ಆ್ಯಪ್ನಗರ

ಯೋಜನೆ ಬಳಸಿ ಕೌಶಲ ವೃದ್ಧಿಸಿಕೊಳ್ಳಿ

ಧಾರವಾಡ: ಯುವತಿಯರು ಸರಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಕೌಶಲವನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಜಿ.ಪಂ. ಅಧ್ಯಕ್ಷೆ ವಿಜಯಲಕ್ಷಿತ್ರ್ಮೕ ಕೆಂಪೇಗೌಡ ಪಾಟೀಲ ಹೇಳಿದರು.

Vijaya Karnataka 30 Jan 2020, 5:00 am
ಧಾರವಾಡ: ಯುವತಿಯರು ಸರಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಕೌಶಲವನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಜಿ.ಪಂ. ಅಧ್ಯಕ್ಷೆ ವಿಜಯಲಕ್ಷಿತ್ರ್ಮೕ ಕೆಂಪೇಗೌಡ ಪಾಟೀಲ ಹೇಳಿದರು.
Vijaya Karnataka Web improve skills using the project
ಯೋಜನೆ ಬಳಸಿ ಕೌಶಲ ವೃದ್ಧಿಸಿಕೊಳ್ಳಿ


ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿಬುಧವಾರ ನಡೆದ ಭಾರತ ಸರಕಾರದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರದ ಮೂಲಭೂತ ವೃತ್ತಿ ಶಿಕ್ಷಣ ಹಾಗೂ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯುವತಿಯರು ಸ್ವಯಂ ಉದ್ಯೋಗಿಗಳಾಗಬೇಕು. ಒಂದು ಮನೆಯನ್ನು ಬೆಳಗುವ ಶಕ್ತಿ ಹೆಣ್ಣಿನಲ್ಲಿಇದೆ ಎಂದು ತಿಳಿಸಿದರು.

ಜಿಲ್ಲಾಸಮನ್ವಯ ಅಧಿಕಾರಿ ಎಂ.ಗೌತಮ್‌ ರೆಡ್ಡಿ ಮಾತನಾಡಿ, ನೆಹರು ಯುವ ಕೇಂದ್ರ ಯುವಕ-ಯುವತಿಯರಿಗಾಗಿ ದೈಹಿಕ ಹಾಗೂ ಮಾನಸಿಕವಾಗಿ ಹಲವಾರು ಕಾರ್ಯಕ್ರಮಗಳನ್ನು ಮಾಡುತ್ತಿದ್ದು, ಅದರ ಸದುಪಯೋಗವನ್ನು ಗ್ರಾಮ ಮಟ್ಟದ ಯುವ ಜನರು ಉಪಯೋಗಿಸಿಕೊಳ್ಳಬೇಕು ಎಂದರು.

ಇದೇ ವೇಳೆ ಪಿಡಿಒ ನಾಗರಾಜ ಬಿದರಳ್ಳಿ ಗ್ರಾ.ಪಂ. ಮಟ್ಟದಲ್ಲಿರುವ ಎಲ್ಲಮೂಲ ಸೌಕರ್ಯಗಳ ಕುರಿತು ತಿಳಿಸಿದರು.

ಮೊರಬ ಗ್ರಾ.ಪಂ. ಅಧ್ಯಕ್ಷೆ ಸುನಂದಾ ಕಗದಾಳ ಅಧ್ಯಕ್ಷತೆ ವಹಿಸಿದ್ದರು. ವಿರೇಶ ಸವದತ್ತಿ ಪ್ರಾಸ್ತಾವಿಕ ಮಾತನಾಡಿದರು. ಸರಕಾರಿ ಹೆಣ್ಣು ಮಕ್ಕಳ ಶಾಲೆಯ ಮುಖ್ಯೋಪಾಧ್ಯಾಯ ಎಸ್‌.ಎ.ಅಂಗಡಿ, ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಮೊರಬ ಗ್ರಾ.ಪಂ. ಸದಸ್ಯರು ಉಪಸ್ಥಿತರಿದ್ದರು. ಸಂತೋಷ ಕುರಿ ನಿರೂಪಿಸಿದರು. ರವಿ ಕಗದಾಳ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ