ಆ್ಯಪ್ನಗರ

ಉಪಚುನಾವಣೆಯಲ್ಲಿ ಜೆಡಿಎಸ್ 6 ರಿಂದ 8 ಸ್ಥಾನ ಗೆಲ್ಲಲಿದೆ: ಎಚ್‌ಡಿ ಕುಮಾರಸ್ವಾಮಿ

“ಮಲ್ಲಿಕಾರ್ಜುನ ಖರ್ಗೆ ಸಿಹಿ ಸುದ್ದಿ ಕೊಡುವುದಾಗಿ ಹೇಳಿದ್ದಾರೆ. ಸಿದ್ದರಾಮಯ್ಯ ನಾನು ಮುಖ್ಯಮಂತ್ರಿಯಾಗುವೆ ಅಂತಾರೆ. ನಾವು ಅಂದುಕೊಂಡಂತೆ ಎಲ್ಲವೂ ನಡೆಯಬೇಕಂತಿಲ್ಲ. ಸಿದ್ದರಾಮಯ್ಯ, ಖರ್ಗೆ, ಮೋಯ್ಲಿ ಅವರದ್ದೇ ಲೆಕ್ಕಾಚಾರದ ಮೇಲೆ ಹೇಳಿಕೆ ನೀಡುತ್ತಿದ್ದಾರೆ,” ಎಂಬುದಾಗಿ ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ಹೇಳಿದರು.

Vijaya Karnataka Web 2 Dec 2019, 2:11 pm

ಹುಬ್ಬಳ್ಳಿ: ಉಪಚುನಾವಣೆಯಲ್ಕಿ ಕಾಂಗ್ರೆಸ್-ಜೆಡಿಎಸ್ ಯಾವುದೇ ಒಳ ಒಪ್ಪಂದ ಮಾಡಿಕೊಂಡಿಲ್ಲ. ಜೆಡಿಎಸ್ 6 ರಿಂದ 8 ಸ್ಥಾನ ಗೆಲ್ಲುವ ವಿಶ್ವಾಸವಿದೆ. ಉಪ ಚುನಾವಣೆಯ ಫಲಿತಾಂಶದಿಂದ ರಾಜ್ಯದಲ್ಲಿ ಅಚ್ಚರಿಯ ಬದಲಾವಣೆ ಆಗಲಿದೆ,” ಎಂಬುದಾಗಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದರು.
Vijaya Karnataka Web HD Kumaraswamy


ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಮಲ್ಲಿಕಾರ್ಜುನ ಖರ್ಗೆ ಸಿಹಿ ಸುದ್ದಿ ಕೊಡುವುದಾಗಿ ಹೇಳಿದ್ದಾರೆ.
ಸಿದ್ದರಾಮಯ್ಯ ನಾನು ಮುಖ್ಯಮಂತ್ರಿಯಾಗುವೆ ಅಂತಾರೆ. ನಾವು ಅಂದುಕೊಂಡಂತೆ ಎಲ್ಲವೂ ನಡೆಯಬೇಕಂತಿಲ್ಲ. ಸಿದ್ದರಾಮಯ್ಯ, ಖರ್ಗೆ, ಮೋಯ್ಲಿ ಅವರದ್ದೇ ಲೆಕ್ಕಾಚಾರದ ಮೇಲೆ ಹೇಳಿಕೆ ನೀಡುತ್ತಿದ್ದಾರೆ,” ಎಂದರು.

ಇದೇ ವೇಳೆ ಶ್ರೀನಿವಾಸ ಪ್ರಸಾದ್ ವಿರುದ್ಧ ವಾಗ್ದಾಳಿ ನಡೆಸಿದ ಎಚ್‌ಡಿಕೆ, “ಶ್ರೀನಿವಾಸ ಪ್ರಸಾದ್‌ಗೆ ಪಕ್ಷದ ಬದಲಿಸಿದ ದೊಡ್ಡ ಅನುಭವ ಇದೆ. ಶ್ರೀನಿವಾಸ ಪ್ರಸಾದ್ ಬಾಯಿ ಚಪಲಕ್ಕೆ ಮಾತನಾಡುವುದು ನಿಲ್ಲಿಸಲಿ. ಅಧಿಕಾರಕ್ಕಾಗಿ ಪಕ್ಷ ಬದಲಿಸಿ ಓಡಾಡುವವರಿಗೆ ನನ್ನ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ,” ಎಂದರು.

ಸಿದ್ದರಾಮಯ್ಯ ಜತೆ ಯಾರ್ರೀ ಹೋಗ್ತಾರೆ? ಮೈತ್ರಿ ಬಗ್ಗೆ ದೇವೇಗೌಡರ ಪ್ರಶ್ನೆ!

“ಬಿಜೆಪಿ, ಕಾಂಗ್ರೆಸ್‌ನವರು ಸರ್ಕಾರ ಮಾಡಲು ನಮ್ಮನ್ನೇ ಹುಡುಕಿಕೊಂಡು ಬಂದ್ರು. ಅವರು ಸಂಕಷ್ಟಕ್ಕೀಡಾದಾಗ ನಮ್ಮನ್ನು ಬಳಸಿಕೊಳ್ತಾರೆ. ನಮ್ಮ ಕೊಡೆಯ ಕೆಳಗೆ ಕಾಂಗ್ರೆಸ್-ಬಿಜೆಪಿ ಆಶ್ರಯ ಪಡೆದಿದ್ದರು,” ಎಂದು ಕುಮಾರಸ್ವಾಮಿ ಹೇಳಿದರು.

"ನನಗೆ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಇಚ್ಛೆ ಇಲ್ಲ. ನಾನು ಮಾಡಿದ ಅಭಿವೃದ್ಧಿ ಕೆಲಸಗಳ ಬಗ್ಗೆ ಯಾರೊಬ್ಬರೂ ಮಾತನಾಡುತ್ತಿಲ್ಲ. ನನ್ನ ಕೆಲಸದ ಬಗ್ಗೆ ನಮ್ಮವರು, ಕಾಂಗ್ರೆಸ್ ಯಾರೂ ಮಾತನಾಡಲಿಲ್ಲ,” ಎಂಬುದಾಗಿ ಜೆಡಿಎಸ್-ಕಾಂಗ್ರೆಸ್ ಬಗ್ಗೆಎಚ್‌ಡಿಕೆ ಅಸಮಧಾನ ಹೊರಹಾಕಿದರು.

"25 ಸಾವಿರ ಕೋಟಿ ರೂಪಾಯಿ ರೈತರ ಸಾಲ ಮನ್ನಾ ಮಾಡಿದೆ. ಕಾಂಗ್ರೆಸ್ ಶಾಸಕರುಗಳ‌ ಕ್ಷೇತ್ರಗಳಿಗೆ 19 ಸಾವಿರ‌ ಕೋಟಿ‌ ರೂಪಾಯಿ ಕೊಟ್ಟಿದ್ದೆ. ರಾಜ್ಯ ರಾಜಕೀಯದಲ್ಲಿ ಏನು ಬೇಕಾದರೂ ಬದಲಾವಣೆ ಆಗಬಹುದು. ಡಿಸೆಂಬರ್ 9 ರ ನಂತರ ಎಲ್ಲವೂ ಗೊತ್ತಾಗುತ್ತೆ‌. ಅಪ್ಪ ಮಕ್ಕಳ‌ ಪಕ್ಷವನ್ನು ಮನೆಗೆ ಕಳಿಸುವುದಾಗಿ ಹೇಳಿದ್ದ ಎಲ್ಲರೂ ಮನೆಗೆ ಹೋಗಿದ್ದಾರೆ. ರಮೇಶ್ ಜಾರಕಿಹೊಳಿ ಸಹ ಮನೆಗೆ ಹೋಗ್ತಾರೆ," ಎಂದು ಹೇಳಿದರು.



ವಿಮಾನ ನಿಲ್ದಾಣದಲ್ಲಿ ಇದೇ ವೇಳೆ ಅನಿರೀಕ್ಷಿತವಾಗಿ ಡಿಕೆ ಶಿವಕುಮಾರ್‌ ಮತ್ತು ಎಚ್‌ಡಿ ಕುಮಾರಸ್ವಾಮಿ ಭೇಟಿಯಾಗಿ ಉಭಯ ಕುಶಲೋಪರಿ ನಡೆಸಿದರು. ಈ ಸಂದರ್ಭದಲ್ಲಿ ಶಿವಕುಮಾರ್‌ಗೆ ಐಟಿ ನೋಟಿಸ್ ನೀಡಿದ ವಿಚಾರದಲ್ಲಿ ಪ್ರತಿಕ್ರಿಯಿಸಿದ ಅವರು, “ಬಿಜೆಪಿ ಅಧಿಕಾರ‌ ದುರ್ಬಳಕೆ ಮಾಡಿಕೊಂಡು ನೋಟಿಸ್ ಕೊಡಿಸುತ್ತಿದೆ. ಚುನಾವಣೆ ಸಂದರ್ಭದಲ್ಲಿ ನೋಟೀಸ್ ನೀಡುವ ಅಗತ್ಯವಿರಲಿಲ್ಲ. ಚುನಾವಣೆ ಮುಗಿಯುವವರೆಗೂ ಅವಕಾಶ ಕೊಡಬೇಕಿತ್ತು,” ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ