ಆ್ಯಪ್ನಗರ

ಕಸ ವಿಲೇವಾರಿ ಘಟಕ ಸ್ಥಳಾಂತಕ್ಕೆ ಒತ್ತಾಯ ನಿವಾಸಿಗಳೊಂದಿಗೆ ಪ್ರತಿಭಟನೆ

ಹುಬ್ಬಳ್ಳಿ : ಕಸ ವಿಲೇವಾರಿ ಘಟಕ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸಿ ಬೇರೆ ಕಡೆ ಸ್ಥಳಾಂತರಿಸುವಂತೆ ಒತ್ತಾಯಿಸಿ ಡಿ.15ರಂದು ಬೆಳಗ್ಗೆ 11ಕ್ಕೆ ವಾರ್ಡ್‌ ನಂ.30ರ ಬೆಂಗೇರಿ ಸಂತೆ ಮೈದಾನದಲ್ಲಿ ಉಣಕಲ್‌ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಬೆಂಬಲದೊಂದಿಗೆ ಮತ್ತು ಸ್ಥಳೀಯ ನಿವಾಸಿಗಳೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಸಮಿತಿ ಅಧ್ಯಕ್ಷ ಅಬ್ದುಲ್‌ ವಲಿಅಹ್ಮದ ತಿಳಿಸಿದರು.

Vijaya Karnataka 15 Dec 2018, 5:00 am
ಹುಬ್ಬಳ್ಳಿ : ಕಸ ವಿಲೇವಾರಿ ಘಟಕ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸಿ ಬೇರೆ ಕಡೆ ಸ್ಥಳಾಂತರಿಸುವಂತೆ ಒತ್ತಾಯಿಸಿ ಡಿ.15ರಂದು ಬೆಳಗ್ಗೆ 11ಕ್ಕೆ ವಾರ್ಡ್‌ ನಂ.30ರ ಬೆಂಗೇರಿ ಸಂತೆ ಮೈದಾನದಲ್ಲಿ ಉಣಕಲ್‌ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಬೆಂಬಲದೊಂದಿಗೆ ಮತ್ತು ಸ್ಥಳೀಯ ನಿವಾಸಿಗಳೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಸಮಿತಿ ಅಧ್ಯಕ್ಷ ಅಬ್ದುಲ್‌ ವಲಿಅಹ್ಮದ ತಿಳಿಸಿದರು.
Vijaya Karnataka Web insist on garbage disposal unit disposal protest with residents
ಕಸ ವಿಲೇವಾರಿ ಘಟಕ ಸ್ಥಳಾಂತಕ್ಕೆ ಒತ್ತಾಯ ನಿವಾಸಿಗಳೊಂದಿಗೆ ಪ್ರತಿಭಟನೆ


ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆಂಟ್ರಲ್‌ 73 ವಿಧಾನಸಭೆ ಕ್ಷೇತ್ರದ ವಾರ್ಡ್‌ ನಂ.30 ರ ಸಂತೆ ಮೈದಾನದಲ್ಲಿ ಕಸ ವಿಲೇವಾರಿಯ ಹೊಸ ಮಾದರಿಯ ಕಾಂಪೋಸ್ಟ್‌ ಪ್ರೆಸ್ಸಿಂಕ್‌ ಘಟಕದ ಕಾಮಗಾರಿ ಕೈಗೊಳ್ಳಲಾಗಿದೆ. ಈ ಕಸ ವಿಲೇವಾರಿ ಘಟಕ ನಿರ್ಮಿಸಲು ಆಯ್ದುಕೊಂಡಿರುವ ಸಂತೆ ಮೈದಾನದಲ್ಲಿ ನಿತ್ಯ ಸಾವಿರಾರು ಜನರು ಓಡಾಡುತ್ತಾರೆ. ರಸ್ತೆ ಚಿಕ್ಕದಾಗಿದ್ದರಿಂದ ವಾಹನ ಸಂಚಾರಕ್ಕೆ ಅಡೆತಡೆ ಉಂಟಾಗುತ್ತಿದೆ. ಆದ್ದರಿಂದ ಬೇರೆ ಕಡೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದರು.

ಇದೇ ಜಾಗದಲ್ಲಿ ಇಂದಿರಾ ಕ್ಯಾಂಟೀನ್‌ ಇದ್ದು, ಇಲ್ಲಿ ಕಸವಿಲೇವಾರಿ ಘಟಕ ನಿರ್ಮಿಸುವದರಿಂದ ಜನರು ಉಪಹಾರ ಸೇವಿಸಲು ನಿರಾಕರಿಸುತ್ತಾರೆ. ಪ್ರತಿ ವಾರ ಇಲ್ಲಿ ದೊಡ್ಡಮಟ್ಟದಲ್ಲಿ ಸಂತೆ ನಡೆಯುವುದರಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಬರುತ್ತಾರೆ ಅವರೆಲ್ಲರಿಗೂ ಅನಾನುಕೂಲವಾಗುತ್ತದೆ. ಆದ್ದರಿಂದ ಅಧಿಕಾರಿಗಳು ಕಾಮಗಾರಿ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಖಲಂದರ ಮುಲ್ಲಾ, ಪ್ರಕಾಶ ಜಾದವ, ಬಿ.ಕೆ. ಕಲಬುರ್ಗಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ