ಆ್ಯಪ್ನಗರ

ಜಾಗತಿಕ ದೊಡ್ಡ ಆರ್ಥಿಕ ಶಕ್ತಿಯತ್ತ ಭಾರತ

ಹುಬ್ಬಳ್ಳಿ: ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತ ಕೆಲವೇ ವರ್ಷಗಳಲ್ಲಿಜಾಗತಿಕ ಮಟ್ಟದ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್‌ ಸಿಂಗ್‌ ಠಾಕೂರ್‌ ಹೇಳಿದರು.

Vijaya Karnataka 29 Sep 2019, 5:00 am
ಹುಬ್ಬಳ್ಳಿ: ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತ ಕೆಲವೇ ವರ್ಷಗಳಲ್ಲಿಜಾಗತಿಕ ಮಟ್ಟದ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್‌ ಸಿಂಗ್‌ ಠಾಕೂರ್‌ ಹೇಳಿದರು.
Vijaya Karnataka Web india towards the worlds greatest economic power
ಜಾಗತಿಕ ದೊಡ್ಡ ಆರ್ಥಿಕ ಶಕ್ತಿಯತ್ತ ಭಾರತ


ಶನಿವಾರ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದ ಅವರು, ''ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಆರ್ಥಿಕ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದೆ. 1.5 ಮಿಲಿಯನ್‌ ಡಾಲರ್‌ ಇದ್ದ ಆರ್ಥಿಕ ಸ್ಥಿತಿಯನ್ನು ಕಳೆದ ಐದು ವರ್ಷದಲ್ಲಿ2.5 ಮಿಲಿಯನ್‌ ಡಾಲರ್‌ಗೆ ಹೆಚ್ಚಿಸಲಾಗಿದೆ. 2025ರ ವೇಳೆಗೆ ಐದು ಟ್ರಿಲಿಯನ್‌ ಡಾಲರ್‌ ಗುರಿ ಸಾಧಿಸುವುದು ಖಚಿತ'' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಆರ್ಥಿಕ ಚೇತರಿಕೆಗೆ ಕ್ರಮ
''ಜಾಗತಿಕ ಮಟ್ಟದಲ್ಲಿಆಗಿರುವ ಆರ್ಥಿಕ ಹಿಂಜರಿತದ ಪರಿಣಾಮ ಭಾರತದ ಉದ್ಯಮಗಳ ಮೇಲೂ ಆಗಿದೆ. ಈಗಾಗಲೇ ದೇಶದ ಉದ್ಯಮಿಗಳು, ಉದ್ಯಮ ಸಂಘ ಸಂಸ್ಥೆಗಳ ಮುಖ್ಯಸ್ಥರು, ಆರ್ಥಿಕ ತಜ್ಞರು ಜತೆ ಚರ್ಚೆ ನಡೆಸಲಾಗಿದೆ. ಆರ್ಥಿಕ ಪುನಶ್ಚೇತನಕ್ಕೆ 70 ಸಾವಿರ ಕೋಟಿ ರೂ.ಗಳನ್ನು ಬ್ಯಾಂಕಿಂಗ್‌ ಕ್ಷೇತ್ರಕ್ಕೆ ನೀಡಲಾಗಿದೆ. ಶೇ. 22ಕ್ಕೆ ಕಾರ್ಪೊರೇಟ್‌ ತೆರಿಗೆ ಇಳಿಕೆ ಮಾಡಲಾಗಿದೆ. ಸರಕಾರ ಕೈಗೊಂಡ ಆರ್ಥಿಕ ಕ್ರಮಗಳು ದೇಶದ ಜನರಿಗೆ ತಲುಪಬೇಕು ಎನ್ನುವ ಉದ್ದೇಶದಿಂದ ಸಾಲದ ಮೇಲಿನ ಬಡ್ಡಿ ದರ ಕಡಿಮೆಗೊಳಿಸಲು ಬ್ಯಾಂಕ್‌ಗಳಿಗೆ ಸೂಚಿಸಲಾಗಿದೆ'' ಎಂದರು.

''ಬ್ಯಾಂಕ್‌ಗಳಿಗೆ ದೇಶದ 400 ಜಿಲ್ಲೆಗಳಲ್ಲಿಸಾಲ ಮೇಳಗಳನ್ನು ನಡೆಸಲು ತಿಳಿಸಲಾಗಿದೆ. ವಾಹನ, ಮನೆ ಖರೀದಿ, ಉದ್ಯಮ ಸ್ಥಾಪನೆಗೆ ಸಾಲ ಸೌಲಭ್ಯ ನೀಡಲಿವೆ. ಒಬ್ಬ ಹಳೇ ಗ್ರಾಹಕನ ಜೊತೆ ಇನ್ನೂ ನಾಲ್ಕು ಹೊಸ ಗ್ರಾಹಕರಿಗೆ ಸಾಲ ನೀಡುವಂತೆ ಬ್ಯಾಂಕ್‌ಗಳಿಗೆ ಮನವರಿಕೆ ಮಾಡಿಕೊಡಲಾಗಿದೆ'' ಎಂದು ತಿಳಿಸಿದರು.

''ದೇಶದ ಕೃಷಿ ವಲಯದ ಉತ್ತೇಜನಕ್ಕೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿಯೋಜನೆಗಳನ್ನು ರೂಪಿಸಲಾಗಿದೆ. ಆರ್ಥಿಕ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿಕೇಂದ್ರ ದಿಟ್ಟ ಹೆಜ್ಜೆ ಇಟ್ಟಿದೆ. ಉದ್ಯಮಿಗಳು, ವ್ಯಾಪಾರಸ್ಥರಿಗೆ ಅನುಕೂಲವಾಗುವ ರೀತಿಯಲ್ಲಿಜಿಎಸ್ಟಿ ಜಾರಿಗೆ ತರಲಾಗಿದೆ. ಜನಾಭಿಪ್ರಾಯ ಪಡೆದು ತೆರಿಗೆ ಪ್ರಮಾಣದಲ್ಲಿಹಲವು ಸುಧಾರಣೆ ಮಾಡಲಾಗುತ್ತಿದೆ'' ಎಂದರು.

ಕರ್ನಾಟಕಕ್ಕೆ ತಾರತಮ್ಯ ಇಲ್ಲ
''ಪ್ರವಾಹ ಪೀಡಿತ ಎಲ್ಲರಾಜ್ಯಗಳನ್ನು ಸಮಾನ ದೃಷ್ಟಿಯಿಂದ ನೋಡಲಾಗುತ್ತಿದೆ. ಕೇಂದ್ರದಿಂದ ಯಾವುದೇ ತಾರತಮ್ಯ ಮಾಡುತ್ತಿಲ್ಲ. ಕರ್ನಾಟಕಕ್ಕೆ ಸಿಗಬೇಕಾದ ಪರಿಹಾರ ಆದಷ್ಟು ಬೇಗ ಬಿಡುಗಡೆಯಾಗಲಿದೆ'' ಎಂದು ತಿಳಿಸಿದರು.

ದೇಶದ ಆರ್ಥಿಕ ಪರಿಸ್ಥಿತಿ ಕುರಿತು ಸಂಸದ ಸುಬ್ರಮಣ್ಯಸ್ವಾಮಿ ಮಾಡಿರುವ ಟೀಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಚಿವರು, ''ಪ್ರಜಾಪ್ರಭುತ್ವದಲ್ಲಿಎಲ್ಲರಿಗೂ ತಮ್ಮ ಅಭಿಪ್ರಾಯ ಹೇಳಲು ಅವಕಾಶವಿದೆ. ಇದು ಪ್ರಜಾಪ್ರಭುತ್ವದ ಸೌಂದರ್ಯವನ್ನು ಎತ್ತಿ ತೋರಿಸುತ್ತದೆ'' ಎಂದು ನಗುತ್ತಲೇ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿಶಾಸಕ ಅರವಿಂದ ಬೆಲ್ಲದ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ