ಆ್ಯಪ್ನಗರ

ಸೋಂಕು ಹೆಚ್ಚಾದರೆ ಮತ್ತೆ ಕಾಲೇಜ್‌ ಬಂದ್‌

ಧಾರವಾಡ: ದಿಲ್ಲಿಹಾಗೂ ಅಹ್ಮದಾಬಾದ್‌ನಲ್ಲಿಕೊರೊನಾ ಎರಡನೇ ಅಲೆ ಆರಂಭವಾಗಿದೆ. ಒಂದು ವೇಳೆ ಸೋಂಕು ರಾಜ್ಯದಲ್ಲೂಹೆಚ್ಚಳ ಆದರೆ ಮತ್ತೆ ಕಾಲೇಜುಗಳನ್ನು ಬಂದ್‌ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ ತಿಳಿಸಿದ್ದಾರೆ.

Vijaya Karnataka 22 Nov 2020, 5:00 am
ಧಾರವಾಡ: ದಿಲ್ಲಿಹಾಗೂ ಅಹ್ಮದಾಬಾದ್‌ನಲ್ಲಿಕೊರೊನಾ ಎರಡನೇ ಅಲೆ ಆರಂಭವಾಗಿದೆ. ಒಂದು ವೇಳೆ ಸೋಂಕು ರಾಜ್ಯದಲ್ಲೂಹೆಚ್ಚಳ ಆದರೆ ಮತ್ತೆ ಕಾಲೇಜುಗಳನ್ನು ಬಂದ್‌ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ ತಿಳಿಸಿದ್ದಾರೆ.
Vijaya Karnataka Web Sudhakar


ನಗರದಲ್ಲಿಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಕೊರೊನಾ ಸೋಂಕು ವಿದ್ಯಾರ್ಥಿಗಳಿಗೆ ತಗುಲುವುದಿಲ್ಲಎಂದೇನೂ ಇಲ್ಲ. ಆದರೆ, ಯುವಕರಲ್ಲಿರೋಗ ನಿರೋಧಕ ಶಕ್ತಿ ಹೆಚ್ಚಿರಲಿದೆ. ಈ ವಿಶ್ವಾಸದ ಮೇಲೆ ಕಾಲೇಜು ಆರಂಭಿಸಲಾಗಿದೆ'' ಎಂದರು.

''ಮಕ್ಕಳ ಜೀವನ ಹಾಗೂ ಅವರ ಶೈಕ್ಷಣಿಕ ಭವಿಷ್ಯ ರೂಪಿಸುವ ಜವಾಬ್ದಾರಿ ಸರಕಾರದ ಮೇಲಿದೆ. ಹೀಗಾಗಿ ಈಗ ಹಂತ ಹಂತವಾಗಿ ಕಾಲೇಜುಗಳನ್ನು ಆರಂಭಿಸಲಾಗುತ್ತಿದೆ. 120-130 ವಿದ್ಯಾರ್ಥಿಗಳಿಗೆ ಕೋವಿಡ್‌ ಬಂದಿದೆ ಎಂಬ ಮಾಹಿತಿ ಸಿಕ್ಕಿದೆ. ಹೀಗಾದಲ್ಲಿಮತ್ತೆ ಕಾಲೇಜುಗಳನ್ನು ಬಂದ್‌ ಮಾಡುವುದು ಅನಿವಾರ್ಯ ಆಗಲಿದೆ. ಹೀಗಾಗಿಯೇ ರಾಜ್ಯದಲ್ಲಿಇನ್ನೂ ಶಾಲೆಗಳನ್ನು ಆರಂಭಿಸಿಲ್ಲ'' ಎಂದರು.

''ಅಹ್ಮದಾಬಾದ್‌ನಲ್ಲಿಶನಿವಾರದಿಂದ ಮತ್ತೆ ಲಾಕ್‌ಡೌನ್‌ ಘೋಷಿಸಲಾಗಿದೆ. ಅದು ಕರ್ನಾಟಕಕ್ಕೂ ಬರಲಿದೆ ಎಂದು ಹೇಳಲಾಗದು. ಆದರೆ ಕರ್ನಾಟಕದಲ್ಲಿಕೊರೊನಾ ಹೋಗಿದೆ ಎಂಬ ಭಾವನೆ ಜನರಲ್ಲಿದೆ. ಇದು ಸರಿಯಲ್ಲ. ಲಸಿಕೆ ಬರುವವರೆಗೂ ಪ್ರತಿಯೊಬ್ಬರೂ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು'' ಎಂದರು.

''ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಿಗೆ ಅನುಕೂಲವಾಗಿದೆ. ಇದನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗುವುದು'' ಎಂದು ಹೇಳಿದರು.

''ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಸಿಎಂ ಹಾಗೂ ದಿಲ್ಲಿಯ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ. ಈ ಬಗ್ಗೆ ಪದೇ ಪದೆ ವ್ಯಾಖ್ಯಾನ ಮಾಡುವುದು ಸರಿಯಲ್ಲ'' ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ