ಆ್ಯಪ್ನಗರ

ಭೂಸುಧಾರಣೆ ತಿದ್ದುಪಡಿ ರದ್ದುಪಡಿಸಲು ಒತ್ತಾಯ

ಹುಬ್ಬಳ್ಳಿ: ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದಿರುವ ವಿದೇಯಕವನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಧಾರವಾಡ ಜಿಲ್ಲಾಕರ್ನಾಟಕ ದಲಿತ ವಿಮೋಚನಾ ಸಮಿತಿ ಸೋಮವಾರ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು.

Vijaya Karnataka 23 Jun 2020, 5:00 am
ಹುಬ್ಬಳ್ಳಿ: ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದಿರುವ ವಿದೇಯಕವನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಧಾರವಾಡ ಜಿಲ್ಲಾಕರ್ನಾಟಕ ದಲಿತ ವಿಮೋಚನಾ ಸಮಿತಿ ಸೋಮವಾರ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು.
Vijaya Karnataka Web 22 VIJU 8_21
ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದಿರುವ ವಿದೇಯಕವನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಧಾರವಾಡ ಜಿಲ್ಲಾಕರ್ನಾಟಕ ದಲಿತ ವಿಮೋಚನಾ ಸಮಿತಿ ಪದಾಧಿಕಾರಿಗಳು ಸೋಮವಾರ ಹುಬ್ಬಳ್ಳಿ ತಹಸೀಲ್ದಾರ್‌ ಮೂಲಕ ಮನವಿ ಸಲ್ಲಿಸಿದರು.


ಈ ಕಾಯ್ದೆಯಲ್ಲಿಬಂಡವಾಳ ಶಾಹಿಗಳು, ಉದ್ದಿಮೆದಾರರು, ವರ್ತಕರು, ಭೂ ಮಾಫೀಯಾದವರು ಹಾಗೂ ಉನ್ನತ ಮಟ್ಟದ ಅಧಿಕಾರಿಗಳು ಬಡ ಹಾಗೂ ಸಣ್ಣ ವರ್ಗದ ರೈತರ ಭೂಮಿಯನ್ನು ಖರೀದಿಸಿ ಕಾರ್ಪೋರೇಟ್‌ ಅಗ್ರಿಕಲ್ಚರ್‌ ಹುಟ್ಟು ಹಾಕುವ ಮೂಲಕ ರೈತರನ್ನು ನಿರ್ಗತಿಕರನ್ನಾಗಿ ಮಾಡುವ ಹುನ್ನಾರ ಅಡಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಗ್ರಾಮೀಣ ಪ್ರದೇಶದ ರೈತರು ಭೂಮಿಯನ್ನು ಕಳೆದುಕೊಂಡು ಶಹರಗಳತ್ತ ಗುಳೆ ಹೋಗುವ ಹಾಗೂ ಬಂಡವಾಳ ಶಾಹಿಗಳ ಕೈಕೆಳಗೆ ದುಡಿಸಿಕೊಳ್ಳುವ ಪ್ರವೃತ್ತಿಯನ್ನು ಬಿಜೆಪಿ ಸರಕಾರ ಹುಟ್ಟು ಹಾಕಿದೆ. ರೈತ ಸಮುದಾಯಕ್ಕೆ ಮಾರಕವಾದ ಈ ಕಾಯ್ದೆಯನ್ನು ಕೂಡಲೇ ರದ್ದುಪಡಿಸಬೇಕು. ಇಲ್ಲವಾದರೆ, ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಇದೇ ಸಂದರ್ಭದಲ್ಲಿಬೇಡಿಕೆ ಮನವಿಯನ್ನು ತಹಸೀಲ್ದಾರ್‌ ಮೂಲಕ ಸರಕಾರಕ್ಕೆ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿಸಮಿತಿ ಜಿಲ್ಲಾಸಂಘಟನಾ ಸಂಚಾಲಕ ಓಂ ನಮ ಶಿವಾಯ ಎಸ್‌. ವೀರಾಪುರ, ರವಿ ಕವಲಗಿ, ಮೌನೇಶ ಮೇತ್ರಿ, ದೀಪು ಇಂಗಳಹಳ್ಳಿ, ಹುಲಗಪ್ಪ ಸತ್ತಿಗೇರಿ, ತಿರುಪತಿ ವೀರಾಪೂರ, ಉಮೇಶ ನವಲಗುಂದ, ದೇವರಾಜ ಇಂಗಳಗಿ, ಮಂಜುನಾಥ ರಣತೂರ ಸೇರಿದಂತೆ ಅನೇಕರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ