ಆ್ಯಪ್ನಗರ

ಚೀನಾ ವಿಷಯದಲ್ಲಿ ಭಾರತ ಯಾವುದೇ ರಾಜಿಗೆ ಸಿದ್ಧವಿಲ್ಲ: ಪ್ರಹ್ಲಾದ್‌ ಜೋಶಿ

ಕೊರೋನಾ ವಿಷಯದಲ್ಲಿ ಎಲ್ಲರು ಜಾಗೃತಿ ವಹಿಸಬೇಕು. ಇಲ್ಲಿಯವರೆಗೆ ಕೊರೊನಾ ಸಮುದಾಯಕ್ಕೆ ಹಬ್ಬಿದೆ ಎಂದು ನನಗೆ ಅನಿಸಿಲ್ಲಾ. ಮುಂದೆಯೂ ಅದು ಹರಡದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಪ್ರಹ್ಲಾದ್‌ ಜೋಶಿ ತಿಳಿಸಿದರು.

Vijaya Karnataka Web 4 Jul 2020, 2:54 pm
ಹುಬ್ಬಳ್ಳಿ: ಚೀನಾ ವಿಷಯದಲ್ಲಿ ಯಾವುದೇ ರೀತಿಯ ರಾಜಿಗೆ ಭಾರತ ಸಿದ್ದವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.
Vijaya Karnataka Web ಪ್ರಹ್ಲಾದ್‌ ಜೋಶಿ
ಪ್ರಹ್ಲಾದ್‌ ಜೋಶಿ


ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಮಾತನಾಡಿದರು.

ಲೇಹ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದು ಸೈನಿಕರಿಗೆ ಆತ್ಮ ಸ್ಥೈರ್ಯ ತುಂಬಲು, ನಮ್ಮ ಗಡಿ, ನೆಲ ಜಲ ವಿಷಯದಲ್ಲಿ ಭಾರತ ಎಂದಿಗೂ ರಾಜಿಗೆ ತಯಾರಿಲ್ಲ. ಈ ಸಂದೇಶವನ್ನು ಪ್ರಧಾನಿಗಳ ಲೇಹ ಭೇಟಿ ಸಾಬೀತು ಪಡಿಸಿದೆ ಎಂದರು.

ಯಾವುದೇ ಕಾರಣಕ್ಕೂ ದೇಶದ ಒಂದು ಇಂಚು ಭೂಮಿ ಬಿಟ್ಟು ಕೊಡುವ ಪ್ರಶ್ನೆ ಇಲ್ಲ. ಅಲ್ಲದೇ ಎಲ್ಲ ರೀತಿಯ ಹೋರಾಕ್ಕೆ ಭಾರತ ಸಿದ್ದ. ಆದರೆ ಭಾರತ ಶಾಂತಿಯನ್ನು ಪ್ರತಿಪಾದಿಸುವುದು. ಈ ಹಿನ್ನೆಲೆಯಲ್ಲಿ ದೇಶದ ಗಡಿ ಬಗ್ಗೆ ಸಾರ್ವಭೌಮತ್ವದ ಬಗ್ಗೆ ಯಾರೂ ಚಕಾರ ಎತ್ತುವಂತಿಲ್ಲ ಎಂದು ಜೋಶಿ ತಿಳಿಸಿದರು.

ಕೋವಿಡ್ ಮಹಾಮಾರಿ ಸಂದರ್ಭದಲ್ಲಿ ಅತ್ಯಂತ ಉತ್ತಮ ಆಡಳಿತವನ್ನು ಪ್ರಧಾನಿ ನೀಡಿದ್ದಾರೆ. ದೇಶಕ್ಕೆ ಮತ್ತು ಜಗತ್ತಿಗೆ ನಾಯಕತ್ವ ಏನೂ ಎಂಬುದನ್ನು ತಿಳಿಸಿದ್ದಾರೆ ಎಂದು ಸಚಿವರು ವಿವರಿಸಿದರು.

ಸಿದ್ದರಾಮಯ್ಯ ಅವರು ಮನೆ ಮತ್ತು ಮನೆತನಕ್ಕೆ ಮೀಸಲಿಟ್ಟ ಕಾಂಗ್ರೆಸ್ ಪಕ್ಷದ ತಾಳ ತಂಬೂರಿ ಇಲ್ಲದಂತೆ ವರ್ತಿಸುತ್ತಿದ್ದಾರೆ ಎಂದು ಕಿಡಿ ಕಾರಿದರು.

ಕೊರೋನಾ ವಿಷಯದಲ್ಲಿ ಎಲ್ಲರು ಜಾಗೃತಿ ವಹಿಸಬೇಕು. ಇಲ್ಲಿಯವರೆಗೆ ಕೊರೊನಾ ಸಮುದಾಯಕ್ಕೆ ಹಬ್ಬಿದೆ ಎಂದು ನನಗೆ ಅನಿಸಿಲ್ಲಾ. ಮುಂದೆಯೂ ಅದು ಹರಡದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ