ಆ್ಯಪ್ನಗರ

ನೆರೆ ರಾಜ್ಯದವರು ಬಂದರೆ ಕೂಡಲೆ ತಿಳಿಸಿ

ಧಾರವಾಡ: ಲಾಕ್‌ಡೌನ್‌ ಸಮಯದಲ್ಲಿಅಂತಾರಾಜ್ಯ ಪ್ರಯಾಣಕ್ಕೆ ಸರಕಾರ ಅನುಮತಿ ನೀಡಿದೆ. ಅತಿಹೆಚ್ಚು ಕೊರೊನಾ ಪ್ರಕರಣಗಳಿರುವ ಮಹಾರಾಷ್ಟ್ರ, ಗುಜರಾತ್‌, ರಾಜಸ್ಥಾನ, ತಮಿಳುನಾಡು ಹಾಗೂ ದೆಹಲಿ ರಾಜ್ಯಗಳಿಂದ ಬರುವ ಜನರನ್ನು ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಲಾಗುವುದು. ಉಳಿದ

Vijaya Karnataka 10 May 2020, 5:00 am
ಧಾರವಾಡ: ಲಾಕ್‌ಡೌನ್‌ ಸಮಯದಲ್ಲಿಅಂತಾರಾಜ್ಯ ಪ್ರಯಾಣಕ್ಕೆ ಸರಕಾರ ಅನುಮತಿ ನೀಡಿದೆ. ಅತಿಹೆಚ್ಚು ಕೊರೊನಾ ಪ್ರಕರಣಗಳಿರುವ ಮಹಾರಾಷ್ಟ್ರ, ಗುಜರಾತ್‌, ರಾಜಸ್ಥಾನ, ತಮಿಳುನಾಡು ಹಾಗೂ ದೆಹಲಿ ರಾಜ್ಯಗಳಿಂದ ಬರುವ ಜನರನ್ನು ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಲಾಗುವುದು. ಉಳಿದ ರಾಜ್ಯಗಳಿಂದ ಬರುವ ಜನರನ್ನು ಅವರ ಆರೋಗ್ಯ ಆಧರಿಸಿ ನಿರ್ಧರಿಸಲಾಗುವುದು. ಹೊರ ರಾಜ್ಯಗಳಿಂದ ಬರುವ ಜನರು ಕಡ್ಡಾಯವಾಗಿ ಕೃಷಿ ವಿ.ವಿ.ಆವರಣಕ್ಕೆ ತೆರಳಿ ಆರೋಗ್ಯ ತಪಾಸಣೆ ಮಾಡಿಸಿ, ನೋಂದಣಿ ಮಾಡಿಕೊಳ್ಳಬೇಕು.
Vijaya Karnataka Web if neighbors come tell them immediately
ನೆರೆ ರಾಜ್ಯದವರು ಬಂದರೆ ಕೂಡಲೆ ತಿಳಿಸಿ


ಜಿಲ್ಲೆಯ ಜನರು ತಮ್ಮ ನೆರೆಹೊರೆ ಪ್ರದೇಶಗಳು, ಮನೆಗಳಿಗೆ ಯಾರಾದರೂ ನೆರೆ ರಾಜ್ಯಗಳಿಂದ ಆಗಮಿಸಿ, ಕ್ವಾರಂಟೈನ್‌ ಗೆ ಒಳಪಡದೇ ಇದ್ದರೇ ಅಂತಹವರ ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಹಾಯವಾಣಿ 1077ಗೆ ಕರೆ ಮಾಡಿ ಅಥವಾ ವಾಟ್ಸ್‌ಆ್ಯಪ್‌ ಸಂಖ್ಯೆಗಳಾದ 9449847646/9449847641 ಸಂದೇಶದ ಮೂಲಕ ಮಾಹಿತಿ ನೀಡಬಹುದು. ಮಾಹಿತಿ ನೀಡಿದವರ ಹೆಸರನ್ನು ಬಹಿರಂಗ ಪಡಿಸುವುದಿಲ್ಲ. ಕೊರೊನಾ ತಡೆಯಲು ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕರು ತಮ್ಮ ಈ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ