಮಂತ್ರಿಯಾಗಬೇಕು. ಡಿಸಿಎಂ ಅಲ್ಲ. ಡಿಸಿಎಂ ಹುದ್ದೆ ಅಸಂವಿಧಾನಿಕ ಹುದ್ದೆಯಾಗಿದೆ. ಮುಂದಿನ ದಿನಗಳಲ್ಲಿ ಸಾಕಷ್ಟು ಬದಲಾವಣೆ ಆಗಲಿದೆ. ಬದಲಾವಣೆ ಮಾಡೋದಕ್ಕಾಗೇ ನನಗೆ ಮಂತ್ರಿ ಸ್ಥಾನ ಕೊಟ್ಟಿಲ್ಲ ಎಂದೂ ಉಮೇಶ್‌ ಕತ್ತಿ ತನ್ನ ಮುಖ್ಯಮಂತ್ರಿ ಆಗುವ ಬಯಕೆಯನ್ನು ಪುನರುಚ್ಛರಿಸಿದ್ದಾರೆ.

ನಾನು ಸಿಎಂ ಆಗುವುದು ಖಂಡಿತ: ಕರ್ನಾಟಕದ ಮುಖ್ಯಮಂತ್ರಿಯಾಗದಿದ್ದರೆ ಸಾಯೋದ್ರೊಳಗೆ ಉತ್ತರ ಕರ್ನಾಟಕದ ಮುಖ್ಯಮಂತ್ರಿಯಾಗ್ತೇನೆ'': ಉಮೇಶ್‌ ಕತ್ತಿ

ಸದ್ಯಕ್ಕೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ. ಅವರ ನಂತರ ನಾನು ಸಿಎಂ ಆಗುವೆ. ನಾನು ಏಕಾಂಗಿ ಅಲ್ಲ. ನನ್ನ ಹಿಂದೆಯೂ ಸಾಕಷ್ಟು ಜನರಿದ್ದಾರೆ. ನಾನು ಸಭೆಯಲ್ಲಿ ಎಲ್ಲಿ ಕೂತರೇ ಏನು. ಹೇಳಬೇಕಾಗಿದ್ದನ್ನು ಹೇಳಿದ್ದೇನೆ ಎಂದೂ ಉಮೇಶ್‌ ಕತ್ತಿ ಸಮರ್ಥಿಸಿಕೊಂಡಿದ್ದಾರೆ.

ಕತ್ತಿ ಸಿಎಂ ಆಗಲಿದ್ದಾರೆ: ಕೋರೆ

ಅಲ್ಲದೆ, ನೆರೆ ಪರಿಹಾರ ನನಗೆ ಸಮಾಧಾನ ತಂದಿದೆ. ಸರಕಾರ ಸಾಕಷ್ಟು ಅನುದಾನ ನೀಡಿದೆ. ಕೇಂದ್ರ ಸರಕಾರ ಇನ್ನೂ 400 ಕೋಟಿ ಕೊಡುವುದಾಗಿ ಹೇಳಿದೆ ಎಂದೂ ಬಿಜೆಪಿ ನಾಯಕ ಉಮೇಶ್‌ ಕತ್ತಿ ನೆರೆ ಪರಿಹಾರ ವಿಚಾರದಲ್ಲಿ ಮೋದಿ ಸರಕಾರವನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

ಹುಡುಗಾಟಿಕೆ ಮಾತು ನಿಲ್ಲಿಸಿ, ಕತ್ತಿಗೆ ಕಾರಜೋಳ ಖಡಕ್‌ ವಾರ್ನಿಂಗ್‌

ಇನ್ನು, ಡಿಸಿಎಂ ಸವದಿ ನನ್ನ ಆತ್ಮೀಯ ಸ್ನೇಹಿತ. ಸಿಎಂ ಯಡಿಯೂರಪ್ಪ ನನ್ನ ರಾಜಕೀಯ ಗುರು ಎಂದ ಉಮೇಶ್‌ ಕತ್ತಿ, ಅನರ್ಹರಿಂದಲೇ ನಮ್ಮ ಸರ್ಕಾರ ಬಂದಿದೆ ಎಂದೂ ಅನರ್ಹ ಶಾಸಕರಿಗೂ ಬಿಜೆಪಿ ಸಂಬಂಧವಿಲ್ಲ ಅನ್ನೋ‌ ವಿಚಾರದ ಬಗ್ಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ