ಆ್ಯಪ್ನಗರ

ಪಾಲಿಕೆ ಗುತ್ತಿಗೆ ಪೌರ ಕಾರ್ಮಿಕರ ನೇರ ನೇಮಕಾತಿಗೆ ಒತ್ತಾಯ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಗುತ್ತಿಗೆ ಪೌರಕಾರ್ಮಿಕರಿಗೆ ನೇರನೇಮಕಾತಿ ಹಾಗೂ ನೇರವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸೆ. 23 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಟಾವಧಿ ಆಮರಣ ಉಪವಾಸ ಸತ್ಯಾಗ್ರಹ

Vijaya Karnataka 22 Sep 2020, 5:00 am
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಗುತ್ತಿಗೆ ಪೌರಕಾರ್ಮಿಕರಿಗೆ ನೇರನೇಮಕಾತಿ ಹಾಗೂ ನೇರವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸೆ. 23 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಟಾವಧಿ ಆಮರಣ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘದ ಉಪಾಧ್ಯಕ್ಷ ಗಾಳೆಪ್ಪ ಎ.ಎಚ್‌. ದ್ವಾಸಲಕೇರಿ ತಿಳಿಸಿದರು.
Vijaya Karnataka Web insist on direct recruitment of mucipal contract civilian workers
ಪಾಲಿಕೆ ಗುತ್ತಿಗೆ ಪೌರ ಕಾರ್ಮಿಕರ ನೇರ ನೇಮಕಾತಿಗೆ ಒತ್ತಾಯ


ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದ ಅವರು, ಗುತ್ತಿಗೆ ಪೌರಕಾರ್ಮಿಕರಿಗೆ ನೇರನೇಮಕಾತಿ, ನೇರವೇತನ ಪಾವತಿಸಲು 2018ರಲ್ಲಿಪಾಲಿಕೆಯಲ್ಲಿಠರಾವು ಪಾಸ್‌ ಆಗಿದ್ದು, ಆಯುಕ್ತರು ಆದೇಶ ಮಾಡಿದ್ದಾರೆ. ಅಲ್ಲದೇ ನೇರವೇತನ ಪಾವತಿಸುವಂತೆ ಉಚ್ಚ ನ್ಯಾಯಾಲಯ ಧಾರವಾಡ ಪೀಠ ಆದೇಶವನ್ನು ಹೊರಡಿಸಿದೆ. ಅದರಂತೆ ಅಂದಿನ ಜಿಲ್ಲಾಧಿಕಾರಿ ಎಸ್‌.ಬಿ. ಬೊಮ್ಮನಹಳ್ಳಿ, ದೀಪಾ ಚೋಳನ್‌ ನೇರನೇಮಕಾತಿ, ನೇರವೇತನ ಅನುಷ್ಠಾನಗೊಳಿಸಲಾಗುವುದು ಎಂದು ಪತ್ರ ನೀಡಿದ್ದಾರೆ.ಆದರೆ 2 ವರ್ಷ ಕಳೆದರೂ ಗತಿಸಿದರೂ ನೇರ ವೇತನ ಪಾವತಿಸದೇ ಕಾನೂನುಬಾಹಿರವಾಗಿ ಗುತ್ತಿಗೆದಾರರ ಮೂಲಕ ವೇತನ ಪಾವತಿಸುತ್ತಿದ್ದಾರೆ ಎಂದು ದೂರಿದರು.

ಆಗಸ್ಟ್‌ ತಿಂಗಳಲ್ಲಿನಡೆಸಿದ ಹೋರಾಟಕ್ಕೆ ಸ್ಪಂದಿಸಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು, ಆದೇಶ ಹೊರಡಿಸಿ ಪಾಲಿಕೆ ಆಯುಕ್ತರಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಆದರೆ 1 ತಿಂಗಳು ಕಳೆದರೂ ಜಿಲ್ಲಾಧಿಕಾರಿಗಳ ಭರವಸೆಗಳು ಹುಸಿಯಾಗಿವೆ. ಈ ಹಿನ್ನೆಲೆಯಲ್ಲಿಸೆ. 23 ರಿಂದ ಆಮರಣ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದು, ಕೆಲಸ ನಿಲ್ಲಿಸಿ ಹೋರಾಟ ಮಾಡಲಾಗುವುದು ಎಂದರು. ಗಂಗಮ್ಮ ಸಿದ್ರಾಮಪುರ, ಯಲ್ಲವ್ವ ದೇವರಗುಡಿಹಾಳ, ಚಂದ್ರು ಶಿರಗುಪ್ಪಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ