ಆ್ಯಪ್ನಗರ

ಕೊರೊನಾ ಲಸಿಕೆ ಬರುವವರೆಗೂ ಪ್ರತಿಯೊಬ್ಬರೂ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು; ಡಾ. ಕೆ ಸುಧಾಕರ್

ಕೊರೊನಾ ಸೋಂಕು ವಿದ್ಯಾರ್ಥಿಗಳಿಗೆ ತಗುಲುವುದಿಲ್ಲ ಎಂದೇನೂ ಇಲ್ಲ. ಆದರೆ, ಯುವಕರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿರಲಿದೆ. ಈ ವಿಶ್ವಾಸದ ಮೇಲೆ ಕಾಲೇಜು ಆರಂಭಿಸಲಾಗಿದೆ ಎಂದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಮಕ್ಕಳ ಜೀವನ ಹಾಗೂ ಅವರ ಶೈಕ್ಷಣಿಕ ಭವಿಷ್ಯ ರೂಪಿಸುವ ಜವಾಬ್ದಾರಿ ಸರಕಾರದ ಮೇಲಿದೆ. ಹೀಗಾಗಿ ಈಗ ಹಂತ ಹಂತವಾಗಿ ಕಾಲೇಜುಗಳನ್ನು ಆರಂಭಿಸಲಾಗುತ್ತಿದೆ ಎಂದರು.

ಮಹಾರಾಷ್ಟ್ರ ಟೈಮ್ಸ್ 22 Nov 2020, 10:42 am
ಧಾರವಾಡ: ದಿಲ್ಲಿ ಹಾಗೂ ಅಹ್ಮದಾಬಾದ್‌ನಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದೆ. ಒಂದು ವೇಳೆ ಸೋಂಕು ರಾಜ್ಯದಲ್ಲೂ ಹೆಚ್ಚಳ ಆದರೆ ಮತ್ತೆ ಕಾಲೇಜುಗಳನ್ನು ಬಂದ್‌ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
Vijaya Karnataka Web dr k sudhakar


ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ವಿದ್ಯಾರ್ಥಿಗಳಿಗೆ ತಗುಲುವುದಿಲ್ಲ ಎಂದೇನೂ ಇಲ್ಲ. ಆದರೆ, ಯುವಕರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿರಲಿದೆ. ಈ ವಿಶ್ವಾಸದ ಮೇಲೆ ಕಾಲೇಜು ಆರಂಭಿಸಲಾಗಿದೆ ಎಂದರು. ಮಕ್ಕಳ ಜೀವನ ಹಾಗೂ ಅವರ ಶೈಕ್ಷಣಿಕ ಭವಿಷ್ಯ ರೂಪಿಸುವ ಜವಾಬ್ದಾರಿ ಸರಕಾರದ ಮೇಲಿದೆ. ಹೀಗಾಗಿ ಈಗ ಹಂತ ಹಂತವಾಗಿ ಕಾಲೇಜುಗಳನ್ನು ಆರಂಭಿಸಲಾಗುತ್ತಿದೆ ಎಂದರು.

ಮಾರ್ಚ್‌ ಅಂತ್ಯದೊಳಗೆ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಮಾಡುತ್ತೇವೆ; ಸಚಿವ ಪ್ರಭು ಚವ್ಹಾಣ್

120-130 ವಿದ್ಯಾರ್ಥಿಗಳಿಗೆ ಕೋವಿಡ್‌ ಬಂದಿದೆ ಎಂಬ ಮಾಹಿತಿ ಸಿಕ್ಕಿದೆ ಎಂದ ಸಚಿವರು, ಹೀಗಾದಲ್ಲಿ ಮತ್ತೆ ಕಾಲೇಜುಗಳನ್ನು ಬಂದ್‌ ಮಾಡುವುದು ಅನಿವಾರ್ಯ ಆಗಲಿದೆ. ಹೀಗಾಗಿಯೇ ರಾಜ್ಯದಲ್ಲಿ ಇನ್ನೂ ಶಾಲೆಗಳನ್ನು ಆರಂಭಿಸಿಲ್ಲ. ಅಹ್ಮದಾಬಾದ್‌ನಲ್ಲಿ ಶನಿವಾರದಿಂದ ಮತ್ತೆ ಲಾಕ್‌ಡೌನ್‌ ಘೋಷಿಸಲಾಗಿದೆ. ಅದು ಕರ್ನಾಟಕಕ್ಕೂ ಬರಲಿದೆ ಎಂದು ಹೇಳಲಾಗದು. ಆದರೆ ಕರ್ನಾಟಕದಲ್ಲಿ ಕೊರೊನಾ ಹೋಗಿದೆ ಎಂಬ ಭಾವನೆ ಜನರಲ್ಲಿದೆ. ಇದು ಸರಿಯಲ್ಲ. ಲಸಿಕೆ ಬರುವವರೆಗೂ ಪ್ರತಿಯೊಬ್ಬರೂ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದರು.

ಸುರೇಶ್‌ ಅಂಗಡಿ ಮನೆಯವರಿಗೆ ಬೆಳಗಾವಿ ಟಿಕೆಟ್‌ ಫೈನಲ್ ಆಗಿಲ್ಲ; ಅಲ್ಲಿ ಹಲವಾರು ಆಕಾಂಕ್ಷಿಗಳಿದ್ದಾರೆ

ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಿಗೆ ಅನುಕೂಲವಾಗಿದೆ. ಇದನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಸಿಎಂ ಹಾಗೂ ದಿಲ್ಲಿಯ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ. ಈ ಬಗ್ಗೆ ಪದೇ ಪದೆ ವ್ಯಾಖ್ಯಾನ ಮಾಡುವುದು ಸರಿಯಲ್ಲ ಎಂದು ಸಚಿವರು ತಿಳಿಸಿದರು.
ಕೊರೊನಾ ಎರಡನೇ ಅಲೆಯ ಅನ್ವಯ ಒಬ್ಬ ವ್ಯಕ್ತಿಗೆ 45 ದಿನದಿಂದ 2 ತಿಂಗಳ ಬಳಿಕವೂ ಕೊರೊನಾ ಪಾಸಿಟಿವ್‌ ಬರಲಿದೆ. ಅದು ಬರಲೇಬೇಕು ಎಂದೇನೂ ಇಲ್ಲ. ನಮ್ಮ ಜನರ ನಡವಳಿಕೆ ಮೇಲೆ ಅವಲಂಬನೆ ಆಗಲಿದೆ. ಸರಕಾರದ ಮಾರ್ಗಸೂಚಿ ಅನ್ವಯ ಎಲ್ಲರೂ ನಡೆದುಕೊಂಡರೆ 2ನೇ ಬಾರಿಗೆ ಕೊರೊನಾ ಬರುವುದು ಕಡಿಮೆ.
ಡಾ.ಕೆ ಸುಧಾಕರ್‌, ಆರೋಗ್ಯ ಸಚಿವ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ