ಆ್ಯಪ್ನಗರ

ಮಹಿಳಾ ಮೀಸಲಾತಿ ಮಸೂದೆ ಜಾರಿ ಮಾಡಿ

ಧಾರವಾಡ : ಲೋಕಸಭಾ ಚುನಾವಣೆಯಲ್ಲಿ ಜನಾದೇಶ ಪಡೆಯುವಲ್ಲಿ ಸಫಲರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿ ಜತೆಗೆ ಮಹಿಳಾ ಮೀಸಲಾತಿ ಮಸೂದೆ ಜಾರಿ ಮಾಡಬೇಕು ಎಂದು ಪ್ರದೇಶ ಯುವ ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ವಾತಿ ಮಾಳಗಿ ಒತ್ತಾಯಿಸಿದ್ದಾರೆ.

Vijaya Karnataka 27 May 2019, 5:00 am
ಧಾರವಾಡ : ಲೋಕಸಭಾ ಚುನಾವಣೆಯಲ್ಲಿ ಜನಾದೇಶ ಪಡೆಯುವಲ್ಲಿ ಸಫಲರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿ ಜತೆಗೆ ಮಹಿಳಾ ಮೀಸಲಾತಿ ಮಸೂದೆ ಜಾರಿ ಮಾಡಬೇಕು ಎಂದು ಪ್ರದೇಶ ಯುವ ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ವಾತಿ ಮಾಳಗಿ ಒತ್ತಾಯಿಸಿದ್ದಾರೆ.
Vijaya Karnataka Web implement womens reservation bill
ಮಹಿಳಾ ಮೀಸಲಾತಿ ಮಸೂದೆ ಜಾರಿ ಮಾಡಿ


ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ತಮ್ಮ ಗೆಲುವಿನಲ್ಲಿ ಮಹಿಳಾ ಸಮುದಾಯ ಪಾತ್ರಕ್ಕೆ ಪ್ರಧಾನಿ ಅಭಿನಂದನೆ ಸಲ್ಲಿಸಿದ್ದಾರೆ. ಅಭಿನಂದನೆ ಬರೀ ಬಾಯಿ ಮಾತಲ್ಲಿ ಹೇಳದೇ ಮೀಸಲಾತಿ ಮಸೂದೆ ಜಾರಿಗೊಳಿಸಿ ಕೃತಿ ರೂಪದಲ್ಲಿ ಮಹಿಳೆಯರಿಗೆ ಅಭಿನಂದನೆ ಮತ್ತು ಗೌರವ ಸಲ್ಲಿಸಲು ಮುಂದಾಗುವಂತೆ ಮನವಿ ಮಾಡಿದ್ದಾರೆ.

ಕಳೆದ 5 ವರ್ಷಗಳ ಅವಧಿಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸುವಲ್ಲಿ ಬಿಜೆಪಿ ನೇತೃತ್ವದ ಕೇಂದ್ರದ ಎನ್‌ಡಿಎ ಸರಕಾರ ವಿಫಲವಾಗಿದ್ದು, ಮಹಿಳಾ ಸಮುದಾಯದಲ್ಲಿ ನಿರಾಸೆಗೆ ಕಾರಣವಾಗಿದೆ. ಪ್ರಸ್ತುತ ಸನ್ನಿವೇಶದಲ್ಲಿ ಮಹಿಳೆಯರು ಮತದಾನಕ್ಕೆ ಮಾತ್ರ ಸೀಮಿತವಾದಂತಾಗಿದ್ದು, ಮೀಸಲಾತಿ ಎನ್ನುವುದು ಕನಸಿನ ಮಾತಾಗಿದೆ. ಹಿಂದೆ ದಿ.ರಾಜೀವ್‌ಗಾಂಧಿ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಶೇ.50 ರಷ್ಟು ಮಹಿಳಾ ಮೀಸಲಾತಿ ಕಲ್ಪಿಸಿ ತಾವು ಮಹಿಳೆಯರ ಪರ ಎನ್ನುವುದನ್ನು ನಿರೂಪಿಸಿದ್ದರು. ಆದರೆ ಲೋಕಸಭೆ ಮತ್ತು ವಿಧಾನಸಭೆಯಲ್ಲಿಯೂ ಶೇ.50 ರಷ್ಟು ಪ್ರಮಾಣದಲ್ಲಿ ಮಹಿಳಾ ಮೀಸಲಾತಿಗೆ ಹಲವು ದಶಕಗಳಿಂದ ಬೇಡಿಕೆ ಮುಂದಿಟ್ಟರೂ ಪ್ರಯೋಜನವಾಗಿಲ್ಲ. ಕನಿಷ್ಟ ಶೇ.33 ರಷ್ಟು ಪ್ರಮಾಣದಲ್ಲಾದರೂ ಮೀಸಲಾತಿ ಸೌಭಾಗ್ಯ ಕಲ್ಪಿಸುವ ಮೂಲಕ ಮಹಿಳಾ ಸಮುದಾಯದ ಪರ ಪ್ರಧಾನಿ ನರೇಂದ್ರ ಮೋದಿ ಅವರು ಧ್ವನಿ ಎತ್ತಬೇಕು ಎಂದು ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ