ಆ್ಯಪ್ನಗರ

ಕನ್ನಡಪರ ಕಾರ್ಯಕರ್ತರು ರೋಲ್‌ಕಾಲ್‌ ಹೋರಾಟಗಾರರು ಎಂಬ ಹೇಳಿಕೆಗೆ ನಾನು ಬದ್ಧ; ಶಾಸಕ ಬೆಲ್ಲದ್

ಪ್ರತಿಯೊಬ್ಬ ಶಾಸಕರಿಗೆ ಸಚಿವರಾಗಬೇಕೆಂಬ ಬಯಕೆ ಇದ್ದಂತೆ ನನಗೂ ಆಸೆಯಿದೆ. ಆದರೆ, ಅದಕ್ಕಾಗಿ ನಾನು ಯಾವುದೇ ಲಾಬಿ ಮಾಡುವುದಿಲ್ಲ. ಪಕ್ಷ ಯಾವುದೇ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ಬದ್ಧನಾಗಿರುತ್ತೇನೆ ಎಂದು ಶಾಸಕ ಅರವಿಂದ ಬೆಲ್ಲದ ಎಂದು ಹೇಳಿದ್ದಾರೆ.

Vijaya Karnataka Web 27 Nov 2020, 8:52 am
ಹುಬ್ಬಳ್ಳಿ: ಕನ್ನಡಪರ ಸಂಘಟನೆ ಕಾರ್ಯಕರ್ತರು ರೋಲ್‌ಕಾಲ್‌ ಹೋರಾಟಗಾರರು ಎನ್ನುವ ನನ್ನ ಹೇಳಿಕೆಗೆ ಈಗಲೂ ಬದ್ಧನಿದ್ದೇನೆ ಎಂದು ಶಾಸಕ ಅರವಿಂದ ಬೆಲ್ಲದ ಎಂದು ಹೇಳಿದ್ದಾರೆ.
Vijaya Karnataka Web aravind bellad1


ಹಳ್ಳಿಯಲ್ಲರಳಿದ ಮಾದರಿ ಹುಡುಗಿ ಕ್ರೀಡಾರತ್ನ ಪುರಸ್ಕೃತ ಬ್ಯಾಡ್ಮಿಂಟನ್‌ಪಟು ‘ಜಯ’ಲಕ್ಷ್ಮೀ..!

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಸೂಲಿ ಮಾಡುವವರು ಯಾರು ಎಂಬುದು ಪ್ರತಿಯೊಬ್ಬರಿಗೂ ಗೊತ್ತಿರುವ ಸಂಗತಿ. ಅದನ್ನು ನಾನು ಸಾಬೀತು ಮಾಡುವ ಅವಶ್ಯಕತೆ ಇಲ್ಲ. ಅಂತಹ ಪ್ರಯತ್ನವನ್ನು ನಾನು ಮಾಡುವುದಿಲ್ಲ. ಕನ್ನಡಪರ ಸಂಘಟನೆ ಕಾರ್ಯಕರ್ತರು ರೋಲ್‌ಕಾಲ್‌ ಹೋರಾಟಗಾರರು ಎನ್ನುವ ನನ್ನ ಹೇಳಿಕೆಗೆ ಈಗಲೂ ಬದ್ಧನಿದ್ದೇನೆ ಎಂದು ಸ್ಪಷ್ಟಪಡಿಸಿದರು

ಯೋಗೀಶ ಗೌಡ ಹತ್ಯೆ ಕೇಸ್‌; ಮತ್ತೆ ಕೆಲವರನ್ನು ವಿಚಾರಣೆಗೆ ಒಳಪಡಿಸಿದ ನಡೆಸಿದ ಸಿಬಿಐ

ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರತಿಯೊಬ್ಬ ಶಾಸಕರಿಗೆ ಸಚಿವರಾಗಬೇಕೆಂಬ ಬಯಕೆ ಇದ್ದಂತೆ ನನಗೂ ಆಸೆಯಿದೆ. ಆದರೆ, ಅದಕ್ಕಾಗಿ ನಾನು ಯಾವುದೇ ಲಾಬಿ ಮಾಡುವುದಿಲ್ಲ. ಪಕ್ಷ ಯಾವುದೇ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ಬದ್ಧನಾಗಿರುತ್ತೇನೆ ಎಂದು ಸ್ಪಷ್ಟಪಡಿಸಿದರು.

ಮಾಜಿ ಸಚಿವ ವಿನಯ ಕುಲಕರ್ಣಿಗೆ ಜಾಮೀನು ಕೋರಿ ಮತ್ತೆ ಅರ್ಜಿ

ಅಲ್ಲದೇ ಸಚಿವರಾಗಲು ಬಿಜೆಪಿಯಲ್ಲಿ ಮೂಲ ಮತ್ತು ವಲಸಿಗರೆಂಬ ಭಿನ್ನಾಭಿಪ್ರಾಯ ಹಾಗೂ ಬಣಗಳು ಇಲ್ಲ. ಸಚಿವ ಸ್ಥಾನಕ್ಕಾಗಿ ಪಕ್ಷದಲ್ಲಿ ಲಾಬಿ ನಡೆಸಬೇಕಾದ ಅನಿವಾರ್ಯತೆ ಇಲ್ಲ. ಅಂಥ ಪ್ರಮೇಯವೇ ಬರುವುದಿಲ್ಲ. ಪಕ್ಷದ ಹಿರಿಯರು ರಾಜ್ಯದ ಹಿತ ಕಾಪಾಡಲು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ