ಧಾರವಾಡ : ಜೀವನವನ್ನು ಮಾರ್ಪಡಿಸುವ ಶಕ್ತಿ ಶಿಕ್ಷ ಣಕ್ಕಿದೆ. ಅದಕ್ಕಾಗಿ ಕಲಿಕಾ ಹಂತದಲ್ಲಿ ವಿದ್ಯಾರ್ಥಿಗಳು ಅನ್ಯ ಸಂಗತಿಗಳ ಕಡೆಗೆ ಗಮನಹರಿಸಬಾರದು ಎಂದು ಸಾರ್ವಜನಿಕ ಶಿಕ್ಷ ಣ ಇಲಾಖೆಯ ಅಪರ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ಹೇಳಿದರು.
ನಗರದ ಆಲೂರ ವೆಂಕಟರಾವ ಸಭಾಭವನದಲ್ಲಿ ಶ್ರೀ ಸಾಯಿ ಎಜ್ಯುಕೇಶನಲ್ ಟ್ರಸ್ಟ್ನ ಶ್ರೀ ಸಾಯಿ ಪದವಿ ಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ 2019-20ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಬುಧವಾರ ಚಾಲನೆ ನೀಡಿ ಮಾತನಾಡಿದರು.
ಇಂದಿನ ವೈಜ್ಞಾನಿಕ ಯುಗದಲ್ಲಿ ಅಧ್ಯಯನಕ್ಕೆ ಅನೇಕ ಸಾಧನೆ-ಸಲಕರಣೆಗಳಿವೆ. ಅವುಗಳ ಸಮರ್ಪಕ ಬಳಕೆಯಲ್ಲಿ ಜಾಣ್ಮೆ ಅವಶ್ಯ. ಸಾಧಿಸುವ ಯುವ ಸಮುದಾಯಕ್ಕೆ ಇಂದಿನ ಸಮಾಜದಲ್ಲಿ ಸಾಕಷ್ಟು ಕ್ಷೇತ್ರಗಳಲ್ಲಿ ಅವಕಾಶಗಳಿವೆ. ಜಗತ್ತು ಯುವ ಸಮುದಾಯದ ಮೇಲೆ ಅಪಾರ ಪ್ರಮಾಣದ ನಿರೀಕ್ಷೆ ಹೊಂದಿದ್ದು,ವಿದ್ಯಾರ್ಥಿಗಳು ವೈಜ್ಞಾನಿಕ ಮತ್ತು ವೈಚಾರಿಕ ದೃಷ್ಠಿಕೋನ ಅಳವಡಿಸಿಕೊಳ್ಳಬೇಕು ಎಂದರು.
ಮುಖ್ಯ ಅತಿಥಿ ಹಿರಿಯ ಪತ್ರಕರ್ತ ಪುಂಡಲೀಕ ಹಡಪದ ಮಾತನಾಡಿ, ವಿದ್ಯಾರ್ಥಿಗಳು ತಮ್ಮಲ್ಲಿನ ಕೀಳರಿಮೆ ತೊರೆದು ಉನ್ನತ ಸ್ಥಾನಕ್ಕೇರಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಸಾಧನೆಯ ಹಾದಿಯಲ್ಲಿ ಎದುರಾಗುವ ಅಡೆತಡೆ ಸಮರ್ಥ ನಿಭಾಯಿಸುವ ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು ಎಂದರು.
ಅಧ್ಯಕ್ಷ ತೆ ವಹಿಸಿದ್ದ ಶ್ರೀ ಸಾಯಿ ಎಜ್ಯುಕೇಶನಲ್ ಟ್ರಸ್ಟ್ನ ಅಧ್ಯಕ್ಷ ಡಾ.ವೀಣಾ ಬಿರಾದಾರ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷ ಣಿಕ ಪ್ರಗತಿಗೆ ಎಲ್ಲ ಸೌಕರ್ಯ ಕಾಲೇಜಿನಲ್ಲಿ ಒದಗಿಸಲಾಗುತ್ತಿದ್ದು, ವಿದ್ಯಾರ್ಥಿಗಳ ವೈಯಕ್ತಿಕ ಸಮಸ್ಯೆ ನಿವಾರಿಸಲು ಬೋಧಕರು ನಿತ್ಯ ಶ್ರಮಿಸುತ್ತಿದ್ದಾರೆ ಎಂದರು.
ಇದೇ ವೇಳೆ ಹೊಂಬೆಳಕು ಫೌಂಡೇಶನ್ ವತಿಯಿಂದ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು. ಪ್ರೊ.ಎಸ್.ವಿ.ಗಾಡಿ, ಪ್ರೊ.ಶಾಂತಯ್ಯ ಗುರುಮಠ, ಸುದೀಪ ಚನ್ನಳ್ಳಿ ಉಪಸ್ಥಿತರಿದ್ದರು. ಪ್ರೊ.ನಾಗರಾಜ ಶಿರೂರ ಪ್ರಾಸ್ತಾವಿಕ ಮಾತನಾಡಿದರು. ಪ್ರೊ.ಆನಂದ ಪಾಟೀಲ ಸ್ವಾಗತಿಸಿದರು. ಪ್ರೊ. ಬಿ.ವಿ.ಮೋರಂಕರ ಪರಿಚಯಿಸಿದರು. ಪ್ರೊ.ಎಸ್.ಎಂ.ತಾರಿಹಾಳ ನಿರೂಪಿಸಿದರು. ಪ್ರೊ.ಸಾವಿತ್ರಿ ಯರಗುದ್ರಿ ವಂದಿಸಿದರು.
ನಗರದ ಆಲೂರ ವೆಂಕಟರಾವ ಸಭಾಭವನದಲ್ಲಿ ಶ್ರೀ ಸಾಯಿ ಎಜ್ಯುಕೇಶನಲ್ ಟ್ರಸ್ಟ್ನ ಶ್ರೀ ಸಾಯಿ ಪದವಿ ಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ 2019-20ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಬುಧವಾರ ಚಾಲನೆ ನೀಡಿ ಮಾತನಾಡಿದರು.
ಇಂದಿನ ವೈಜ್ಞಾನಿಕ ಯುಗದಲ್ಲಿ ಅಧ್ಯಯನಕ್ಕೆ ಅನೇಕ ಸಾಧನೆ-ಸಲಕರಣೆಗಳಿವೆ. ಅವುಗಳ ಸಮರ್ಪಕ ಬಳಕೆಯಲ್ಲಿ ಜಾಣ್ಮೆ ಅವಶ್ಯ. ಸಾಧಿಸುವ ಯುವ ಸಮುದಾಯಕ್ಕೆ ಇಂದಿನ ಸಮಾಜದಲ್ಲಿ ಸಾಕಷ್ಟು ಕ್ಷೇತ್ರಗಳಲ್ಲಿ ಅವಕಾಶಗಳಿವೆ. ಜಗತ್ತು ಯುವ ಸಮುದಾಯದ ಮೇಲೆ ಅಪಾರ ಪ್ರಮಾಣದ ನಿರೀಕ್ಷೆ ಹೊಂದಿದ್ದು,ವಿದ್ಯಾರ್ಥಿಗಳು ವೈಜ್ಞಾನಿಕ ಮತ್ತು ವೈಚಾರಿಕ ದೃಷ್ಠಿಕೋನ ಅಳವಡಿಸಿಕೊಳ್ಳಬೇಕು ಎಂದರು.
ಮುಖ್ಯ ಅತಿಥಿ ಹಿರಿಯ ಪತ್ರಕರ್ತ ಪುಂಡಲೀಕ ಹಡಪದ ಮಾತನಾಡಿ, ವಿದ್ಯಾರ್ಥಿಗಳು ತಮ್ಮಲ್ಲಿನ ಕೀಳರಿಮೆ ತೊರೆದು ಉನ್ನತ ಸ್ಥಾನಕ್ಕೇರಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಸಾಧನೆಯ ಹಾದಿಯಲ್ಲಿ ಎದುರಾಗುವ ಅಡೆತಡೆ ಸಮರ್ಥ ನಿಭಾಯಿಸುವ ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು ಎಂದರು.
ಅಧ್ಯಕ್ಷ ತೆ ವಹಿಸಿದ್ದ ಶ್ರೀ ಸಾಯಿ ಎಜ್ಯುಕೇಶನಲ್ ಟ್ರಸ್ಟ್ನ ಅಧ್ಯಕ್ಷ ಡಾ.ವೀಣಾ ಬಿರಾದಾರ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷ ಣಿಕ ಪ್ರಗತಿಗೆ ಎಲ್ಲ ಸೌಕರ್ಯ ಕಾಲೇಜಿನಲ್ಲಿ ಒದಗಿಸಲಾಗುತ್ತಿದ್ದು, ವಿದ್ಯಾರ್ಥಿಗಳ ವೈಯಕ್ತಿಕ ಸಮಸ್ಯೆ ನಿವಾರಿಸಲು ಬೋಧಕರು ನಿತ್ಯ ಶ್ರಮಿಸುತ್ತಿದ್ದಾರೆ ಎಂದರು.
ಇದೇ ವೇಳೆ ಹೊಂಬೆಳಕು ಫೌಂಡೇಶನ್ ವತಿಯಿಂದ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು. ಪ್ರೊ.ಎಸ್.ವಿ.ಗಾಡಿ, ಪ್ರೊ.ಶಾಂತಯ್ಯ ಗುರುಮಠ, ಸುದೀಪ ಚನ್ನಳ್ಳಿ ಉಪಸ್ಥಿತರಿದ್ದರು. ಪ್ರೊ.ನಾಗರಾಜ ಶಿರೂರ ಪ್ರಾಸ್ತಾವಿಕ ಮಾತನಾಡಿದರು. ಪ್ರೊ.ಆನಂದ ಪಾಟೀಲ ಸ್ವಾಗತಿಸಿದರು. ಪ್ರೊ. ಬಿ.ವಿ.ಮೋರಂಕರ ಪರಿಚಯಿಸಿದರು. ಪ್ರೊ.ಎಸ್.ಎಂ.ತಾರಿಹಾಳ ನಿರೂಪಿಸಿದರು. ಪ್ರೊ.ಸಾವಿತ್ರಿ ಯರಗುದ್ರಿ ವಂದಿಸಿದರು.