ಗದಗ: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿರಾಜ್ಯ ಸರಕಾರ ಬರ ಘೋಷಣೆ ಮಾಡಿದ ನಂತರ ನಡೆದ ಸಮೀಕ್ಷೆಯಲ್ಲಿ ಜಿಲ್ಲೆಯ 2,13,941 ಹೆಕ್ಟೇರ್ ಬೆಳೆಹಾನಿ ಸಂಭವಿಸಿರುವುದು ಸ್ಪಷ್ಟವಾಗಿದೆ. ರಾಜ್ಯದ 191 ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿಗದಗ ಜಿಲ್ಲೆಯ ಆರು ತಾಲೂಕುಗಳು ಒಳಗೊಂಡಿವೆ. ಬರಪೀಡಿತ ತಾಲೂಕುಗಳ ಪಟ್ಟಿ ಬಿಡುಗಡೆ ನಂತರ ಹಾನಿಯ ಸಮೀಕ್ಷೆ ಕೈಗೊಳ್ಳಲಾಗಿತ್ತು. ಅಂದಾಜು ಶೇ. 94ರಷ್ಟು ಬೆಳೆ ಸಮೀಕ್ಷೆ ಪೂರ್ಣಗೊಂಡಿದ್ದು, ಆ ವರದಿ ಆಧಾರದ ಮೇಲೆ ಜಿಲ್ಲೆಯ 2.13 ಲಕ್ಷ ಹೆಕ್ಟೇರ್ ಬೆಳೆಹಾನಿ ಅಂದಾಜಿಸಲಾಗಿದೆ.
ಗದಗ ಜಿಲ್ಲೆಯಲ್ಲಿ 2,13,941 ಹೆಕ್ಟೇರ್ ಪ್ರದೇಶ ಬೆಳೆ ನಷ್ಟ, 1,500 ಕೋಟಿ ರೂ. ಹಾನಿ
ರಾಜ್ಯದಲ್ಲಿ ಮಳೆಯ ಅಭಾವದಿಂದಾಗಿ ಒಟ್ಟು 195 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಕರ್ನಾಟಕ ಸರ್ಕಾರ ಹೆಸರಿಸಿದೆ. ಕೇಂದ್ರ ಸರ್ಕಾರಕ್ಕೆ ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಅಂದಾಜು 6000 ಕೋಟಿ ರೂ.ಗಳನ್ನು ನೀಡಬೇಕೆಂದು ಮನವಿ ಸಲ್ಲಿಸಿದೆ. ಆ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರದಿಂದ ತಜ್ಞರ ತಂಡವೊಂದು ಬರಪೀಡಿತ ಜಿಲ್ಲೆಗಳಲ್ಲಿ ಅಧ್ಯಯನ ಕೈಗೊಂಡಿದೆ. ಗದಗ ಜಿಲ್ಲೆಯಲ್ಲಿ ಅ. 5ರಂದು ಈ ಕುರಿತಂತೆ ಅಧ್ಯಯನ ನಡೆದಿದ್ದು, 2,13,941 ಹೆಕ್ಟೇರ್ ಬೆಳೆ ಹಾನಿ ಹಾಗೂ ಅದರಿಂದ 1,500 ಕೋಟಿ ರೂ. ನಷ್ಟವಾಗಿರುವುದು ಸ್ಪಷ್ಟವಾಗಿದೆ.
ಹೈಲೈಟ್ಸ್:
- ಕೇಂದ್ರದಿಂದ ರಾಜ್ಯಕ್ಕೆ ಆಗಮಿಸಿರುವ ಬರಪೀಡಿತ ಪ್ರಾಂತ್ಯಗಳ ಅಧ್ಯಯನ ತಂಡ.
- ಗದಗ ಜಿಲ್ಲೆಯಲ್ಲಿ 94ರಷ್ಟು ಬೆಳೆ ಸಮೀಕ್ಷೆ; ಅಂದಾಜು 1500 ಕೋಟಿ ರೂ.ಹಾನಿ.
- ಇಂದು ಕೇಂದ್ರ ಬರ ಅಧ್ಯಯನ ತಂಡದಿಂದ ಜಿಲ್ಲೆಯಲ್ಲಿ ಬೆಳೆಹಾನಿ ಪರಿಶೀಲನೆ.